Home / ಕಥೆ / ಕಿರು ಕಥೆ / ಬಂಗಾರದ ನಾಣ್ಯ

ಬಂಗಾರದ ನಾಣ್ಯ

ಒಂದು ಪರ್ವತದ ತಪ್ಪಲು. ಅಲ್ಲಿ ಒಂದು ಸುಂದರ ತಪೋವನ. ಅಲ್ಲಿ ನೆಲೆಯಾಗಿದ್ದ ಗುರುವಿನ ಬಳಿ ಎರಡು ಮಹಾಮೂರ್ಖರ ಗುಂಪು ವಿದ್ಯೆ ಕಲಿಯಲು ಬರುತಿತ್ತು. ಅವರಲ್ಲಿ ಸ್ವಾರ್ಥ, ಈರ್ಷೆ ತುಂಬಿಕೊಂಡಿತ್ತು. ಎರಡು ಗುಂಪುಗಳು ಒಂದೇ ದಾರಿಯಲ್ಲಿ ಬಂದರು. ಹೆಜ್ಜೆ ಹೆಜ್ಜೆಯಲ್ಲಿ ಘರ್ಷಣೆ ಮಾಡುತ್ತಿದ್ದರು. ಹಾದಿಯಲ್ಲಿ ಬರುವಾಗ ವೃಕ್ಷವನ್ನು ಕಂಡರೆ, ಇದು ಇಬ್ಬರದೂ ಸಮ ಪಾಲೆಂದು ಕತ್ತರಿಸಿ ಭಾಗ ಮಾಡುತ್ತಿದ್ದರು. ಹೂಗಳನ್ನು ಬಳ್ಳಿಗಳನ್ನು ಹರಿದು ಹಂಚಿಕೊಳ್ಳುತ್ತಿದ್ದರು. ನಲಿದಾಡುವ ನವಿಲುಗಳನ್ನು ಹಿಡಿದು ರಕ್ಕೆ ಪುಕ್ಕಗಳನ್ನು, ಕಿತ್ತಿ ಹಂಚಿಕೊಳ್ಳುತ್ತಿದ್ದರು. ಹಾಡುವಹಕ್ಕಿಯ ಕೊರಳನ್ನು ಹಿಚುಕಿ, ನನ್ನದು ರಕ್ಕೆ, ನಿನ್ನದು ಪುಕ್ಕ ಎಂದು ಜಗಳವಾಡುತ್ತಿದ್ದರು. ಬೆಟ್ಟದ ಕಲ್ಲು ಗುಡ್ಡಗಳನ್ನು ಎಣಿಸಿಗುಣಿಸಿ ಭಾಗಮಾಡುತ್ತಿದ್ದರು. ಇಂತಹ ಜಗಳ ಗಂಟ ಗುಂಪಿನ ಶಿಷ್ಯರ ನಡುವೆ ಗುರುಗಳು ಬಂದು “ಹೀಗೆ ಏಕೆ ಕಾದಾಡುತ್ತೀರಿ?”

“ಎಲಾ! ಶಿಷ್ಯರೇ ಇಲ್ಲಿ ಬನ್ನಿ. ಹೇಳಿ.”
“ಆಕಾಶ ಯಾರದು?”
ಶಿಷ್ಯರೆಲ್ಲ ಒಂದು ಧ್ವನಿಯಲ್ಲಿ ಉತ್ತರಿಸಿದರು.
“ಎಲ್ಲರದೂ”
“ಭೂಮಿ ಯಾರದು?”
“ಎಲ್ಲರದೂ”
“ಜಲಪಾತ, ನದಿ, ಸಾಗರ ಯಾರದು?”
“ಎಲ್ಲರದೂ”
“ನಕ್ಷತ್ರ, ಸೂರ್ಯ, ಚಂದ್ರ ಯಾರದು?”
“ಎಲ್ಲರದೂ”
“ನೀರು, ಗಾಳಿ, ಬೆಳಕೂ ಯಾರದು?”
“ಎಲ್ಲರದೂ”
“ಗುರು, ದೈವ, ಜಗತ್ತು ಯಾರದು?”
“ಎಲ್ಲರದೂ”
“ಇಂದಿನ ಪಾಠವಾಯಿತು ನಾಳೆ ಬನ್ನಿ” ಎಂದರು ಗುರುಗಳು.

ಎಲ್ಲರೂ ಮರುದಿನ ಬರುವಾಗ ಏಟು ಪೆಟ್ಟುಗಳನ್ನು ತಿಂದು ರಕ್ತ ಸೋರುತ್ತಾ ನಿಂತರು. ಶಿಷ್ಯರ ತಂಡವನ್ನು ನೋಡಿ ಏನಾಯಿತೆಂದು ಗುರುಗಳು ಕೇಳಿದರು.

“ನೆನ್ನೆ ರಾತ್ರಿ ಕೊಳದಲ್ಲಿ, ಚಂದ್ರನಂತೆ ಕಾಣುವ ಬಂಗಾರದ ನಾಣ್ಯಕ್ಕಾಗಿ ನಾವೆಲ್ಲ ಹೋರಾಡಿದವು. ಪರಿಣಾಮವಾಗಿ ನಮ್ಮ ಸ್ಥಿತಿ ಹೀಗಿದೆ” ಎಂದರು.

“ನಿಮ್ಮ ಶಿಷ್ಯ ವೃತ್ತಿಗೆ ಇಂದೇ ನಿವೃತ್ತಿ.” ಎಂದು ಮೂರ್ಖ ಶಿಷ್ಯರನ್ನು ತಪೋವನದಿಂದ ಆಚೆ ಗಡಿಪಾರು ಮಾಡಿದರು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...