Home / ಕವನ / ಅನುವಾದ / ಮೂರು ಗುಲಾಬಿ ಪೊದೆಗಳು

ಮೂರು ಗುಲಾಬಿ ಪೊದೆಗಳು

ಮೂಲ: ವಿಲಿಯಂ ಬಟ್ಲರ್ ಏಟ್ಸ್

ಕುಲೀನ ಯುವತಿ ನುಡಿದಳು ಪ್ರೇಮಿಗೆ :
‘ತಕ್ಕ ತಿನಿಸನ್ನು ಉಣಿಸದ ಪ್ರೇಮವ
ಯಾರು ನೆಚ್ಚುವರು, ಹೇಗೆ?
ಅದಕ್ಕೆ ಪ್ರೇಮವೆ ಅಳಿಯುವುದಾದರೆ
ಹಾಡುವಿ ಪ್ರೇಮವ ಹೇಗೆ? ಆಗ
ನಾ ಗುರಿಯಾಗುವೆ ನಿಂದೆಗೆ.
ಓ ನನ್ನೊಲವೇ, ಓ ನನ್ನೊಲವೇ,

‘ಬೆಳಕು ಇರದಿರಲಿ ನಿನ್ನ ಕೋಣೆಯಲಿ’
ನುಡಿದಳು ಪ್ರೇಮಿಗೆ ಚೆಲುವೆ,
‘ನಟ್ಟಿರುಳಲ್ಲಿ ನನಗೆ ನುಸುಳಿ ಬರ
ಲಾಗುವ ಹಾಗೆ ಶಯ್ಯೆಗೆ,
ನುಸುಳುತ ನನ್ನನ್ನು ಕಂಡರೆ ನಾನೇ
ಕುಸಿದೇ ಹೋಗುವೆ. ಒಮ್ಮೆಗೇ’
ಓ ನನ್ನೊಲವೇ, ಓ ನನ್ನೊಲವೇ.

‘ಗುಟ್ಟಿನಲ್ಲಿ ಒಲಿದಿರುವೆ ಒಬ್ಬನನು’,
ಯುವತಿ ಹೇಳಿದಳು ದಾಸಿಗೆ.
‘ಕಳೆದುಕೊಂಡೆನೋ ಅವನೊಲವನ್ನ
ಕುಸಿದೇ ಹೋಗುವೆ ಮಣ್ಣಿಗೆ – ಹಾಗೇ
ನೀಗಿಕೊಂಡರೂ ನನ್ನ ಕನ್ನೆತನ
ಕುಸಿದೇ ಹೋಗುವ ಒಮ್ಮೆಗೇ.
ಓ ನನ್ನೊಲವೇ, ಓ ನನ್ನೊಲವೇ.

‘ಮಲಗು ನೀನವನ ಬದಿಯಲ್ಲಿ
ನಾನೇ ಎನ್ನಿಸುವಂತೆ’
ಬೆಳಕೇ ಇಲ್ಲದ ಕಡೆಯಲಿ, ಹೆಣ್ಣೇ
ಎಲ್ಲದೇಹ ಸಮವಂತೆ,
ಬೆತ್ತಲೆಯಾಗುವ ಮೈಗಳಲಿ
ವ್ಯತ್ಯಾಸವೆ ಇರದಂತೆ’.
ಓ ನನ್ನೊಲವೇ, ಓ ನನ್ನೊಲವೇ.

ಯಾವ ನಾಯಿಯೂ ಬೊಗಳಲಿಲ್ಲ ನಡು-
ರಾತ್ರಿ ಎಂಥ ಮೊಳಗು,
‘ಎಂಥ ಒಳ್ಳೆ ಆಲೋಚನೆ, ನಲ್ಲನ
ಮುಖದೊಳೆಂಥ ಬೆಳಗು’;
ಎನ್ನಿಸಿಯೂ ನಿಟ್ಟುಸಿರು, ದಾಸಿ ಇಡಿ
ದಿನ ಆಕಳಿಸುತ್ತಿರಲು.
ಓ ನನ್ನೊಲವೇ, ಓ ನನ್ನೊಲವೇ.

