Home / ಕವನ / ಅನುವಾದ / ಮೂರು ಗುಲಾಬಿ ಪೊದೆಗಳು

ಮೂರು ಗುಲಾಬಿ ಪೊದೆಗಳು

ಮೂಲ: ವಿಲಿಯಂ ಬಟ್ಲರ್ ಏಟ್ಸ್

ಕುಲೀನ ಯುವತಿ ನುಡಿದಳು ಪ್ರೇಮಿಗೆ :
‘ತಕ್ಕ ತಿನಿಸನ್ನು ಉಣಿಸದ ಪ್ರೇಮವ
ಯಾರು ನೆಚ್ಚುವರು, ಹೇಗೆ?
ಅದಕ್ಕೆ ಪ್ರೇಮವೆ ಅಳಿಯುವುದಾದರೆ
ಹಾಡುವಿ ಪ್ರೇಮವ ಹೇಗೆ? ಆಗ
ನಾ ಗುರಿಯಾಗುವೆ ನಿಂದೆಗೆ.
ಓ ನನ್ನೊಲವೇ, ಓ ನನ್ನೊಲವೇ,

‘ಬೆಳಕು ಇರದಿರಲಿ ನಿನ್ನ ಕೋಣೆಯಲಿ’
ನುಡಿದಳು ಪ್ರೇಮಿಗೆ ಚೆಲುವೆ,
‘ನಟ್ಟಿರುಳಲ್ಲಿ ನನಗೆ ನುಸುಳಿ ಬರ
ಲಾಗುವ ಹಾಗೆ ಶಯ್ಯೆಗೆ,
ನುಸುಳುತ ನನ್ನನ್ನು ಕಂಡರೆ ನಾನೇ
ಕುಸಿದೇ ಹೋಗುವೆ. ಒಮ್ಮೆಗೇ’
ಓ ನನ್ನೊಲವೇ, ಓ ನನ್ನೊಲವೇ.

‘ಗುಟ್ಟಿನಲ್ಲಿ ಒಲಿದಿರುವೆ ಒಬ್ಬನನು’,
ಯುವತಿ ಹೇಳಿದಳು ದಾಸಿಗೆ.
‘ಕಳೆದುಕೊಂಡೆನೋ ಅವನೊಲವನ್ನ
ಕುಸಿದೇ ಹೋಗುವೆ ಮಣ್ಣಿಗೆ – ಹಾಗೇ
ನೀಗಿಕೊಂಡರೂ ನನ್ನ ಕನ್ನೆತನ
ಕುಸಿದೇ ಹೋಗುವ ಒಮ್ಮೆಗೇ.
ಓ ನನ್ನೊಲವೇ, ಓ ನನ್ನೊಲವೇ.

‘ಮಲಗು ನೀನವನ ಬದಿಯಲ್ಲಿ
ನಾನೇ ಎನ್ನಿಸುವಂತೆ’
ಬೆಳಕೇ ಇಲ್ಲದ ಕಡೆಯಲಿ, ಹೆಣ್ಣೇ
ಎಲ್ಲದೇಹ ಸಮವಂತೆ,
ಬೆತ್ತಲೆಯಾಗುವ ಮೈಗಳಲಿ
ವ್ಯತ್ಯಾಸವೆ ಇರದಂತೆ’.
ಓ ನನ್ನೊಲವೇ, ಓ ನನ್ನೊಲವೇ.

ಯಾವ ನಾಯಿಯೂ ಬೊಗಳಲಿಲ್ಲ ನಡು-
ರಾತ್ರಿ ಎಂಥ ಮೊಳಗು,
‘ಎಂಥ ಒಳ್ಳೆ ಆಲೋಚನೆ, ನಲ್ಲನ
ಮುಖದೊಳೆಂಥ ಬೆಳಗು’;
ಎನ್ನಿಸಿಯೂ ನಿಟ್ಟುಸಿರು, ದಾಸಿ ಇಡಿ
ದಿನ ಆಕಳಿಸುತ್ತಿರಲು.
ಓ ನನ್ನೊಲವೇ, ಓ ನನ್ನೊಲವೇ.

