Home / ಕವನ / ಕವಿತೆ / ಅವತಾರಿ ಬರುತ್ತಾನೆ

ಅವತಾರಿ ಬರುತ್ತಾನೆ

ಅವನು ಬರುತ್ತಾನೆ
ಮಾತುಗಳ ಮಾಲೆಹಾಕಿಕೊಂಡು ಮೌನದ ಬೇಲಿ ಸುತ್ತಿಕೊಂಡು
ತನ್ನ ಪರಾಕು ಪಂಪ ತಾನೇ ಒತ್ತಿಕೊಳ್ಳುತ್ತ ಅಥವಾ ಒತ್ತಿಸಿಕೊಳ್ಳುತ್ತ
ತಲೆ ನಿಗುರಿಸಿ ಎದೆ ಉಬ್ಬಿಸಿ ಬಿಮ್ಮನೆ ಬೀಗಿ ಬರುತ್ತಾನೆ
ಮಾತಿನ ಹೊಳೆಯಲ್ಲಿ ಮಂತ್ರ ಮಹಾರಾಜರ ತೇಲಿಸಿ ಮುಳುಗಿಸುತ್ತ
ಬಾಯ ಒರಳಲ್ಲಿ ಹಿರಿಯರನರೆದಾಡುತ್ತ

ಹಲ್ಲ ತೀಟೆಯಲ್ಲಿ ಕಿರಿಯರ ಕೊರೆದು ಸಣ್ಣ ಮಾಡುತ್ತ
ಮೂಗಿನ ನೇರಕ್ಕೆ ಜಗವನಳೆದು ಸೀನಿ ಸುರಿಯುತ್ತ
ಬಡಾಯಿ ಬಾಹುಗಳ ಉದ್ದಗಲಗಳಿಗೆ ಚಾಚಿ ತಬ್ಬಿ
ಹೂಟ್ಟೆಯುಬ್ಬರ ತೋರುತ್ತ ತನ್ನಪ್ಪನೊಬ್ಬನೇ ಪರಮ ಪುರುಷ
ತನ್ನವಗವಳೊಬ್ಬಳೇ ಜಗಮೀರಿದ ಗರತಿ ಎನುತ್ತ

ತನ್ನ ವಂಶ ವೃಕ್ಷಕ್ಕೆ ಅನಾದಿ ಬೀಜದ ಪಾವಿತ್ರ್ಯ ತೋರುತ್ತ
ಹಗಲಿನ ಮುಖಕ್ಕೆ ಕೊಳ್ಳಿ ತೋರಿಸುತ್ತ
ವಿಶ್ವಗೂಢತೆಯ ರೋಮರೋಮಗಳಲ್ಲಿ ತುಂಬಿಕೊಂಡು
ತಾನು ಕುಡಿದೊಂದೆರಡು ಬಾವಿಗಳಲ್ಲಿ ಸಾಗರಗಳ ಮುಕ್ಕಳಿಸುತ್ತ
ತನ್ನ ಬಾಯಲ್ಲೀರೇಳು ಲೋಕಗಳ ಬಿಂಬಿಸಿ
ಕೃಪಾಪೋಷಕ ನಗೆಯಿಂದ ಜಗವ ಪಾವನಗೊಳಿಸಿ

ನಮ್ಮನು ಉದ್ಧರಿಸುಲು ಬರುತ್ತಾನೆ
ಬಂದು ನಿಂತು ಜಗದಗಲ ಮುಗಿಲಗಲವಾದ
ತನ್ನುದರದಡಿಯಲ್ಲಿ ನಮಗೆ ಕಾವು ಕೊಡುತ್ತಾನೆ
ಬೆಚ್ಚಗಿದೆಯೆಂದು ನಾವು ಆಶ್ರಯ ಪಡೆದೆವೋ ಸರಿ
ಕಪ್ಪ ನೆರಳಪುಟ್ಟಿ ನಮ್ಮ ಮುಚ್ಚಿ
ಉಸಿರುಕಟ್ಟಿ ನಾವು ಮೂಕರಾಗಿ
ಬಿಳಿಚಿಕೊಂಡು ಬೆಪ್ಪರಾದರೆ ಅವನ ತಪ್ಪೇ?

ನೋಡು ಅವನು ಬಂದೇ ಬರುತ್ತಾನೆ
ಬಿಡಿಸಿಕೊಳ್ಳಲು ನೀನು ಯತ್ನಿಸಿದಂತೆಲ್ಲಾ
ಪರಲೋಕಕೇರುವ ಪರಿಪೂರ್ಣ ಪವಾಡದೇಣಿಯಿಂದಾದರೂ
ನಿನ್ನ ಸೆಳೆದು ತನ್ನ ಸುತ್ತಲೇ ಜೇಡನಂತೆ ತಿರುಗಾಡಿಸುತ್ತಾ
ಕೊನೆಗೆ ನಿನ್ನ ನುಂಗಿ ನೀರು ಕುಡಿಯುತ್ತಾನೆ
ಸೋಹಮ್ಮೆಂದು ನಿನ್ನ ಸೊನ್ನೆಯಾಗಿಸುತ್ತಾನೆ
ನೀನು ನೀನಾಗುಳಿಯಬೇಕೆಂದರೆ ದೂರ ಓಡು
ಅಗೋ ಬಂದ! ಬಂದೇ ಬರುತ್ತಾನೆ.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್