Home / ಕವನ / ಅನುವಾದ / ಧೂರ್‍ತ ಒರಟು ಮುದುಕ

ಧೂರ್‍ತ ಒರಟು ಮುದುಕ

ಮೂಲ: ವಿಲಿಯಂ ಬಟ್ಲರ್ ಏಟ್ಸ್

‘ಹೆಣ್ಣುಗಳ ವ್ಯಾಮೋಹ ಇದೆಯೆಂತಲೇ ನನಗೆ
ಮಲೆಗಳಲ್ಲೂ ಇಂಥ ಮೋಹ’
ದೈವ ಕಳಿಸಿದ ಜಾಗದಲ್ಲಿ ಅಲೆಯುವ ಒರಟು
ಮುದುಕ ನುಡಿದನು ಹೀಗೆ ಮನವ.
“ಸಾಯಲಾರೆನೆ ನಾನು ಮನೆಯ ಚಾಪೆಯ ಮೇಲೆ
ಮುಚ್ಚು ಕಣ್ಣನು ನಿನ್ನ ಕೈಯಿಂದಲೇ,
ಆಕಾಶದಲ್ಲಿರುವ ಆ ಮುದುಕನಿಂದ ನಾ
ಇಷ್ಟನ್ನೆ ಕೇಳುವುದು ನಲ್ಲೆ’
– ಬೆಳಗಾಯ್ತು, ಮುಂಬತ್ತಿ ಮುಗಿಯಿತು.

‘ಏನು ಹಿತವೇ ಚಿನ್ನ ನಿನ್ನ ಮಾತುಗಳೆಲ್ಲ
ಉಳಿದಿದ್ದ ಕೊಡದೆ ಇರಬೇಡೇ;
ಹತ್ತ ಮುದುಕನ ರಕ್ತ ಯಾವಾಗ ಆರೀತೊ
ತಿಳಿಯಬಲ್ಲವರಾರು ಹೇಳೆ?
ಭಾರಿ ಪ್ರೀತಿಸುವಂಥ ಯಾವ ಯುವಕಗೂ ಇರದ
ಬೇರೇನೊ ಇದೆ ನನ್ನ ಒಳಗೆ
ಬಹಳವೆಂದರೆ ಆತ ಸೋಕಬಲ್ಲನು, ನಾನೊ
ಮಾತಿನಲೆ ಹೃದಯವನ್ನಿರಿವೆ?
-ಬೆಳಗಾಯ್ತು, ಮುಂಬತ್ತಿ ಮುಗಿಯಿತು.

ಬಗಲಲ್ಲಿ ದಪ್ಪದೊಣ್ಣೆಯ ಊರಿ ನಿಂತಿದ್ದ
ಧೂರ್‍ತ ಮುದುಕನಿಗಾಕೆ ನುಡಿದಳು:
‘ಪ್ರೇಮವನು ಕೊಡುವುದೋ, ಇಲ್ಲ ಹೋಗೆನ್ನುವುದೊ
ನನ್ನದಾಗಿಲ್ಲ ನಾ ಆಳು.
ಮುಗಿಲಮನೆ ಮುದುಕನಿಗೆ, ನಿನಗಿಂತ ಹಿರಿಯನಿಗೆ
ಕೊಟ್ಟು ಬಿಟ್ಟೆನೊ ಎಲ್ಲವನ್ನ
ಅವನ ಜಪಮಣಿ ಹಿಡಿದ ಬೆರಳಿಗಿಲ್ಲವೊ
ಬಿಡುವು ಮುಚ್ಚಲಾರವು ಅವು ಕಣ್ಣ’.
– ಬೆಳಗಾಯ್ತು ಮುಂಬತ್ತಿ ಮುಗಿಯಿತು.

