ಹಾಳಿ ಹಡಗ

ತೇಲಿಬಿಡುವೆನು ಹಾಳಿ ಹಡಗಗಳ, ಹುಡುಗರಾ-
ಟದೊಳೆಂತು ಅಂತು, ಕಾರ್‍ಮೋಡ ಕತ್ತಲೆ ಕವಿದ
ಹೊತ್ತು ಹೊರಪಾಗಿ ಬೆಳಗುವವರೆಗೆ, ಮನೆಯ ಕಸ-
ವನೆ ಸರಕು ಮಾಡಿ; ಕೆರೆಕಾಲುವೆಯನೊಂದು ಗೊಳಿ-
ಸುವ ಜಲಾದ್ವೈತದೀ ಕೆಂಪು ಹೊಳೆಯಲಿ, ಹಳ್ಳ-
ಹಿಡಿದು ಹೋಗಲಿ. ಹುಚ್ಚು ಮಳೆಗಾಳಿಗಳಿಗೀಡೆ
ಹುಲು ಹಡಗ? ಲಾಭ ಹಾನಿಯ ಲೆಕ್ಕ ಹೊತ್ತಿಗೆಯೊ-
ಳಿರಲಿ, ಬೆರಗಲಿ ಮೆಚ್ಚಿ ಕುಣಿದಾಡಿದುದೆ ಬಂತು.

ಒಡಲು ಉಡಿಗೆಗಳಂತೆ ಮಾಸಿ ಪಿಸಿವದು; ಉಸಿರು
ಹಸಿವೆ ನೀರಡಿಕೆಯಲಿ ಕುಸಿಯುವದು; ಬಗೆಯು ಗಂ-
ಧರ್‍ವನಗರಗಳನ್ನು ಕಟ್ಟಿ, ಬರಿದೊರೆ ಹರಿಸಿ,
ಮುಗಿಲ ಮಲ್ಲಿಗೆಯ ಕೊಯ್ದೀಡಾಡಿ ಮೂಸಿ, ಚಿ-
ತ್ತದ ಭಿತ್ತಿಯಲಿ ಮೂಡಿದಂಥ ಚಿತ್ರಗಳಲ್ಲಿ
ಜೀವಕಳೆದುಂಬಿ, ಸ್ವರ್‍ಗವ ಹಡೆದು ಪಡೆಯುತಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಧ್ಯಾನಕ್ಕೆ ಹುಡುಕಾಟವೇಕೆ?
Next post ಕಡೇ ಆಡು

ಸಣ್ಣ ಕತೆ

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…