Home / ಕಥೆ / ಕಾದಂಬರಿ / ಮಲ್ಲಿ – ೧೩

ಮಲ್ಲಿ – ೧೩

ಬರೆದವರು: Thomas Hardy / Tess of the d’Urbervilles

ರಾಜಕುಮಾರನು ಹೊರಟು ಹೋಗಿ ಇನ್ನೂ ಹದಿನೈದು ದಿನ ವಾಗಿಲ್ಲ. ನಾಯಕನು ಊಟ ಮುಗಿಸಿಕೊಂಡು ದಿವಾನಖಾನೆಯಲ್ಲಿ ಕುಳಿತಿದ್ದಾನೆ. ಮಾದಲದ ಹಣ್ಣು, ಉಪ್ಪು ಹೆಚ್ಚಿದ ಗೋಡಂಬಿ, ಎರಡೂ ತಟ್ಟಿಯಲ್ಲಿ ಎದುರಿಗಿವೆ. ಪೊಸ್ಟ್ ಬಂತು ಎಂದು ಮನೆವಾರ್ತೆ ನಂಜಪ್ಪನು ಬಂದು ಉದ್ದದ ಕವರುಗಳನ್ನು ತಂದಿಟ್ಟ. ಒಂದರ ಮೇಲೆ “ಹಿಸ್ ಮೆಜಸ್ಟ್ರೀಸ್ ಸರ್ವಿಸ್ ಎಂದಿದೆ.’ ಇನ್ನೊಂದರ ಮೇಲೆ “ಆನ್ ಮೈಸೂರ್ ಗವರ್ನ್ಮೆಂಟ್ ಸರ್ವಿಸ್’ ಎಂದಿದೆ ಎರಡೂ ಕಾನ್ಫಿಡೆನ್ಷಿಯಲ್ ಎಂದು ಗುರ್ತು ಆಗಿವೆ. ನಂಜಪ್ಪನು ನಾಯಕನ ಅಪ್ಪಣೆಯಿಂದ ಅವೆರಡನ್ನೂ ಒಡೆದನು. ಒಂದರಲ್ಲಿ “ವೈಸ್ರಾಯರು ತಮಗೆ ರಾವ್ಬಹದ್ದೂರು ಬಿರುದು ದಯಪಾಲಿಸಿದ್ದಾರೆ ಎಂದಿತ್ತು. ಮತ್ತೊಂದರಲ್ಲಿ “ಶ್ರೀಮನ್ಮಹಾರಾಜರು ತಮ್ಮನ್ನು ಈ ಸಲದ ವರ್ಧಂತಿಯ ದರ್ಬಾರಿಗೆ ಆಹ್ವಾನಿಸಬೇಕೆಂದು ವಿಶೇಷವಾದ ಅಪ್ಪಣೆ ಯನ್ನು ದಯಪಾಲಿಸಿದ್ದಾರೆ. ದರ್ಬಾರ್ ಭಕ್ಷಿ” ಎಂದಿತ್ತು.

ನಾಯಕನು ಆ ಕಾಗದಗಳನ್ನು ನೋಡುತ್ತಿರುವಾಗಲೇ ಮಲ್ಲ ಣ್ಣನೂ ಓಡಿ ಬಂದ: “ಬುದ್ಧಿ ತಮ್ಮ ಕರುಣ” ಎಂದು ಒಂದು ಕಾಗದವನ್ನು ತಂದು ಮುಂದಿಟ್ಟು ಅಡ್ಡ ಬಿದ್ದ.

ನಾಯಕನು “ಏನದು? ಮುಲಣ್ಣ ” ಎಂದು ಕೇಳಿದ.

“ಬುದ್ದಿ, ಅರಮನೆಯಿಂದ. ನಿರೂಪ ಬಂದದೆ. ಮಲ್ಲೀಗೆ ತಿಂಗಳಿಗೆ ಹತ್ತು ರೂಪಾಯಿ ಇನ್ನು ಹತ್ತು ವರುಷ ಕೊಡುತೀವಿ ಅಂತೆ ಬರದದೆ ಪಾದ!”

