Home / ಕವನ / ಅನುವಾದ / ಮೂರು ಗುಲಾಬಿ ಪೊದೆಗಳು

ಮೂರು ಗುಲಾಬಿ ಪೊದೆಗಳು

ಮೂಲ: ವಿಲಿಯಂ ಬಟ್ಲರ್ ಏಟ್ಸ್

ಕುಲೀನ ಯುವತಿ ನುಡಿದಳು ಪ್ರೇಮಿಗೆ :
‘ತಕ್ಕ ತಿನಿಸನ್ನು ಉಣಿಸದ ಪ್ರೇಮವ
ಯಾರು ನೆಚ್ಚುವರು, ಹೇಗೆ?
ಅದಕ್ಕೆ ಪ್ರೇಮವೆ ಅಳಿಯುವುದಾದರೆ
ಹಾಡುವಿ ಪ್ರೇಮವ ಹೇಗೆ? ಆಗ
ನಾ ಗುರಿಯಾಗುವೆ ನಿಂದೆಗೆ.
ಓ ನನ್ನೊಲವೇ, ಓ ನನ್ನೊಲವೇ,

‘ಬೆಳಕು ಇರದಿರಲಿ ನಿನ್ನ ಕೋಣೆಯಲಿ’
ನುಡಿದಳು ಪ್ರೇಮಿಗೆ ಚೆಲುವೆ,
‘ನಟ್ಟಿರುಳಲ್ಲಿ ನನಗೆ ನುಸುಳಿ ಬರ
ಲಾಗುವ ಹಾಗೆ ಶಯ್ಯೆಗೆ,
ನುಸುಳುತ ನನ್ನನ್ನು ಕಂಡರೆ ನಾನೇ
ಕುಸಿದೇ ಹೋಗುವೆ. ಒಮ್ಮೆಗೇ’
ಓ ನನ್ನೊಲವೇ, ಓ ನನ್ನೊಲವೇ.

‘ಗುಟ್ಟಿನಲ್ಲಿ ಒಲಿದಿರುವೆ ಒಬ್ಬನನು’,
ಯುವತಿ ಹೇಳಿದಳು ದಾಸಿಗೆ.
‘ಕಳೆದುಕೊಂಡೆನೋ ಅವನೊಲವನ್ನ
ಕುಸಿದೇ ಹೋಗುವೆ ಮಣ್ಣಿಗೆ – ಹಾಗೇ
ನೀಗಿಕೊಂಡರೂ ನನ್ನ ಕನ್ನೆತನ
ಕುಸಿದೇ ಹೋಗುವ ಒಮ್ಮೆಗೇ.
ಓ ನನ್ನೊಲವೇ, ಓ ನನ್ನೊಲವೇ.

‘ಮಲಗು ನೀನವನ ಬದಿಯಲ್ಲಿ
ನಾನೇ ಎನ್ನಿಸುವಂತೆ’
ಬೆಳಕೇ ಇಲ್ಲದ ಕಡೆಯಲಿ, ಹೆಣ್ಣೇ
ಎಲ್ಲದೇಹ ಸಮವಂತೆ,
ಬೆತ್ತಲೆಯಾಗುವ ಮೈಗಳಲಿ
ವ್ಯತ್ಯಾಸವೆ ಇರದಂತೆ’.
ಓ ನನ್ನೊಲವೇ, ಓ ನನ್ನೊಲವೇ.

ಯಾವ ನಾಯಿಯೂ ಬೊಗಳಲಿಲ್ಲ ನಡು-
ರಾತ್ರಿ ಎಂಥ ಮೊಳಗು,
‘ಎಂಥ ಒಳ್ಳೆ ಆಲೋಚನೆ, ನಲ್ಲನ
ಮುಖದೊಳೆಂಥ ಬೆಳಗು’;
ಎನ್ನಿಸಿಯೂ ನಿಟ್ಟುಸಿರು, ದಾಸಿ ಇಡಿ
ದಿನ ಆಕಳಿಸುತ್ತಿರಲು.
ಓ ನನ್ನೊಲವೇ, ಓ ನನ್ನೊಲವೇ.

