Home / ಕವನ / ಕವಿತೆ / ಮಡಿಕೇರೀಲಿ ರತ್ನ

ಮಡಿಕೇರೀಲಿ ರತ್ನ

ಮಡಿಕೇರೀಲಿ ರತ್ನ
ಕಂಡಾ ವೊಸಾ ಮತ್ನ. ೧

‘ಮಡಿಕೇರೀಲಿ ಮಡಿಕೆ ಯೆಂಡ
ಯೀರ್ದಿದ್ರ್ ಅಲ್ಲೀಗ್ ವೋದ್ದೂ ದಂಡ’
ಅಂದಿ ರತ್ನ ಪಡಕಾನೇಗೆ
ವೊಂಟಿ, ಬೆಟ್ಟದ ನೆತ್ತಿ ಮೇಗೆ
ವೋಯ್ತಿದ್ದಂಗೆ ನಿಂತ!
ಕಲ್ಲಾದಂಗೆ ಕುಂತ! ೨

ಸುತ್ತ ಸಾಯೋ ಬಿಸಿಲಿನ್ ಚಾಪೆ!
ಅಲ್ಲಲ್ಲಿ ವೊಸಿ ನೆರಳಿನ್ ತೇಪೆ!
ಅಲೆಯಲೆಯಾಗಿ ಬಿಸಿಲಿನ್ ಜೊತೆಗೆ
ಸುತ್ತಿನ್ ಗುಡ್ಡಗೊಳ್ ಕುಣದರ್ ಮೆತ್ಗೆ
ಮನಸೀಗ್ ಅರ್‍ಸ ತರ್‍ತ-
ರತ್ನ ಯೆಂಡ ಮರ್‍ತ! ೩

‘ಮುದಕನ್ ಸಾವೇ ನೋಡಾಕ್ ಚಂದ!’
ಅಂದ್ರೆ ಸೂರ್‍ಯ ಸಾಯಾಲ್ಲೇಂದ;
‘ಸಾಯೋ ಮುದುಕ ಸಂಜೆ ಸೂರ್‍ಯ
ನೆಗತ ನಿಲ್ಲೋಕ್ ಇವ್ಗೇನ್ ಕಾರ್‍ಯ?’
ಅಂತ ಹಿಂದಕ್ಕ್ ತಿರ್‍ಗಿ
ನೋಡ್ದ್ರೆ-ಬತ್ತು ಗಿರ್‍ಕಿ! ೪

ದೇವರದೊಂದು ಚೆಂದದ್ ಸೋತ್ರ
ಕೊಡಗಿನ್ ಮೇಗಿನ್ ಒಂದ್ ನಕ್ಸತ್ರ
ಕೊಡಗಿನ್ ಒಂದ್ ಊ ಗಾಳೀಲ್ ತೇಲ್ತ
ಬಂದಂಗಿದ್ಲು ಅತ್ರ ಕಾಲ್ತಾವ್
ಒಂದು ಕೊಡಗೀನುಡಗಿ!
ಐದಾರೊರಸದ್ ವುಡಗಿ! ೫

ಕೊಡಗಿನ್ ತೋಟದ್ ಕಾಪೀ ಅಣ್ಣು
ತುಟಿಗೊಳ್! ಇಳ್ಳಿನ್ ಬೆಳಕೆ ಕಣ್ಣು!
ಕೆನ್ನೆ ಅನಕ ಕೊಡಗಿನ್ ಕಿತ್ಲೆ!
ಔಳೇಳಿದ್ಲು ನಾ ಕೇಳೂತ್ಲೆ :
‘ನಿಂಗೆ ಯೆಸರೇನಮ್ಮ?’
‘ನನ್ನೆಸರು ಪೂವಮ್ಮ!’ ೬

‘ಪೂವಮ್ಮ!’ ಹಾ ! ಯೆಂತಾ ಯೆಸರು!
ಕಣ್ಣಿಗೆ ಚಿತ್ರ ಕಟ್ಟೋ ಯೆಸರು!
ರೂಪು ರಾಗಕೆ ತಕ್ಕಂತ್ ಯೆಸರು!
ಯಂಗ್ ನೋಡಿದ್ರು ವೊಪ್ಪೋ ಯೆಸರು!
‘ಪೂವಮ್ಮಾ! ಪೂವಮ್ಮಾ!’
‘ಪೂವಮ್ಮಾ! ಪೂವಮ್ಮಾ!’

ಔಳ್ ನೋಡೂತ್ಲೆ ನಂಗ್ ಮತ್ತಾಯ್ತು!
ಔಳ್ ಮಾತ್ಕೇಳಿ ಒಂದ್ ಅತ್ತಾಯ್ತು!
ಔಳ್ ಮಾತ್ ಇನ್ನಾ ಕೇಳ್ಬೇಕೂಂತ
‘ನಾನ್ಯಾರ್ ಗೊತ್ತೆ?’ ಅಂದ್ರೆ ‘ಹೂ’ತ
‘ನೀ ಯೆಂಡಕುಡಕ’ ಅಂದ್ಲು
ನೆಗ್ತ ಅತ್ರ ಬಂದ್ಲು. ೮

‘ನೀ ನಾ ಕುಡಿಯೋದ್ನ್ ಎಲ್ ನೋಡ್ದೇಮ್ಮ?’
ಅಂದ್ರೆ, ‘ಯಾವೋನ್ಗೈತೆ ಜಮ್ಮ
ಔನ್ಗೆ ಯೋಳ್ತಿವ್ ಕೊಡವಾಂತಂದಿ!
ಕುಡದಂಗ್ ಆಡೋನ್ ಕುಡುಕಾಂ’ತ್ ಅಂದಿ
ತೊಡೇನ್ ಅತ್ತಿದ್ಲು ಮೆಲ್ಗೆ!
ಕುಡದೋನ್ ಅಂದ್ರೆ ಸಲ್ಗೆ! ೯

ಕತ್ತಿನ್ ಸುತ್ತ ಕೈ ಆಕ್ಕೊಂಡಿ
‘ಅಣ್ಣ ರತ್ನ’ ಅಂತ್ ನೆಕ್ಕೊಂಡಿ
‘ಯೆಂಡದ ಪದಗೊಳ್ ಏಳ್ ನೋಡಾನೆ!
ನಾನೂ ನಿನ್ನಂಗ್ ಕಲ್ತ್ ಆಡಾನೆ!’
ಅಂದ್ಲು ಮೊಕಾನ್ ನೋಡಿ!
ಕಣ್ಣ ದೊಡ್ದು ಮಾಡಿ! ೧೦

ಇಲ್ದಿದ್ ತಂಗಿ ಆಗ್ ವುಟ್ಟಿದ್ಲು
ಪೂವಮ್ಮಾನೆ ನಂಗೆ ಮೊದಲು!
ತಂಗಿ ವುಟ್ಟಿದ್ ದಿವಸಾಂತೇಳಿ
ಆಡ್ದೆ ಯೆಂಗೀಸ್ ಇಡದಂಗ್ ತಾಲಿ-
ಸೂರ್‍ಯ ಮುಳಗಿದ್ ಕಾಣ್ದೆ!
ಯೆಂಡ ಬೇಕಂತ್ ಅನ್ದೆ!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...