Home / ಲೇಖನ / ವಿಜ್ಞಾನ / ಪರಿಸರ ಮಾಲಿನ್ಯವಿಲ್ಲದ ಸೌರಶಕ್ತಿಕಾರು (ನೂತನ ಪ್ರಯೋಗ)

ಪರಿಸರ ಮಾಲಿನ್ಯವಿಲ್ಲದ ಸೌರಶಕ್ತಿಕಾರು (ನೂತನ ಪ್ರಯೋಗ)

ಬೆಂಗಳೂರಿನ ಅಜಾದ್ ನಗರದ ವಾಸಿ ಸೈಯ್ಯದ್ ಅಹಮ್ಮದ್ ಅವರಿಗೆ ಸೌರಶಕ್ತಿಯಲ್ಲಿ ಗಾಡಿ ಓಡಿಸುವ ಬಯಕೆಯ ತೀವ್ರತೆಯಿಂದಾಗಿ ಕಳೆದ ೩೦ ವರ್‍ಷಗಳ ಸತತ ಪ್ರಯತ್ನದ ಫಲವಾಗಿ ಸೌರಶಕ್ತಿಯಿಂದ ಕಾರು, ಮೂರುಚಕ್ರ, ದ್ವಿಚಕ್ರ ವಾಹನಗಳನ್ನು ಆರಾಮವಾಗಿ ಒಡಿಸಬಹುದೆಂದು ಸಾಬೀತು ಪಡಿಸಿದ್ದಾರೆ. (ಕಡಿಮೆ ವ್ಯಚ್ಚದಲ್ಲಿ) ವೃತ್ತಿಯಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಮಾರಾಟ ಮಾಡುತ್ತಿರುವ ಅಹಮ್ಮದ್ ಏನನ್ನಾದರೂ ಸಾಧಿಸಬೇಕೆಂಬ ಛಲವುಳ್ಳವರು. ತಮ್ಮ ಕೈಗೆ ಸಿಕ್ಕ ವಸ್ತುಗಳನ್ನು (ಉಪಕರಣ) ಬಳಸಿಕೊಂಡು, ಅದಕ್ಕೊಂದು ರೂಪನೀಡಿ ಸೂರ್ಯನ ಶಾಖಾವನ್ನು ಹಾಯಿಸಿ ಪರಿಸರ ಪ್ರೇಮಿ ಕಾರೊಂದನ್ನು ಕೊನೆಗೂ ಸಿದ್ಧಪಡಿಸಿದರು. ಈ ಕಾರಿಗೆ ಇವರು ಖರ್ಚು ಮಾಡಿರುವುದು ಕೇವಲ ೫೦ ಸಾವಿರ ರೂಪಾಯಿಗಳು ಮಾತ್ರ. ಸೌರಶಕ್ತಿ ಚಾಲಿತ ಈ ಕಾರು ೩೨೫ ಕೆ.ಜಿ. ತೂಗುತ್ತದೆ. ಮೋಡ ಸೂರ್ಯನನ್ನು ಮುಚ್ಚಿಕೊಂಡ ಸಂದರ್ಭದಲ್ಲಿಯೂ ಕಾರುಕೆಡದೆಂಬ ಆತಂಕ ಪಡಬೇಕಿಲ್ಲ ಈ ಕಾರಿಗೆ ವಿಶೇಷ ಬ್ಯಾಟರಿ ವ್ಯವಸ್ಥೆಯನ್ನು ಮಾಡಲಾಗಿದೆ. ಒಮ್ಮೆ ಬ್ಯಾಟ್ರಿ ಚಾರ್ಜ್ ಮಾಡಿದರೆ ನೂರು ಕಿ.ಮೀ. ಗಾಡಿ ಓಡಿಸಬಹುದು.

ಈ ಕಾರು ಇತರೆ ಕಾರುಗಳಂತೆ ಸದ್ದು ಮಾಡುವುದಿಲ್ಲ ಹೊಗೆಯನ್ನು ಉಗಳುವುದೇ ಇಲ್ಲ ಗೇರು ಬದಲಿಸುವ ಗೊಂದಲ ಇಲ್ಲ. ಗಾಡಿಹತ್ತಿ ಸೀದಾ ಸ್ಟೇರಿಂಗ್ ತಿರುಗಿಸುತ್ತ ಹೋಗುವುದಷ್ಟೇ ಕೆಲಸ. ಈಗಾಗಲೇ ಬೆಂಗಳೂರಿನ ಸುತ್ತಮುತ್ತ ಎಲ್ಲಿಯೂ ಕೈ ಕೊಡದ ಈ ಕಾರು ಯಶಸ್ವಿಯಾಗಿದೆ. ಬಡವರಿಗೆ ಕೈ ಗೆಟಕುವ ಬೆಲೆಯಲ್ಲಿ ಸಿಗುವ ಈ ಕಾರು ಶ್ರೀಮಂತರಿಗೆ ಮಾಲಿನ್ಯ ರಹಿತ ಈ ಕಾರನ್ನು ಓಡಿಸುವಾಗ ತೃಪ್ತಿಯನ್ನು ನೀಡುತ್ತದೆ. ಪರಿಸರ ಮಾಲಿನ್ಯವಿಲ್ಲದೇ ಕೇವಲ ಸೌರಶಕ್ತಿಯಿಂದಲೇ ನಡೆಯುವ ಈ ಕಾರು ಪರಿಸರವಾದಿಗಳಿಗೆಲ್ಲ ಅತ್ಯಂತ ಅಚ್ಚು ಮೆಚ್ಚಾಗುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...