Home / ಕಥೆ / ಕಿರು ಕಥೆ / ಶಾಂತಿಗಾಗಿ

ಶಾಂತಿಗಾಗಿ

ಒಬ್ಬ ನಿಷ್ಟಾವಂತ ಸಾಧಕ ಶಾಂತಿಯನ್ನು ಹುಡುಕಿಕೊಂಡು ಹೊರಟ. ಕಾಡುಮೇಡು, ಬೆಟ್ಟಗುಡ್ಡ ಸುತ್ತಿ ನದಿ ನಾವೆಯಲ್ಲಿ ತೇಲಿ ಕೊನೆಗೆ ಒಂದು ದಟ್ಟ ಅರಣ್ಯದ ಬೆಟ್ಟದಡಿಯ ಗುಹೆಯ ಬಳಿ ಬಂದು ನಿಂತ. ಬಹಳ ಶ್ರಮಿಸಿದ್ದ. ಅವನ ಕೈಕಾಲಿನಲ್ಲಿ ತ್ರಾಣವಿರಲಿಲ್ಲ. ಎದೆಯಲ್ಲಿ ಹತ್ತಿಕ್ಕಿ ತಿನ್ನುತಿತ್ತು ಶಾಂತಿಯ ಹಂಬಲ. ಬಳಲಿದ ಶರೀರ, ಕಾಂತಿಹೀನ ಕಣ್ಣುಗಳು ಅವನ ಆಂತರ್ಯದ ಅಳಲನ್ನು ಹರಿಸುತಿತ್ತು.

ಗುರುವೇ! “ಶಿಷ್ಯನ ಧ್ವನಿ ಕೇಳಿಸಲಿಲ್ಲವೇ?” ಎಂದು ಆರ್ತ ಧ್ವನಿಯಲ್ಲಿ ಕೂಗಿಕೊಂಡ.

“ಶಿಷ್ಮಾ! ನಿನಗೇನು ಬೇಕು? ಏಕ ತೊಳಲುತ್ತಿರುವೇ?” ಹೇಳು ಎಂದರು. ಗುರುವೇ! “ನನಗೆ ಶಾಂತಿ ಬೇಕು. ಅದಕ್ಕೆ ನಾ ಏನಾದರು ಕೊಡ ಬಯಸುವೆ. ನನ್ನ ಕೈ ಕಾಲು, ಮೈ, ತಲೆ, ಎದೆ, ಎಲ್ಲದೂ ನಿಮ್ಮದೇ ಗುರುವೇ, ನನಗೆ ಶಾಂತಿ ಮಾತ್ರ ಕೊಡಿರಿ” ಎಂದ.

“ಶಿಷ್ಕಾ! ನನಗೆ ನಿನ್ನ ದೇಹ ಬೇಡ, ನಾನೇನು ಮಾಂಸಾಹಾರಿಯಲ್ಲ. ನನ್ನ ಕೈ ಕಾಲು ಇರುವಾಗ ನಿನ್ನ ಕೈಕಾಲು ನನಗೆ ಬೇಡ. ಇನ್ನು ಇಬ್ಬರ ತಲೆ ಇಂದ ಇನ್ನೊಬ್ಬರಿಗೆ ಖಂಡಿತ ಉಪಯೋಗವಿಲ್ಲ. ಇನ್ನು ನಿನ್ನ ಎದೆ ಬಡಿತದಿಂದ ನಾ ಬದುಕಿರಲಾರೆ. ನಿನ್ನ ಭಾವದಿಂದ ನಾಹಾಡಲಾರೆ, ಕುಣಿಯಲಾರೆ. ನಾನು ಒಂದೇ ಒಂದು ಕೇಳುತ್ತೇನೆ. ನೀನು ಅದನ್ನು ಕೂಡು” -ಎಂದರು.

ಗುರುಗಳೇ! “ನಾನೇನು ಮಾಡಬೇಕು ಹೇಳಿ” ಎಂದ.

“ನೋಡು ಈ ಗುಹೆಯ ದ್ವಾರದಲ್ಲಿ ಒಂದು ಲಕ್ಷ್ಮಣ ರೇಖೆ ಎಳದಿರುವೆ. ನೀನು ನಿನ್ನ ಮನವನ್ನು ಗೆರೆಯ ಹೊರಗೆ ಬಿಟ್ಟು ನೀನು ಮಾತ್ರ ಗೆರೆಯದಾಟಿ ಗುಹೆಯ ಒಳಗೆ
ಬಾ ನಿನಗೆ ಬೇಕಾದಷ್ಟು ಶಾಂತಿ ದೋಚಿಕೊಂಡು ಹೋಗು” ಎಂದರು.

ಮನವನ್ನು ತೊರೆದ ಶಿಷ್ಯ ಗುಹೆಯ ದ್ವಾರದಲ್ಲಿ ಶಿಲೆಯಂತೆ ನಿಂತು ಬಿಟ್ಟ. ಶಿಷ್ಯ ಒಳಗೆ ಬಾರದಿದ್ದನ್ನು ನೋಡಿ ಗುರುಗಳು ಬಂದು “ನೋಡಿದಿಯಾ! ಈಗ ನಿನ್ನ ಎದೆ ತುಂಬಾ ಶಾಂತಿ ತುಂಬಿ ಬಿಟ್ಟಿದೆ” ಎಂದರು.

“ಧನ್ಯೋಸ್ಮಿ!” ಎಂದು ಶಿಷ್ಯ ನಮಸ್ಕರಿಸಿ ಹಿಂತಿರುಗಿದ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...