Home / ಕಥೆ / ಕಿರು ಕಥೆ / ಗುರುಗಳ ಹಿರಿಮೆ

ಗುರುಗಳ ಹಿರಿಮೆ

ಅದು ಒಂದು ದೊಡ್ಡ ಊರು. ಅಲ್ಲಿ ಹತ್ತು ಹಲವು ಗುರುಗಳ ಮಠಗಳು ಮತ್ತು ಅವರ ಶಿಷ್ಯರುಗಳು ಸೇರಿ ಇದ್ದರು. ಮಠಗಳ ಗುರುಗಳಲ್ಲಿ ಬಹಳ ಪೈಪೋಟಿ ಇತ್ತು. ಶಿಷ್ಯರು ಬಾಜಾ ಬಜಂತ್ರಿ ಹೊಡೆದು ತಮ್ಮ ಗುರುಗಳ ಮಹಿಮೆ ಪವಾಡಗಳ ಬಗ್ಗೆ ಗುಣಗಾನ ಮಾಡಿ ಇತರ ಮಠಗಳ ಅವಹೇಳನ ಮಾಡುತ್ತಿದ್ದರು.

ಆ ಊರಿಗೆ ಒಬ್ಬ ಸಾಧು ಬಂದರು. ಮಠಗಳ ನಡುವೆ, ಗುರುಗಳ ನಡುವೆ, ಶಿಷ್ಯರ ನಡುವೆ ಇರುವ ಈರ್ಷೆ ವೈಷಮ್ಯ, ಅಹಂಭಾವ, ಹೆಮ್ಮೆ ನೋಡಿ ಮರುಗುತಿದ್ದರು.

ಒಮ್ಮೆ ಅಲ್ಲಿ ಸಾಧು ಸಂತರ, ಗುರುಗಳ ಸಮ್ಮೇಳನ ನಡೆಯಿತು. ಎಲ್ಲಾ ಮಠಾಧೀಶರು ತಮಗಾಗಿ ಅಲಂಕರಿಸಿದ ಪೀಠಗಳಲ್ಲಿ ಆಸೀನರಾದರು. ಅವರವರ ಶಿಷ್ಯರು ವಂದಿಮಾಗದಿಗರಂತ ಅವರ ಬಗ್ಗೆ ಹಿರಿಮೆಯಿಂದ ಹೇಳುತಿದ್ದರು.

“ನಮ್ಮ ಮಠಾಧೀಶರು, ಸಾರ್ವಭೌಮ, ಬೆಟ್ಟವನ್ನು ಭುಜದಲ್ಲಿ ಹೊತ್ತವರು.” ಎಂದ ಓರ್ವ ಮಠದ ಶಿಷ್ಯ.

“ನಮ್ಮ ಮಠಾಧೀಶರು ಆಕಾಶವನ್ನೇ ತಲೆಯಲ್ಲಿ ಹೊತ್ತವರು” ಎಂದ.

ಮತ್ತೊರ್ವ ಶಿಷ್ಯ ಅತಿ ಹೆಮ್ಮೆಯಿಂದ ಇದೆಲ್ಲಾ, ಏನು ಮಹಾ? ”ನಮ್ಮ ಮಠಾಧೀಶರು ನದಿಯ ಒಂದು ದಡದಲ್ಲಿ ಕುಳಿತು ಇನ್ನೊಂದು ದಡದಲ್ಲಿ ಇರುವವರಿಗೆ ಉಪದೇಶಮಾಡುತ್ತಾರೆ” ಎಂದ.

“ನಿಮ್ಮ ಮಠಾಧೀಶರು ಏನು? ನಮ್ಮ ಗುರುಗಳು ನಕ್ಷತ್ರಗಳಿಂದ ದೇವರನ್ನು ಪೂಜಿಸುತ್ತಾರೆ” ಎಂದ ಮತ್ತೋರ್ವ.

ಅಲ್ಲಿ ನೆರದಿದ್ದ ಅತಿ ಸಾಮಾನ್ಯ ಸಾಧುವಿನ ಶಿಷ್ಯನೊಬ್ಬ ಎದ್ದು ನಿಂತು ಹೇಳಿದ- ”ನಮ್ಮ ಸಾಧು ಗುರುಗಳು ಮುಚ್ಚಿದ ಕಣ್ಣನ್ನು ತೆರೆಯಲು ಕಲಿಸಿದ್ದಾರೆ. ಮುಚ್ಚಿದ ಎದೆಯ ಬಾಗಿಲನ್ನು ತೆರೆಯಲು ಕಲಿಸಿದ್ದಾರೆ. ನಿರ್ಭಯ ಸತ್ಯ ಆಡುವದನ್ನು ಕಲಿಸಿದ್ದಾರೆ. ಹೆಚ್ಚೇಕೆ ಶಾಂತಿ ಬಾಳ್ವೆ ಮಾಡಿ ಬದುಕುವುದನ್ನು ಕಲಿಸಿದ್ದಾರೆ. ಈ ಸಾಮಾನ್ಯ ಪವಾಡಗಳು ನಮ್ಮ ಬಾಳಿಗೆ ಅಸಾಮಾನ್ಯ ಹಿರಿಮೆ ತಂದಿದೆ.” ಎಂದರು. – ಬೇರೆ ಮಠಾಧೀಶರು ತಲೆಗೆ ಮುಸುಕನ್ನು ಎಳೆದುಕೊಂಡು ತಮ್ಮ ತಮ್ಮ ಮಠಗಳಿಗೆ ತೆರಳಿದರು.
*****

Tagged:

Leave a Reply

Your email address will not be published. Required fields are marked *

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...