‘ಬೇಡ ಬೇರೊಂದು ಹಾಡಿನ ಹಂಗು’
ಎಂದನು ಆ ಯುವಕ,
‘ನಲ್ಲೆ ಮೊದಲ ಸಲ ಕೂಡಿ ಹಾಡಿದಳು
ಇಂದಿಗಾಯ್ತು ವರುಷ
ಗಂಟೆ ಬಡಿಯಿತೋ ಹೊದಿಕೆಯೊಳೊಬ್ಬನೆ
ಉಳಿಯುವೆ ನಲ್ಲೆಗೆ ಕಾಯುತ’.
ಓ ನನ್ನೊಲವೇ, ಓ ನನ್ನೊಲವೇ.

‘ನಗುವ, ಅಳುವ, ಪವಿತ್ರಗೀತೆ
ವ್ಯಭಿಚಾರೀ ಗೀತೆ’,
ಎಂದರು ಜನ. ಹಿಂದೆಂದೂ ಇಲ್ಲ
ಇಂಥದ ಕೇಳಿದ್ದಿಂದೇ;
ಇಂಥ ಸವಾರಿಯ ಮಾಡಿದ್ದವನೇ
ಯಾರೂ ಮಾಡಿಲ್ಲ ಹಿಂದೆ.
ಓ ನನ್ನೊಲವೇ, ಓ ನನ್ನೊಲವೇ.

ಆದರೆ ಓಡುತ ಕುದುರೆ ಕಾಲನ್ನು
ಇಟ್ಟಿತು ಮೊಲಬಿಲದೊಳಗೆ
ಕೆಳಗೆ ಉರುಳಿ ಸತ್ತನು ಆ ಯುವಕ
ಯುವತಿ ಕಂಡಳದ ತಾನೇ,
ಅವನಾತ್ಮವನೇ ಒಲಿದವಳಲ್ಲವೆ?
ತಾನೂ ಸತ್ತಳು ಒಡನೆ.
ಓ ನನ್ನೊಲವೇ, ಓ ನನ್ನೊಲವೇ.

ದಾಸಿ ಬಾಳಿದಳು ಮುಂದೂ – ಬಂದುವು
ಗೋರಿಗಳವಳ ವಶಕ್ಕೆ,
ನೆಟ್ಟಳು ಎರಡು ಗುಲಾಬಿಯ, ಬೆಳೆದುವು
ದೊಡ್ಡದಾಗಿ ಮೇಲಕ್ಕೆ,
ಒಂದೇ ಮೂಲದ ಎರಡು ಟಿಸಿಲಂತೆ
ಹಾಕಿಕೊಂಡವು ತೆಕ್ಕೆ.
ಓ ನನ್ನೊಲವೇ, ಓ ನನ್ನೊಲವೇ.

ಮುದುಕಿಯಾಗಿ ಕಡೆಯುಸಿರ ಬಿಡುವಾಗ
ಬಂದನು ಪಾದ್ರಿ ಬಳಿಗೆ,
ತೋಡಿಕೊಂಡಳು ಕಥೆಯನ್ನೆಲ್ಲಾ
ಮರುಗಿದ ಪಾದ್ರಿ ಒಳಗೇ,
ಒಳ್ಳೆಯ ಜೀವ ಒಳ್ಳೆಯ ಹೃದಯವ
ಅರಿಯದಿದ್ದೀತು ಹೇಗೆ?
ಓ ನನ್ನೊಲವೇ, ಓ ನನ್ನೊಲವೇ.

ಒಡತಿಯ, ನಲ್ಲನ ಗೋರಿಯ ಬದಿಗೇ
ಅವಳದೂ ಇರುವಂತೆ
ಪಾದ್ರಿ ಮಾಡಿಸಿದ ಗೋರಿಯ, ಮೇಲೆ
ನೆಡಿಸಿದ ಗುಲಾಬಿ ಟೊಂಗೆ,
ಹೂವು ಸುರಿಸುವುವು ಮೂರು ಗಿಡಗಳೂ
ಹೆಣೆದಿವೆ ಒಂದಕ್ಕೊಂದು,
ಯಾವ ಗಿಡದ ಹೂ ಯಾವುದು ತಿಳಿಯದು
ಕೀಳುವ ಜನಕ್ಕೆ ಇಂದೂ.
ಓ ನನ್ನೊಲವೇ, ಓ ನನ್ನೊಲವೇ.
*****

Tagged:

Leave a Reply

Your email address will not be published. Required fields are marked *

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...