ಕಾಡುತಾವ ನೆನಪುಗಳು – ೩೨

ಕಾಡುತಾವ ನೆನಪುಗಳು – ೩೨

ನನಗೂ ವಯಸ್ಸಾಯ್ತಲ್ಲ ಚಿನ್ನು… ಜೊತೆಗೆ ಈ ಮಾನಸಿಕ ‘ಖಿನ್ನತೆ’ ಬೇರೆ… ಹೀಗಾಗಿ ನಾನೆಲ್ಲೂ ಹೋಗುವುದೇ ಇಲ್ಲ. ಹೊರಗೊಂದು ಪ್ರಪಂಚವೊಂದಿದೆ ಎಂಬುದನ್ನು ಮರೆಯಲು ಯತ್ನಿಸುತ್ತಿದ್ದೇನೆ… ಯಾರಾದರೂ ನೋಡಲು ಮಾತನಾಡಲು ಬರುತ್ತಾರೆಂದರೆ, ನಾನು ಮುಖ ತಪ್ಪಿಸಿಕೊಳ್ಳುತ್ತೇನೆ. ಈಗ ನನಗೆ ಒಂಟಿತನದ ಭೂತದ ಭಯವಿಲ್ಲ… ನಾನೇ ಅದರೊಳಗೆ ಸೇರಿಕೊಂಡುಬಿಟ್ಟಿದ್ದೇನೆ. ಕೆಳಗಿನ ದೊಡ್ಡಮನೆ ಅವ್ವನ ನೆನಪುಗಳಿಂದ ತುಂಬಿರುವುದರಿಂದ, ತಾರಸಿಯ ಮೇಲೊಂದು ರೂಮು ಕಟ್ಟಿಸಿಕೊಂಡು, ನನ್ನ ಲೈಬ್ರರಿ, ಅವಶ್ಯಕತೆಗಳಿರುವ ಪಾತ್ರೆಗಳೊಂದಿಗೆ Shift ಆಗಿದ್ದೇನೆ. ನನಗೀಗ ಅರಮನೆಯೂ ಈ ಪುಟ್ಟ ಗೂಡು ಒಂದೇ ಆಗಿದೆ. ಆಮೆ ಚಿಪ್ಪಿನೊಳಗೆ ಅಡಗಿಕೊಳ್ಳುವಂತೆ ನನ್ನ ‘ಖಿನ್ನತೆ’ಯ ಚಿಪ್ಪಿನೊಳಗೆ ಅಡಗಿಕೊಂಡಿದ್ದೇನೆ.

ಇನ್ನೇನು ನಿನ್ನ ಮೆಡಿಕಲ್ ಕೋರ್ಸ್ ಮುಗಿಯುತ್ತಾ ಬಂದಿತಲ್ವಾ? ಡಾಕ್ಟರಾಗುವ ನಿನ್ನ ತಾಯಿ-ತಂದೆಯ ನಿನ್ನ ಕನಸು ನನಸಾಗಿದ್ದು, ನನಗೆ ನೆಮ್ಮದಿ, ಸಂತೋಷ ತಂದಿತೆ ಇಷ್ಟೆಲ್ಲಾ ಬರೆದು ತಲೆಕೆಡಿಸಿದೇಂತ ಭಾವಿಸಬೇಡಾ. ನೀನು ಪ್ರಬುದ್ಧ ಹುಡುಗಿ, ತರ್ಕಬದ್ಧವಾಗಿ ಯೋಚಿಸುತ್ತೀಯಾ… ಜಾಣೆ ಕೂಡಾ. ಸಾವು-ಹುಟ್ಟು ನಮ್ಮ ಕೈಲಿಲ್ಲ. ಆದರೆ ಬದುಕು ನಮ್ಮದು… ನಾವೇ ಕಟ್ಟಿಕೊಳ್ಳಬೇಕೆಂದು ಎಲ್ಲರೂ ಬುದ್ದಿ ಹೇಳುತ್ತಾರೆ. ಆದರದು ತುಂಬಾ ಕಷ್ಟ, ಕಠಿಣ ಕಣೆ…! ಬೇವಿನ ಮರದ ಬುಡಕ್ಕೆ ನೀನೂ ದಿನವೂ ಬೆಲ್ಲದ ನೀರು ಸುರಿದು ಬೆಳೆಸಿದರೂ, ದೊಡ್ಡದಾದ ಮೇಲೆ ಅದು ಕೊಡುವುದು, ಬೇವಿನ ಹಣ್ಣನ್ನೇ ಮಾವಿನ ಹಣ್ಣನಲ್ಲ. ನನ್ನನ್ನು ಕಾಡಿದ್ದು ನನ್ನ ವ್ಯಕ್ತಿತ್ವ, ಇದರಲ್ಲಿ ಆನುವಂಶೀಯತೆಯೂ ಕಾರಣವಾಗಿರುತ್ತದೆ. ಆದರೆ ನಾವುಗಳು ಶಿಲೆಯನ್ನು ಉಳಿಯಿಂದ ಕೆತ್ತಿ-ಕೆತ್ತಿ ಸುಂದರ ಮೂರ್ತಿಯನ್ನಾಗಿ ಮಾಡಿಕೊಳ್ಳಬೇಕಾಗುತ್ತದೆ. ಅದೇ ಬದುಕು ಕಟ್ಟಿಕೊಳ್ಳುವ ರೀತಿ ಮಗಳೇ. ಕೆಟ್ಟವುಗಳನ್ನೆಲ್ಲಾ ವರ್ಜಿಸಿ, ಅಧ್ಯಯನ, ಒಳ್ಳೆಯ ಗೆಳತಿಯರು, ಸಜ್ಜನರ ಸಂಗದಿಂದ ನಮ್ಮ ವ್ಯಕ್ತಿತ್ವವನ್ನು ತಿದ್ದಿಕೊಳ್ಳಬಹುದು. ಆದರೆ ನಾನು ಹಾಗೆ ಮಾಡಲಿಲ್ಲ. ಆನೇ ನಡೆದಿದ್ದೇ ದಾರಿಯೆಂಬಂತೆ ನಡೆದಿದ್ದೇನೋ… ಏನೋ… ನಂಗೆ ಗೊತ್ತಿಲ್ಲ…!

