Home / ಕಥೆ / ಕಿರು ಕಥೆ / ಬೇಸರವಿಲ್ಲದ ಲಿಪಿ

ಬೇಸರವಿಲ್ಲದ ಲಿಪಿ

ಒಬ್ಬ ಸನ್ಯಾಸಿ ಸಮುದ್ರ ದಂಡೆಯ ಗುಡ್ಡ ಕಲ್ಲ ಮೇಲೆ ಕುಳಿತು ಧ್ಯಾನ ತಪದಲ್ಲಿ ತೊಡಗಿದ್ದ. ಒಂದು ಶಿಷ್ಯರ ಗುಂಪು ಗುರುವನ್ನು ಹುಡುಕಿಕೊಂಡು ಬರುವಾಗ ಈ ಸನ್ಯಾಸಿಯನ್ನು ನೋಡಿ ಆಕರ್ಷಿತರಾಗಿ ಅವರಿಗೆ ಅಡ್ಡ ಬಿದ್ದು ನಮಸ್ಕರಿಸಿದರು.

“ನಮಗೆ ಜ್ಞಾನೋದಯವಾಗಬೇಕಾಗಿದೆ ನಾವು ಏನು ಮಾಡಬೇಕು?” ಎಂದು ಕೇಳಿದರು.

“ನೀವು ಎರಡು ಗುಂಪುಗಳಾಗಿ, ಒಂದು ಗುಂಪು ಈ ದಡದಲ್ಲಿ, ಇನ್ನೊಂದು ಗುಂಪು ಸಮುದ್ರದಾಚೆಯ ದಡದಲ್ಲಿ ಇರಿ. ನೀವು ಮಾಡಬೇಕಾದದು ಇಷ್ಟೆ, ಸಮುದ್ರ ಬೇಸರವಿಲ್ಲದೆ ನೊರೆಯಿಂದ ಸತ್ಯದ ಲಿಪಿ ಬರೆಯುತ್ತಲೇ ಇರುತ್ತದೆ. ಸೂರ್ಯನ ಕಿರಣದಲ್ಲಿ ಒಣಗಿಹೋಗುವ ಮುನ್ನ ಅದನ್ನು ಓದಿಕೊಂಡು ಆಚೆಯ ದಡದ ನಿಮ್ಮ ಸ್ನೇಹಿತರಿಗೆ ಹೇಳಿ, ಇದು ನಿರಂತರ ಸಾಗುತ್ತಿರಲಿ.

ಆಚೆಯ ದಡದ ನಿಮ್ಮ ಸ್ನೇಹಿತರು ಮಾಡಬೇಕಾದುದು ಇಷ್ಟೆ. ಸಮುದ್ರ, ಮರಳು ದಂಡೆಯ ಮೇಲೆ ಅಲೆಯ ನೊರೆ ಹಾಕುವುದರೊಳಗೆ ಮರಳನ್ನು ಎಣಿಸಿ ಅದರ ಮೊತ್ತದ ಗಣಿತವನ್ನು ನಿಮಗೆ ಸಮುದ್ರ ದಾಟಿ ಬಂದು ಹೇಳಲಿ, ನಿಮಗೆ ಈರ್ವರಿಗೂ ಜ್ಞಾನೋದಯವು ಶತಸಿದ್ಧ” ಎಂದ ಸನ್ಯಾಸಿ.

“ಜ್ಞಾನೋದಯ ಇಷ್ಟೇನೇನಾ?” ಎಂದರು ಶಿಷ್ಯರ ಗುಂಪು.

“ನಾವೇಕೆ ಸಮುದ್ರ ದಾಟಿ ಶ್ರಮಪಡಬೇಕು. ಬಂಡೆ ಮೇಲೆ ಅಲೆ ಬರೆದ ನೊರೆ ಲಿಪಿಯಲ್ಲಿ ಏನಿತ್ತು ಎಂಬುದನ್ನು ಅಲೆಯಿಂದ ಮರಳು ಒದ್ದೆಯಾಗುವ ಮುನ್ನ ಎಷ್ಟು ಮರಳಿನ ಹರಳಿತ್ತು ಎಂಬುದನ್ನು ಸೂರ್ಯನನ್ನ ಕೇಳಿದರೆ ನಮಗೆ ಜ್ಞಾನೋದಯವಾಗುವುದಿಲ್ಲವೇ?” ಎಂದರು ಶಿಷ್ಯಕೋಟಿ.

“ನಿಮ್ಮ ದಾರಿ ನಿಮಗಿರುವಾಗ, ನಿಮಗೇಕೆ ಗುರು ಮತ್ತು ಜ್ಞಾನೋದಯ”, ಎಂದರು ಗುಡ್ಡದ ಸನ್ಯಾಸಿ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...