Home / ಲೇಖನ / ಇತರೆ / ಖ್ಯಾತ ನಟರಾಗಿ…

ಖ್ಯಾತ ನಟರಾಗಿ…

ಸಿನಿಮಾ ನಟರೂ ಎಲ್ಲರಂತೆ ಮನುಷ್ಯರು. ನಟನೆಯನ್ನೇ ವೃತ್ತಿ ಪ್ರವೃತ್ತಿಯನ್ನಾಗಿಸಿಕೊಂಡು ತರಬೇತಿ ಪಡೆದುಕೊಂಡು ಕೆಲವರು ಖ್ಯಾತ ನಟರೆನಿಸಿರುವರು. ಅದೂ ಅವರ ವರಮಾನದ ಮೇಲೆ…

ಈಗೀಗ ಭವ್ಯಭಾರತದಲ್ಲಿ ಬಾಲಿವುಡ್ ಚಿತ್ರಗಳ ಬಾಕ್ಸ್‌ಆಫೀಸ್ ಗಳಿಕೆ ನೂರಾರು ಕೋಟಿ ರೂಪಾಯಿ ಮೀರುತ್ತಿವೆಯಾದರೂ ಅವುಗಳ ಸಂಪಾದನೆ ಹಾಲಿವುಡ್ ಚಿತ್ರಗಳನ್ನು ಮೀರಿಸುತ್ತಿಲ್ಲವೆಂಬ ಮಾತು ಅಲ್ಲಲ್ಲಿ ದಟ್ಟವಾಗಿ ಕೇಳಿ ಬರುತ್ತಿದೆ!

ಬೆಂಕಿಯಿಲ್ಲದೆ ಹೊಗೆ ಏಳದು ಎಂಬಂತೆ ಆಗಸ್ಟ್ ೨೦೧೫ರಲ್ಲಿ ಫೋರ್‍ಬ್ಸ್ ಪ್ರಕಟಿಸಿರುವ ವಿಶ್ವದ ಸಿರಿವಂತರ ಮಹಾಪಟ್ಟಿಯಲ್ಲಿ ಮುಂಬಯಿಯ ಐವರು ನಟರು ಇದ್ದಾರೆ!

ಈ ಹಿಂದೆ- ಶಾರುಖ್ ಖಾನ್ ಅವರು ಇದೇ ಫೋರ್‍ಬ್ಸ್ ಪಟ್ಟಿಯಲ್ಲಿದ್ದಿದು ತಮಗೆಲ್ಲ ತಿಳಿದಿರಬಹುದು ಎಂದುಕೊಂಡಿದ್ದೇನೆ! ಆದರೆ… ಈ ಸಾರಿ ಅವರನ್ನು ಓವರ್ ಟೇಕ್ ಮಾಡಿ ಮತ್ತಷ್ಟು ನಟರು ಈಗಾಗಲೇ ಮುನ್ನುಗ್ಗಿವರು….

ಸೂಪರ್‌ಸ್ಟಾರ್‌ ಬಿಗ್‌ಬಿ ಅಮಿತಾಭ್ ಬಚ್ಚನ್- ಬ್ಯಾಡ್‌ಬಾಯ್ ಸಲ್ಮಾನ್ – ಆಕ್ಷನ್ ಕಿಂಗ್ ಅಕ್ಷಯ್ ಕುಮಾರ್, ಶಾರುಖ್ ಖಾನ್, ರಣಬೀರ್ ಕಪೂರ್‌- ಈ ಬಿಗ್ ಪಟ್ಟಿಯಲ್ಲಿ ಸ್ಥಾನಮಾನ ಗಿಟ್ಟಿಸಿಕೊಳ್ಳುವಲ್ಲಿ ತೀರಾ ಯಶಸ್ವಿಯಾಗಿರುವರು.

ಬಹಳ ವಿಸ್ಮಯದ ಸಂಗತಿಯೆಂದರೆ… ಬಿಗ್‌ಬಿ ಅಮಿತಾಭ್ ಬಚ್ಚನ್ ಹಾಗೂ ಬ್ಯಾಡ್ ಬಾಯ್ ಸಲ್ಮಾನ್‌ಖಾನ್ ಸರಿಸಮಾನವಾಗಿ ಏಳನೆಯ ಅದ್ಭುತ ಸ್ಥಾನಮಾನವನ್ನು ಹಂಚಿಕೊಂಡಿರುವರು!

ಅದೇ ಒಂಭತ್ತನೆಯ ರ್‍ಯಾಂಕ್‌ನಲ್ಲಿ ನಮ್ಮ ಆಕ್ಷನ್‌ಕಿಂಗ್ ಅಕ್ಷಯ್‌ ಕುಮಾರ್‌ ಪಡೆಯುವಲ್ಲಿ ಸಫಲರಾಗಿರುವರು.

ಅಮಿತಾಭ್ ಮತ್ತು ಸಲ್ಮಾನ್‌ಖಾನ್ ವಾರ್ಷಿಕವಾಗಿ ಇವರೀರ್ವರು ೨೧೩ ಕೋಟಿ ರೂಪಾಯಿ ಗಳಿಕೆ ಹೊಂದಿರುವರು. ಅದೇ ಅಕ್ಷಯ್‌ ವಾರ್ಷಿಕವಾಗಿ ೨೦೭ ಕೋಟಿ ವರಮಾನ ಹೊಂದಿರುವರು. ಶಾರುಖ್ ಖಾನ್ ೧೬೫ ಕೋಟಿ ರೂಪಾಯಿ ಗಳಿಕೆ ಹೊಂದಿದ್ದು ೧೮ನೆಯ ಸ್ಥಾನದಲ್ಲಿ ಉಳಿದಿದ್ದಾರೆ. ಇನ್ನು ೩೦ನೆಯ ಬ್ಯಾಂಕಿನಲ್ಲಿ ರಣಬೀರ್ ಕಪೂರ್ ಇದ್ದು ೯೫ ಕೋಟಿ ರೂಪಾಯಿಗೆ ತೃಪ್ತಿಪಟ್ಟು ಕೊಂಡಿರುವರು.

ಅಬ್ಬಾ! ಬಾಲಿವುಡ್‌ನ ಇಷ್ಟೂ ನಟರ ಗಳಿಕೆಯು ವಾರ್ಷಿಕವಾಗಿ ೮೯೫ ಕೋಟಿ ರೂಪಾಯಿ ಮುಟ್ಟಿದೆ.

ಆದ್ದರಿಂದ ಮಕ್ಕಳೆ ನೀವೆಲ್ಲ ಇನ್ನು ಮುಂದೆ ಸಿನಿಮಾ ನಟರಾಗುವ ಗುರಿ ಹೊಂದಿರಿ. ಅದಕ್ಕಾಗಿ ನಟನೆ, ಮಾತು, ಹಾಸ್ಯ, ಮೈಕಟ್ಟು ಹೊಂದಿ. ಬರೀ ಡಾಕ್ಟರ್ ಇಂಜಿನಿಯರ್ ಐ‌ಎ‌ಎಸ್, ಐಪಿ‌ಎಸ್ ಎಂದು ಹತ್ತರಲ್ಲಿ ಹನ್ನೊಂದನೆಯವರಾಗಿ ಕೊರಗದಿರಿ, ಪುಸ್ತಕದ ಹುಳುವಾಗದಿರಿ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...