ಕನ್ನಡ ತೇರು

ಕನ್ನಡ ತಾಯ್ ಹೊನ್ನ
ತೇರ ಎಳೆಯ ಬನ್ನಿ
ಕನ್ನಡದಾ ಭಾವದೆಳೆಯ
ಸಸಿಯ ನೆಡ ಬನ್ನಿ ||

ವನಸ್ತೋಮಗಣಮತ
ಮಾನವತೆಯ ತೆನೆಯ ಬೆಳೆಸಿ
ಹಸಿದ ಜೀವಂತ ದಾಳದ
ಹಸಿರಾಗ ಬನ್ನಿ||

ವ್ಯೋಮ ಕೂಟವನು ನಿಲ್ಲಿಸಿ
ಹಾಲ್ಗಡಲ ಮಥಿಸಿ
ಐಕ್ಯ ಭಾವದೆಳೆಯ ಜೀವ
ಕೋಟಿ ಮೂರ್ತಉದಿಸ ಬನ್ನಿ||

ಮನ ಮರ್ಮತೆಯ
ಬಿಗುಮಾನ ಬತ್ತಳಿಕೆಯ
ಅಭಿಮಾನದಿಂ ಮುರಿದೊಳೆದು
ದೈ ನ್ಯತೆಯ ಸ್ವರವಾಗಿ ಬನ್ನಿ||

ಮಹೋನ್ನತದಾಸೆರೆಯಲಿ
ಪಥವೇರಿನಿಂದು ಪ್ರೇಮ
ಕೆಳೆಯ ವಸುಂಧರೆ
ದೀವಿಗೆಯ ಕಿರಣರಾಗ ಬನ್ನಿ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಧೂರ್‍ತ ಒರಟು ಮುದುಕ
Next post ಸಿಡಿಲು

ಸಣ್ಣ ಕತೆ

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಕುಟೀರವಾಣಿ

    ಪೀಠಿಕೆ ನನ್ನ ಬಡಗುಡಿಸಲ ಹೆಸರು "ಆನಂದಕುಟೀರ". ಒಂದು ದಿನ ನಡುಮಧ್ಯಾಹ್ನ. ಕುಟೀರದೊಳಗೆ ಮುರುಕು ಕಿಟಿಕಿಯ ಹತ್ತಿರ ಕುಳಿತು, ಹೊರಗಿನ ಪ್ರಸಂಚವನು ನೋಡುತಿದ್ದೆ. ಮನಸು ಬೇಸರದಿಂದ ತುಂಬಿ ಹೋಗಿತ್ತು.… Read more…