Home / ಲೇಖನ / ಇತರೆ / ಮಾಟಗಾತಿಯರ ಕತೆ

ಮಾಟಗಾತಿಯರ ಕತೆ

ಮುದ್ದು ಪುಟಾಣಿಗಳೆ.. ನೀವೆಲ್ಲ ಮಾಟಗಾತಿಯರ ಬಗ್ಗೆ ಈಗಾಗಲೇ ಓದಿರಬಹುದು. ಕಂಡಿರಲೂಬಹುದು, ಕೇಳಿರಲೂ ಬಹುದು.

ನೀವೆಲ್ಲ.. ಜಾರ್‍ಖಂಡ ರಾಜ್ಯದ ಹೆಸರನ್ನು ಕೇಳಿರಬಹುದು. ಅಲ್ಲಿ ರಾಂಚಿ ಎಂಬ ಪಟ್ಟಣವಿದೆ. ಅಲ್ಲೇ ಸಮೀಪದಲ್ಲೇ ಮಂದರ್ ಎಂಬ ಪುಟ್ಟ ಗ್ರಾಮವಿದೆ. ಇದು ರಾಂಚಿಯಿಂದ ಸುಮಾರು ನಲವತ್ತು ಕಿಲೋಮೀಟರ್ ದೂರದಲ್ಲಿದೆ. ಅಂದರೆ ಅದೊಂದು ಕುಗ್ರಾಮ ತೀರಾ ಹಿಂದುಳಿದ ಸಣ್ಣದೊಂದು ಹಳ್ಳಿ.

ಅಲ್ಲಿ ಒಬ್ಬರಲ್ಲ! ಐದು ಜನ ಮಾಟಗಾತಿಯರು…! ಅಬ್ಬಾ! ಒಬ್ಬರಿದ್ದರೆ ತಡೆಯಲಾಗುವುದಿಲ್ಲ. ಇನ್ನು ಐದು ಜನರೆಂದರೆ ಜನ ಹೌಹಾರಿ ಬಿಟ್ಟರು.

ಮಂದರ್ ಗ್ರಾಮದ ತುಂಬೆಲ್ಲ ಇವರದೇ ಉಪಟಳ, ಮನೆಯಲ್ಲಿನ ಹಾಲು ಇಂಗಿ ಹೋಗುವುದು. ಮಕ್ಕಳಿಗೆ ಸುಸ್ತಾಗಿ ಸಾಯುವುದು, ದೊಡ್ಡವರಿಗೆ ಕೈಕಾಲು ಬಿದ್ದೋಗುವುದು. ಮನೆಯಲ್ಲಿನ ಜೀವ ದನಗಳು ಸಾಯುವುದು. ಒಂದೇ ಎರಡೇ ನಿತ್ಯ ಹತ್ತಾರು ಜನರಿಗೆ ಈ ಮಾಟಗಾತಿಯರು ಮಾಟ ಮಾಡಿಸಿದ್ದೇ ಮಾಡಿಸಿದ್ದು!

ಇನ್ನು ಹೆಣ್ಣು ಮಕ್ಕಳಿಗೆ ಮದುವೆಯಾಗದಂತೆ, ಗಂಡು ಅವರ ಮನೆಗೆ ಬರದಂತೆ ಮಾಡುವುದು, ಋತುಮತಿಯಾಗದಂತೆ ಮಾಡುವುದು, ಹುಚ್ಚಿಯಾಗಿಸುವುದು, ಮನೆಬಿಟ್ಟು ಓಡಿ ಹೋಗುವಂತೆ, ಮನೆಯಲ್ಲಿ ಯಂತ್ರ, ಮಂತ್ರ, ನಿಂಬೆಹಣ್ಣು ಗೊಂಬೆ ಮಾಡಿ ಇಡುವುದು! ನಿತ್ಯ ಜಗಳ, ಹೊಡೆದಾಟ ಬಡಿದಾಟ ನ್ಯಾಯಾ ಪಂಚಾಯ್ತಿ ಬೆಳೆ ಹಾನಿ ನೀರಿಲ್ಲದಂತೆ ಮಾಟ ಮಾಡಿಸುವುದು ಸಾಗಿಯೇ ಇತ್ತು.

ಜನರು ರೋಸಿ ಹೋಗಿದ್ದರು. ಗ್ರಾಮದಲ್ಲಿ ಉಸಿರು ಗಟ್ಟಿಸುವ ವಾತಾವರಣವಿತ್ತು.

ದಿನಾಂಕ ೦೭-೦೮-೨೦೧೫ರಂದು ಶುಕ್ರವಾರ ತಡರಾತ್ರಿ ಮಾಟ ಮಾಡುತ್ತಿದ್ದ ಐವರ ಮನೆಗೆ ನುಗ್ಗಿದ ಗ್ರಾಮಸ್ಥರು ಅವರನ್ನು ಧರಧರನೆ ಹೊರಗೆ ಎಳೆದು ದೊಣ್ಣೆ, ಕಲ್ಲು, ಕಬ್ಬಿಣದ ರಾಡ್, ಬಡಿಗೆ ಕಟ್ಟಿಗೆಗಳಿಂದ ನಾಯಿಗೆ ಬಡಿದಂತೆ ಚೆಂದ ಮಾಡಿ ಬಡಿದು ಬಡಿದು ಕೊಂದಿದ್ದಾರೆ.

ದಿನಾಂಕ ೦೮-೦೮-೨೦೧೫ರಂದು ಪೊಲೀಸರು ಗ್ರಾಮಕ್ಕೆ ಭೇಟಿ ನೀಡಿ ಆ ಐವರ ಶವಗಳನ್ನು ವಶಕ್ಕೆ ಪಡೆದುಕೊಂಡು ಶವ ಪರೀಕ್ಷೆಗೆ ಕಳಿಸಿದರು.

– ಹೀಗೆ ಜಾರ್‍ಖಂಡ್‌ನಲ್ಲಿ ಒಟ್ಟು ಈಗಾಗಲೇ ೭೫೦ ಜನ ಮಹಿಳೆಯರನ್ನು ಮಾಟಗಾತಿಯರೆಂಬ ಆರೋಪ, ಶಂಕೆ, ಅನುಮಾನಾಸ್ಪದದ ಮೇಲೆ, ಹೀಗೆ ಕೊಂದಿರುವರು.

ನಮ್ಮಲ್ಲಿ ಹಳ್ಳಿಗಳಲ್ಲಿ – ಪಟ್ಟಣಗಳಲ್ಲಿ – ಹೀಗೆ ಮಾಟಗಾರರು ಮಾಟಗಾತಿಯರಿದ್ದಾರೆ! ಅವರ ಬಗ್ಗೆ ಪೊಲೀಸ್ಸರಿಗೆ ದೂರು ನೀಡಬಹುದಾಗಿದೆ. ಸುಮ್ಮನೆ ನೋಡಿ, ಕೇಳಿ, ಓದಿ ಸುಮ್ಮನಿರಬೇಡಿ…
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...