‘ಬೇಡ ಬೇರೊಂದು ಹಾಡಿನ ಹಂಗು’
ಎಂದನು ಆ ಯುವಕ,
‘ನಲ್ಲೆ ಮೊದಲ ಸಲ ಕೂಡಿ ಹಾಡಿದಳು
ಇಂದಿಗಾಯ್ತು ವರುಷ
ಗಂಟೆ ಬಡಿಯಿತೋ ಹೊದಿಕೆಯೊಳೊಬ್ಬನೆ
ಉಳಿಯುವೆ ನಲ್ಲೆಗೆ ಕಾಯುತ’.
ಓ ನನ್ನೊಲವೇ, ಓ ನನ್ನೊಲವೇ.

‘ನಗುವ, ಅಳುವ, ಪವಿತ್ರಗೀತೆ
ವ್ಯಭಿಚಾರೀ ಗೀತೆ’,
ಎಂದರು ಜನ. ಹಿಂದೆಂದೂ ಇಲ್ಲ
ಇಂಥದ ಕೇಳಿದ್ದಿಂದೇ;
ಇಂಥ ಸವಾರಿಯ ಮಾಡಿದ್ದವನೇ
ಯಾರೂ ಮಾಡಿಲ್ಲ ಹಿಂದೆ.
ಓ ನನ್ನೊಲವೇ, ಓ ನನ್ನೊಲವೇ.

ಆದರೆ ಓಡುತ ಕುದುರೆ ಕಾಲನ್ನು
ಇಟ್ಟಿತು ಮೊಲಬಿಲದೊಳಗೆ
ಕೆಳಗೆ ಉರುಳಿ ಸತ್ತನು ಆ ಯುವಕ
ಯುವತಿ ಕಂಡಳದ ತಾನೇ,
ಅವನಾತ್ಮವನೇ ಒಲಿದವಳಲ್ಲವೆ?
ತಾನೂ ಸತ್ತಳು ಒಡನೆ.
ಓ ನನ್ನೊಲವೇ, ಓ ನನ್ನೊಲವೇ.

ದಾಸಿ ಬಾಳಿದಳು ಮುಂದೂ – ಬಂದುವು
ಗೋರಿಗಳವಳ ವಶಕ್ಕೆ,
ನೆಟ್ಟಳು ಎರಡು ಗುಲಾಬಿಯ, ಬೆಳೆದುವು
ದೊಡ್ಡದಾಗಿ ಮೇಲಕ್ಕೆ,
ಒಂದೇ ಮೂಲದ ಎರಡು ಟಿಸಿಲಂತೆ
ಹಾಕಿಕೊಂಡವು ತೆಕ್ಕೆ.
ಓ ನನ್ನೊಲವೇ, ಓ ನನ್ನೊಲವೇ.

ಮುದುಕಿಯಾಗಿ ಕಡೆಯುಸಿರ ಬಿಡುವಾಗ
ಬಂದನು ಪಾದ್ರಿ ಬಳಿಗೆ,
ತೋಡಿಕೊಂಡಳು ಕಥೆಯನ್ನೆಲ್ಲಾ
ಮರುಗಿದ ಪಾದ್ರಿ ಒಳಗೇ,
ಒಳ್ಳೆಯ ಜೀವ ಒಳ್ಳೆಯ ಹೃದಯವ
ಅರಿಯದಿದ್ದೀತು ಹೇಗೆ?
ಓ ನನ್ನೊಲವೇ, ಓ ನನ್ನೊಲವೇ.

ಒಡತಿಯ, ನಲ್ಲನ ಗೋರಿಯ ಬದಿಗೇ
ಅವಳದೂ ಇರುವಂತೆ
ಪಾದ್ರಿ ಮಾಡಿಸಿದ ಗೋರಿಯ, ಮೇಲೆ
ನೆಡಿಸಿದ ಗುಲಾಬಿ ಟೊಂಗೆ,
ಹೂವು ಸುರಿಸುವುವು ಮೂರು ಗಿಡಗಳೂ
ಹೆಣೆದಿವೆ ಒಂದಕ್ಕೊಂದು,
ಯಾವ ಗಿಡದ ಹೂ ಯಾವುದು ತಿಳಿಯದು
ಕೀಳುವ ಜನಕ್ಕೆ ಇಂದೂ.
ಓ ನನ್ನೊಲವೇ, ಓ ನನ್ನೊಲವೇ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...