ಒಳ್ಳೆಯ ಬದುಕು ಕಟ್ಟಿಕೊಳ್ಳಲು ‘ಡಿಗ್ರಿ’ಗಳು ಬೇಕಾಗಿಲ್ಲ ಚಿನ್ನು. ಜಾಣತನ, ಸಮಯಸ್ಫೂರ್ತಿ, ಸಂಯಮ, ಸಮತೋಲನ, ದೂರದೃಷ್ಟಿ ಮುಖ್ಯವಾಗುತ್ತದೆ. ಅರೇ ನನಗಿರಲಿಲ್ಲಾಂತ ಅನ್ನಿಸುತ್ತದೆ. ಭಾವನೆಗಳೊಂದಿಗೇ ಬದುಕಲು ಆಗದು ಎಂಬುದಕ್ಕೆ ನಾನೇ ಉದಾಹರಣೆ. ತಿರಸ್ಕೃತಳಾಗಿ, ಶಾಪಗ್ರಸ್ತಳಂತೆ, ಬದುಕಿದ ನನ್ನ ಬದುಕೂ ಒಂದು ಬದುಕೇ?

ಏನೂ ಬೇಕೆನ್ನಿಸುವುದಿಲ್ಲ. ಕಾಲನೇಮಿಯ ಕರೆಗಾಗಿ ಕಾಯುತ್ತಾ ಇದ್ದೇನೆ. ಹೋಗಲಿ ಬಿಡು… ನನ್ನ ಬಗ್ಗೆ ತಲೆ ಕೆಡಿಸಿಕೊಳ್ಳಬೇಡ. ನಾನು ನನ್ನಂತೆಯೇ ಆರಾಮವಾಗಿದ್ದೇನೆ. ನಿರ್ಭಾವುಕೆ, ನಿರ್ಲಿಪ್ತತೆಯ ಹೊದಿಕೆಯನ್ನು ಹೊದ್ದು ಬದುಕಿದ್ದೇನೆ. ಕಳೆದುಕೊಳ್ಳಲೂ ಏನೂ ಇಲ್ಲ. ಪಡೆದುಕೊಳ್ಳುವಂತಹುದೂ ಯಾವುದೂ ಇಲ್ಲ. ಅಂತಹ ನಿರೀಕ್ಷೆಗಳೂ ಉಳಿದಿಲ್ಲ ಮಗಳೇ.

ಇನ್ನು… ಸಾಕು… ನಿಲ್ಲಿಸುತ್ತೇನೆ. ಬದುಕಿನಲ್ಲಿ ಹೆಕ್ಕಿ ತೆಗೆದ ಕಾಡುತ್ತಿರುವ ನೆನಪುಗಳು. ಅವುಗಳು ನನ್ನವು… ನಿನ್ನವಾಗಬಾರದೆಂದು,

ಹಾರೈಸುವ…

ನಿನ್ನ ಅವ್ವಾ
ಮುಗಿಯಿತು

ಚಿತ್ರಗಳು

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾಮುಕ
Next post ಕಂಚಿನ ಶಿರ

ಸಣ್ಣ ಕತೆ

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ನೆಮ್ಮದಿ

    ಅವನಿಗೆ ನೆಮ್ಮದಿ ಬೇಕಿತ್ತು. ಆ ಜನನಿಬಿಡ ರಸ್ತೆಯ ಪಕ್ಕದಲ್ಲಿರುವ ನ್ಯೂಸ್ ಪೇಪರ್ ಸ್ಟಾಲಿಗೆ ತಾಗಿ ನಿಂತು ಅವನು ರಸ್ತೆಯನ್ನು ವೀಕ್ಷಿಸುತ್ತಿದ್ದ. ಸೂರ್‍ಯೋದಯವಾಗಿ ಕೆಲವೇ ಗಂಟೆಗಳಾಗಿರಬಹುದು. ಜಾತ್ರೆಗೆ ಸೇರಿದಂತೆ… Read more…

  • ದೇವರ ನಾಡಿನಲಿ

    ೧೯೯೮ ಜೂನ್ ತಿಂಗಳ ಮೊದಲ ವಾರದಲ್ಲಿ ನಾ ದೇವರನಾಡಿನಲಿ, ವಿಭಾಗೀಯ ಸಾರಿಗೆ ಅಧಿಕಾರಿ ಎಂದು, ವಿಭಾಗೀಯ ಕಛೇರಿ ಮಂಗಳೂರು ವಿಭಾಗ ಅಂದರೆ.... ದಕ್ಷಿಣ ಕನ್ನಡ ಜಿಲ್ಲೆಯಲ್ಲಿ... ಹರ್ಷದಿ,… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…