Home / ಕವನ / ಅನುವಾದ / ಕಂಚಿನ ಶಿರ

ಕಂಚಿನ ಶಿರ

ಮೂಲ: ವಿಲಿಯಂ ಬಟ್ಲರ್ ಏಟ್ಸ್

ಇಲ್ಲಿ ಬಾಗಿಲಿನ ಬಲಭಾಗದಲ್ಲೇ ಇದೆ ಕಂಚಿನ ಶಿರ;
ಮಾನುಷ, ಅತಿಮಾನುಷ, ದುಂಡನೆ ಹಕ್ಕಿಗಣ್ಣು
ಇನ್ನೆಲ್ಲ ಉದುರಿ ನಿಸ್ತಬ್ಬ ನಿಶ್ಚೇಷ್ಟಿತ.
ಗೋರಿಯಲೆಯುವ ಜೀವ ದಿಗಂತದುದ್ದಕ್ಕೂ ಬೀಸಿ ಹಾಯುತ್ತಿದೆ
(ಉಳಿದೆಲ್ಲ ಅಳಿದರೂ ಬೇರೆ ಏನೋ ಸುಳಿಯಬಹುದು ಅಲ್ಲಿ);
ತನ್ನ ಶೂನ್ಯತೆಯರಿವು ತರುವ ಸನ್ನಿಯ ಭಾವೋದ್ವೇಗದುಗ್ರತೆಯನ್ನು
ಶಮನವಾಗಿಸುವಂಥದೇನೂ ಅಲ್ಲಿಲ್ಲ.

ಗೋರಿಯಲೆದವಳಲ್ಲ ಹಿಂದೆ. ಇಡಿ ವ್ಯಕ್ತಿತ್ವ
ಘನ ಉದಾತ್ತತೆಯ ಪ್ರಭೆಯಿಂದ ತುಂಬಿದ ಹಾಗೆ.
ಬಲು ಸಭ್ಯ ಮಹಿಳೆ; ಹೇಳಬಲ್ಲರು ಯಾರು,
ವ್ಯಕ್ತಿತ್ವವೊಂದರ ಯಾವ ಮುಖ ಅದರ ನಿಜ ಸಾರ ತೋರೀತೆಂದು?
ಸಾರವೂ ಭಿನ್ನ ಮೂಲಾಂಶಗಳ ಮಿಶ್ರಣ
ಇದ್ದೀತು ಎಂದ ಮೇಧಾವಿ ಮೆಕ್ ಟ್ಯಾಗರ್‍ಟ್.
ಅಷ್ಟು ಸ್ವಲ್ಪದರಲ್ಲೆ ಉಸಿರು ಕಟ್ಟಿಸುವಂತೆ
ಬಾಳು ಸಾವುಗಳ ವಿರುದ್ಧ ತುದಿಯೆರಡನ್ನೂ ಬೆರಸಿ ಕಡೆದಂಥ ಮುಖ.

ಆರಂಭದಲ್ಲಿ ಇನ್ನೂ ಎಲ್ಲ ಹೊಸತು, ನಯ,
ಆ ದಿನಗಳಲ್ಲಿ ಕಂಡಿದ್ದೆ ಅವಳಲ್ಲೊಂದು
ವನ್ಯ ಉಚ್ಛೃಂಖಲತೆ, ನನಗೆ ಅನಿಸಿತ್ತಂದು
ಬಾಳು ಮುಂದೆಂದೊ ತಪ್ಪದೆ ಹಾಯಬೇಕಾದ
ಘೋರದರ್‍ಶನವೊಂದು ಅವಳಂತರಾತ್ಮವನ್ನೆ ಸಿಡಿಸಿಬಿಟ್ಟಿತೆಂದು.
ತನ್ನದಲ್ಲದ್ದೆಲ್ಲವನ್ನೂ ತನ್ನಾಚೆಗೆ ಕೊಡವಿ ನಡೆಯುವ ನೆಲೆಗೆ
ಸ್ನೇಹ ಕಲ್ಪನೆಯನ್ನು ನಡೆಸಿಬಿಟ್ಟಿತು; ನಾನು ಉದ್ವೇಗಗೊಂಡಿದ್ದೆ,
ನನ್ನ ಮಗುವೇ, ನನ್ನ ಮಗುವೆ ಎಂದಲ್ಲ ಕಡೆ ಉದ್ಗರಿಸಿ ತೊಳಲಿದ್ದೆ.

ಅಥವಾ ಅವಳನ್ನೊಂದು ಅಲೌಕಿಕ ಶಕ್ತಿಯೆಂದು ಬಗೆದೆ ನಾನು
ಕಠೋರ ನೇತ್ರವೊಂದು ಅವಳ ಕಣ್ಣನ್ನು ಹಾದು
ಈ ಕೀಳುಲೋಕದ ಪತನ ಕ್ಷತಿಗಳನ್ನು ನೋಡಿತೆಂಬಂತೆ;
ಕ್ಷುದ್ರಮೂಲಗಳು ಉನ್ನತಿಗೆ ಏರಿದ್ದನ್ನು
ಹಿರಿಮೂಲಗಳ ಸಾರ ಆರಿಹೋದದ್ದನ್ನು
ಪರಂಪರಾರ್‍ಜಿತ ಮುತ್ತನ್ನೆತ್ತಿ ಹಂದಿಗಳತ್ತ ಬೀಸಿ ಒಗೆದದ್ದನ್ನು
ಕೋಡಂಗಿ ಕೇಡಿಗರು ಭವ್ಯ ಕಣಸುಗಳನ್ನು
ಗೇಲಿಮಾಡಿದ್ದನ್ನು ಕಂಡಿತೆಂಬಂತೆ,
ಏನುಳಿಯಿತಿನ್ನು ತಪ್ಪಿಸಲು ನರಮೇಧಕ್ಕೆ ಎಂದು ಬೆರಗಾದಂತೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...