Home / ಕವನ / ಅನುವಾದ / ಕಂಚಿನ ಶಿರ

ಕಂಚಿನ ಶಿರ

ಮೂಲ: ವಿಲಿಯಂ ಬಟ್ಲರ್ ಏಟ್ಸ್

ಇಲ್ಲಿ ಬಾಗಿಲಿನ ಬಲಭಾಗದಲ್ಲೇ ಇದೆ ಕಂಚಿನ ಶಿರ;
ಮಾನುಷ, ಅತಿಮಾನುಷ, ದುಂಡನೆ ಹಕ್ಕಿಗಣ್ಣು
ಇನ್ನೆಲ್ಲ ಉದುರಿ ನಿಸ್ತಬ್ಬ ನಿಶ್ಚೇಷ್ಟಿತ.
ಗೋರಿಯಲೆಯುವ ಜೀವ ದಿಗಂತದುದ್ದಕ್ಕೂ ಬೀಸಿ ಹಾಯುತ್ತಿದೆ
(ಉಳಿದೆಲ್ಲ ಅಳಿದರೂ ಬೇರೆ ಏನೋ ಸುಳಿಯಬಹುದು ಅಲ್ಲಿ);
ತನ್ನ ಶೂನ್ಯತೆಯರಿವು ತರುವ ಸನ್ನಿಯ ಭಾವೋದ್ವೇಗದುಗ್ರತೆಯನ್ನು
ಶಮನವಾಗಿಸುವಂಥದೇನೂ ಅಲ್ಲಿಲ್ಲ.

ಗೋರಿಯಲೆದವಳಲ್ಲ ಹಿಂದೆ. ಇಡಿ ವ್ಯಕ್ತಿತ್ವ
ಘನ ಉದಾತ್ತತೆಯ ಪ್ರಭೆಯಿಂದ ತುಂಬಿದ ಹಾಗೆ.
ಬಲು ಸಭ್ಯ ಮಹಿಳೆ; ಹೇಳಬಲ್ಲರು ಯಾರು,
ವ್ಯಕ್ತಿತ್ವವೊಂದರ ಯಾವ ಮುಖ ಅದರ ನಿಜ ಸಾರ ತೋರೀತೆಂದು?
ಸಾರವೂ ಭಿನ್ನ ಮೂಲಾಂಶಗಳ ಮಿಶ್ರಣ
ಇದ್ದೀತು ಎಂದ ಮೇಧಾವಿ ಮೆಕ್ ಟ್ಯಾಗರ್‍ಟ್.
ಅಷ್ಟು ಸ್ವಲ್ಪದರಲ್ಲೆ ಉಸಿರು ಕಟ್ಟಿಸುವಂತೆ
ಬಾಳು ಸಾವುಗಳ ವಿರುದ್ಧ ತುದಿಯೆರಡನ್ನೂ ಬೆರಸಿ ಕಡೆದಂಥ ಮುಖ.

ಆರಂಭದಲ್ಲಿ ಇನ್ನೂ ಎಲ್ಲ ಹೊಸತು, ನಯ,
ಆ ದಿನಗಳಲ್ಲಿ ಕಂಡಿದ್ದೆ ಅವಳಲ್ಲೊಂದು
ವನ್ಯ ಉಚ್ಛೃಂಖಲತೆ, ನನಗೆ ಅನಿಸಿತ್ತಂದು
ಬಾಳು ಮುಂದೆಂದೊ ತಪ್ಪದೆ ಹಾಯಬೇಕಾದ
ಘೋರದರ್‍ಶನವೊಂದು ಅವಳಂತರಾತ್ಮವನ್ನೆ ಸಿಡಿಸಿಬಿಟ್ಟಿತೆಂದು.
ತನ್ನದಲ್ಲದ್ದೆಲ್ಲವನ್ನೂ ತನ್ನಾಚೆಗೆ ಕೊಡವಿ ನಡೆಯುವ ನೆಲೆಗೆ
ಸ್ನೇಹ ಕಲ್ಪನೆಯನ್ನು ನಡೆಸಿಬಿಟ್ಟಿತು; ನಾನು ಉದ್ವೇಗಗೊಂಡಿದ್ದೆ,
ನನ್ನ ಮಗುವೇ, ನನ್ನ ಮಗುವೆ ಎಂದಲ್ಲ ಕಡೆ ಉದ್ಗರಿಸಿ ತೊಳಲಿದ್ದೆ.

ಅಥವಾ ಅವಳನ್ನೊಂದು ಅಲೌಕಿಕ ಶಕ್ತಿಯೆಂದು ಬಗೆದೆ ನಾನು
ಕಠೋರ ನೇತ್ರವೊಂದು ಅವಳ ಕಣ್ಣನ್ನು ಹಾದು
ಈ ಕೀಳುಲೋಕದ ಪತನ ಕ್ಷತಿಗಳನ್ನು ನೋಡಿತೆಂಬಂತೆ;
ಕ್ಷುದ್ರಮೂಲಗಳು ಉನ್ನತಿಗೆ ಏರಿದ್ದನ್ನು
ಹಿರಿಮೂಲಗಳ ಸಾರ ಆರಿಹೋದದ್ದನ್ನು
ಪರಂಪರಾರ್‍ಜಿತ ಮುತ್ತನ್ನೆತ್ತಿ ಹಂದಿಗಳತ್ತ ಬೀಸಿ ಒಗೆದದ್ದನ್ನು
ಕೋಡಂಗಿ ಕೇಡಿಗರು ಭವ್ಯ ಕಣಸುಗಳನ್ನು
ಗೇಲಿಮಾಡಿದ್ದನ್ನು ಕಂಡಿತೆಂಬಂತೆ,
ಏನುಳಿಯಿತಿನ್ನು ತಪ್ಪಿಸಲು ನರಮೇಧಕ್ಕೆ ಎಂದು ಬೆರಗಾದಂತೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...