Home / ಕವನ / ಕವಿತೆ / ಅವತಾರಿ ಬರುತ್ತಾನೆ

ಅವತಾರಿ ಬರುತ್ತಾನೆ

ಅವನು ಬರುತ್ತಾನೆ
ಮಾತುಗಳ ಮಾಲೆಹಾಕಿಕೊಂಡು ಮೌನದ ಬೇಲಿ ಸುತ್ತಿಕೊಂಡು
ತನ್ನ ಪರಾಕು ಪಂಪ ತಾನೇ ಒತ್ತಿಕೊಳ್ಳುತ್ತ ಅಥವಾ ಒತ್ತಿಸಿಕೊಳ್ಳುತ್ತ
ತಲೆ ನಿಗುರಿಸಿ ಎದೆ ಉಬ್ಬಿಸಿ ಬಿಮ್ಮನೆ ಬೀಗಿ ಬರುತ್ತಾನೆ
ಮಾತಿನ ಹೊಳೆಯಲ್ಲಿ ಮಂತ್ರ ಮಹಾರಾಜರ ತೇಲಿಸಿ ಮುಳುಗಿಸುತ್ತ
ಬಾಯ ಒರಳಲ್ಲಿ ಹಿರಿಯರನರೆದಾಡುತ್ತ

ಹಲ್ಲ ತೀಟೆಯಲ್ಲಿ ಕಿರಿಯರ ಕೊರೆದು ಸಣ್ಣ ಮಾಡುತ್ತ
ಮೂಗಿನ ನೇರಕ್ಕೆ ಜಗವನಳೆದು ಸೀನಿ ಸುರಿಯುತ್ತ
ಬಡಾಯಿ ಬಾಹುಗಳ ಉದ್ದಗಲಗಳಿಗೆ ಚಾಚಿ ತಬ್ಬಿ
ಹೂಟ್ಟೆಯುಬ್ಬರ ತೋರುತ್ತ ತನ್ನಪ್ಪನೊಬ್ಬನೇ ಪರಮ ಪುರುಷ
ತನ್ನವಗವಳೊಬ್ಬಳೇ ಜಗಮೀರಿದ ಗರತಿ ಎನುತ್ತ

ತನ್ನ ವಂಶ ವೃಕ್ಷಕ್ಕೆ ಅನಾದಿ ಬೀಜದ ಪಾವಿತ್ರ್ಯ ತೋರುತ್ತ
ಹಗಲಿನ ಮುಖಕ್ಕೆ ಕೊಳ್ಳಿ ತೋರಿಸುತ್ತ
ವಿಶ್ವಗೂಢತೆಯ ರೋಮರೋಮಗಳಲ್ಲಿ ತುಂಬಿಕೊಂಡು
ತಾನು ಕುಡಿದೊಂದೆರಡು ಬಾವಿಗಳಲ್ಲಿ ಸಾಗರಗಳ ಮುಕ್ಕಳಿಸುತ್ತ
ತನ್ನ ಬಾಯಲ್ಲೀರೇಳು ಲೋಕಗಳ ಬಿಂಬಿಸಿ
ಕೃಪಾಪೋಷಕ ನಗೆಯಿಂದ ಜಗವ ಪಾವನಗೊಳಿಸಿ

ನಮ್ಮನು ಉದ್ಧರಿಸುಲು ಬರುತ್ತಾನೆ
ಬಂದು ನಿಂತು ಜಗದಗಲ ಮುಗಿಲಗಲವಾದ
ತನ್ನುದರದಡಿಯಲ್ಲಿ ನಮಗೆ ಕಾವು ಕೊಡುತ್ತಾನೆ
ಬೆಚ್ಚಗಿದೆಯೆಂದು ನಾವು ಆಶ್ರಯ ಪಡೆದೆವೋ ಸರಿ
ಕಪ್ಪ ನೆರಳಪುಟ್ಟಿ ನಮ್ಮ ಮುಚ್ಚಿ
ಉಸಿರುಕಟ್ಟಿ ನಾವು ಮೂಕರಾಗಿ
ಬಿಳಿಚಿಕೊಂಡು ಬೆಪ್ಪರಾದರೆ ಅವನ ತಪ್ಪೇ?

ನೋಡು ಅವನು ಬಂದೇ ಬರುತ್ತಾನೆ
ಬಿಡಿಸಿಕೊಳ್ಳಲು ನೀನು ಯತ್ನಿಸಿದಂತೆಲ್ಲಾ
ಪರಲೋಕಕೇರುವ ಪರಿಪೂರ್ಣ ಪವಾಡದೇಣಿಯಿಂದಾದರೂ
ನಿನ್ನ ಸೆಳೆದು ತನ್ನ ಸುತ್ತಲೇ ಜೇಡನಂತೆ ತಿರುಗಾಡಿಸುತ್ತಾ
ಕೊನೆಗೆ ನಿನ್ನ ನುಂಗಿ ನೀರು ಕುಡಿಯುತ್ತಾನೆ
ಸೋಹಮ್ಮೆಂದು ನಿನ್ನ ಸೊನ್ನೆಯಾಗಿಸುತ್ತಾನೆ
ನೀನು ನೀನಾಗುಳಿಯಬೇಕೆಂದರೆ ದೂರ ಓಡು
ಅಗೋ ಬಂದ! ಬಂದೇ ಬರುತ್ತಾನೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...