‘ನಿನ್ನ ದಾರಿಯ ಹಿಡಿದು ಹೋಗೆ ಹಾಗೇ ಹೆಣ್ಣೆ
ನನ್ನ ಗುರಿಯೇ ಬೇರೆ ಇದೆಯೆ,
ಕಡಲ ದಂಡೆಯ ಮೇಲೆ ಕತ್ತಲಿನರ್‍ಥ ತಿಳಿದು
ಸುಳಿವ ಹುಡುಗಿಯರ ಗುಂಪಿದೆಯ,
ಮೀನುಗಾರರ ಕೂಡ ಪೋಲಿಮಾತಿನ ಲಲ್ಲೆ
ಬೆಸ್ತ ಚಿಣ್ಣರಿಗಾಗಿ ಕುಣಿತ,
ಕತ್ತಲಿಳಿಯಿತೊ ಕಡಲಮೇಲೆ ಹೆಣ್ಣುಗಳಿಗೆ
ಹಾಸಿಗೆಯ ಅರಳಿಸುವ ತವಕ,’
– ಬೆಳಗಾಯ್ತು ಮುಂಬಡ್ತಿ ಮುಗಿಯಿತು.

‘ಒಡ್ಡು ಮಾತಿನ ಮುದುಕ ನಾನು ಹಗಲಲ್ಲಷ್ಟೆ
ಕತ್ತಲಾಯಿತೊ ಗಟ್ಟಿಯುವಕ,
ಬೆಕ್ಕ ನಗಿಸಲು ಬಲ್ಲೆ, ಗುಟ್ಟ ಕೂಗಿಸಬಲ್ಲೆ
ಜಾಣನುಡಿಯಲಿ ತೆಗೆದು ಚಿಲಕ.
ಮೊಡವೆ ಮೂಡಿದ ಮುಖದ ಎಳೆಯ ನುಡಿಸುವನೇನೆ
ನೆಣದೊಳಗೆ ಹುದುಗಿರುವ ಹಾಡ?
ಬದಿಗೆ ಮಲಗಿದ್ದ ಮಾತ್ರಕ್ಕೆ ದಕ್ಕೀತೇನು
ಕಾಲಪಾತಾಳಗಳ ಗೂಢ?’
– ಬೆಳಗಾಯ್ತು ಮುಂಬತ್ತಿ ಮುಗಿಯಿತು.

‘ಹುಟ್ಟುಹಾಕಲು ಮುಂದೆ ಬಾಗಿರುವ ಅಂಬಿಗನೊ,
ಮಗ್ಗದಲಿ ಬಗ್ಗಿರುವ ನೇಯ್ಗೆಯವನೊ,
ಎದೆಸೆಟಿಸಿ ಕೂತ ಅಶ್ವಾರೋಹಿಯೋ ಅಥವ
ಬಸಿರಿನಲಿ ಮುದುಡಿ ಮಲಗಿರುವ ಶಿಶುವೊ,
ಮೇಲಕೊಯ್ಯುವ ದಾರಿ ಹಿಡಿದವರೆ ಆಗಿರಲಿ
ಕೆಳನೆಲೆಯಲುಳಿದಂಥ ತೃಪ್ತರಿರಲಿ,
ನೋವಿನಲೆ ಬಾಳುವರು ಎಲ್ಲ ಮಾನವರೂ
ನನ್ನಂಥ ಕೆಲವರೇ ಇದ ಬಲ್ಲರು.’
– ಬೆಳಗಾಯ್ತು, ಮುಂಬತ್ತಿ ಮುಗಿಯಿತು.

‘ಬಲ್ಲ ಜನ ಯಾರೂ ಅಲ್ಲಗಳೆಯುವುದಿಲ್ಲ
ಮುಗಿಲಿನೊಳಗಿರುವ ಆ ಮುದುಕ
ಮಿಂಚಿನ ಧಾರೆ ಕಳಿಸಿ ಯಾತನೆಯ ಹರಿಸುವನು
ಎಂಬ ನಂಬಿಕೆಯ ಹಳೆಮಾತ.
ಆದರೂ ನಾ ಮಾತ್ರ ಬಲು ಒರಟು ಮುದುಕನೇ,
ನನಗಿರಲಿ ಎರಡನೆಯ ದಾರಿ,
ಹೆಣ್ಣಿನೆದೆ ಮೇಲೊರಗಿ ಮಲಗುವೆನು ಹಾಯಾಗಿ
ಯಾತನೆಯ ಮರವೆಯಲಿ ಹೂಳಿ.’
– ಬೆಳಗಾಯ್ತು, ಮುಂಬತ್ತಿ ಮುಗಿಯಿತು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...