‘ಬೇಡ ಬೇರೊಂದು ಹಾಡಿನ ಹಂಗು’
ಎಂದನು ಆ ಯುವಕ,
‘ನಲ್ಲೆ ಮೊದಲ ಸಲ ಕೂಡಿ ಹಾಡಿದಳು
ಇಂದಿಗಾಯ್ತು ವರುಷ
ಗಂಟೆ ಬಡಿಯಿತೋ ಹೊದಿಕೆಯೊಳೊಬ್ಬನೆ
ಉಳಿಯುವೆ ನಲ್ಲೆಗೆ ಕಾಯುತ’.
ಓ ನನ್ನೊಲವೇ, ಓ ನನ್ನೊಲವೇ.

‘ನಗುವ, ಅಳುವ, ಪವಿತ್ರಗೀತೆ
ವ್ಯಭಿಚಾರೀ ಗೀತೆ’,
ಎಂದರು ಜನ. ಹಿಂದೆಂದೂ ಇಲ್ಲ
ಇಂಥದ ಕೇಳಿದ್ದಿಂದೇ;
ಇಂಥ ಸವಾರಿಯ ಮಾಡಿದ್ದವನೇ
ಯಾರೂ ಮಾಡಿಲ್ಲ ಹಿಂದೆ.
ಓ ನನ್ನೊಲವೇ, ಓ ನನ್ನೊಲವೇ.

ಆದರೆ ಓಡುತ ಕುದುರೆ ಕಾಲನ್ನು
ಇಟ್ಟಿತು ಮೊಲಬಿಲದೊಳಗೆ
ಕೆಳಗೆ ಉರುಳಿ ಸತ್ತನು ಆ ಯುವಕ
ಯುವತಿ ಕಂಡಳದ ತಾನೇ,
ಅವನಾತ್ಮವನೇ ಒಲಿದವಳಲ್ಲವೆ?
ತಾನೂ ಸತ್ತಳು ಒಡನೆ.
ಓ ನನ್ನೊಲವೇ, ಓ ನನ್ನೊಲವೇ.

ದಾಸಿ ಬಾಳಿದಳು ಮುಂದೂ – ಬಂದುವು
ಗೋರಿಗಳವಳ ವಶಕ್ಕೆ,
ನೆಟ್ಟಳು ಎರಡು ಗುಲಾಬಿಯ, ಬೆಳೆದುವು
ದೊಡ್ಡದಾಗಿ ಮೇಲಕ್ಕೆ,
ಒಂದೇ ಮೂಲದ ಎರಡು ಟಿಸಿಲಂತೆ
ಹಾಕಿಕೊಂಡವು ತೆಕ್ಕೆ.
ಓ ನನ್ನೊಲವೇ, ಓ ನನ್ನೊಲವೇ.

ಮುದುಕಿಯಾಗಿ ಕಡೆಯುಸಿರ ಬಿಡುವಾಗ
ಬಂದನು ಪಾದ್ರಿ ಬಳಿಗೆ,
ತೋಡಿಕೊಂಡಳು ಕಥೆಯನ್ನೆಲ್ಲಾ
ಮರುಗಿದ ಪಾದ್ರಿ ಒಳಗೇ,
ಒಳ್ಳೆಯ ಜೀವ ಒಳ್ಳೆಯ ಹೃದಯವ
ಅರಿಯದಿದ್ದೀತು ಹೇಗೆ?
ಓ ನನ್ನೊಲವೇ, ಓ ನನ್ನೊಲವೇ.

ಒಡತಿಯ, ನಲ್ಲನ ಗೋರಿಯ ಬದಿಗೇ
ಅವಳದೂ ಇರುವಂತೆ
ಪಾದ್ರಿ ಮಾಡಿಸಿದ ಗೋರಿಯ, ಮೇಲೆ
ನೆಡಿಸಿದ ಗುಲಾಬಿ ಟೊಂಗೆ,
ಹೂವು ಸುರಿಸುವುವು ಮೂರು ಗಿಡಗಳೂ
ಹೆಣೆದಿವೆ ಒಂದಕ್ಕೊಂದು,
ಯಾವ ಗಿಡದ ಹೂ ಯಾವುದು ತಿಳಿಯದು
ಕೀಳುವ ಜನಕ್ಕೆ ಇಂದೂ.
ಓ ನನ್ನೊಲವೇ, ಓ ನನ್ನೊಲವೇ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...