“ಯಾಕಂತೆ?”

” ಓದಿಸೋಕಂತೆ ಪಾದ!”

ನಾಯಕನಿಗೆ ಆ ದಿನದಮಾತು ನೆನೆಪಾಯಿತು. * ಸಂತೋಷ ಕಣಪ್ಪ ! ನಿಮ್ಮ ಮಲ್ಲಿ ಏನಂತಾಳೆ?

“ಮಲ್ಲಿ ಅಂತಾಳೆ. ಬುದ್ದಿಯೋರು ನನ್ನ ತೊಡೇಮೇಲೆ ಕೂರಿಸಿ ಕೊಂಡರು. “ಆದಕ್ಕೆ ಇದೆಲ್ಲಾ: ಬುದ್ಧಿಯೋರ ಮನೆಗೇ ಹೋಯ್ತೀನಿ ಅಂತಾಳೆ. ”

“ಹಂಗಾದರೂ ಮಾಡು. ಹೋಗಲಿ, ”

“ಮಲ್ಲಿ ಎನಾದರೂ ಗಂಡುಮೊಗವಾ ? ಎಂದಾದರೂ ಯಾರ ಮನೆಗಾದರೂ ಕಳಸಲೇಬೇಕು. ಪಾದ!”

ಆ ಮಾತಿನಲ್ಲಿ ನಾಯಕನಿಗೆ ಏನೋ ಸಂತೋಷವಾಯಿತು. ಆದರೂ “ಇನ್ನೇನು ಮಲ್ಲಣ್ಣ ಹೋಗಿ ಮಲ್ಲೇಗೌಡನಾದೆಯಲ್ಲೋ ! ಅರಮನೆಯಿಂದ ತಿಂಗಳಿಗೆ ಹತ್ತು ರೂಪಾಯಿ! ಯಾರಿಗುಂಟು ಯಾರಿಗಿಲ್ಲ! ಏನು ನಂಜಪ್ಟ್ಪ !”

“ಹೌದು ಬುದ್ದಿ; ರೂಪಾಯಿಗಿಂತ ಅರಮನೆ ಮರ್ಯಾದೆ ! ಅದು ನಿಜವಾಗಿಯೂ ಒಳ್ಳೇ ನಸೀಬು!”

“ನಾವು ಆ ಅರಮನೆ ಕಾಣೋ! ನಾವು ಕಂಡಿರೋದು ಈ ಅರಮನೆ! ಮಲ್ಲಿ ಹಣೆಬರೆಹ ಚೆನ್ನಾಗಿದ್ದು, ಬುದ್ದಿಯವರು ನಮ್ಮನ್ನ ಕಣ್ಣು ಬಿಟ್ಟು ನೋಡಿದರೆ, ಮಲ್ಲೀಗೆ ಈ ಹತ್ತು ರೂಪಾಯೇನಾ! ಒಂದು ಅರಮನೆ ಆಗೋಳಿಲ್ವಾ ?”

ಆ ಮಾತು ಕೇಳಿ ನಾಯಕನಿಗೆ ಏನೋ ಒಳಗೆ ಗುಟ್ಟಾಗಿ ಬೆಕ್ಕು ಕೆರೆದ ಹಾಗಾಯಿತು. “ಯಾವಾಗ ಇವನು ನನ್ನ ಮನಸ್ಸಿ ನಲ್ಲಿರುವುದನ್ನು ಕಂಡು ಕೊಂಡನೋ!” ಎಂದು ಕೊಂಚ ಗಾಬರಿಯಾಯಿತು. ಆದರೆ ಆ ಗಾಬರಿ ನಾಯಕನ ಮನಸ್ಸಿನ ಧೀರ ತನದಲ್ಲಿ ಗಂಗೆಯಲ್ಲಿ ತೇಲಿದ ಇಂಗಿನಂತಾಯಿತು. *****
*****
ಮುಂದುವರೆಯುವುದು

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...