Home / ಕವನ / ಅನುವಾದ / ಭೂತದರ್‍ಶನ

ಭೂತದರ್‍ಶನ

ಮೂಲ: ವಿಲಿಯಂ ಬಟ್ಲರ್ ಏಟ್ಸ್

ರಕ್ಷಣೆ ಇದೆಯೆಂತಲೇ ಅಣಕದ ಮಾತಿನಲ್ಲಿ
ಭೂತ ದರ್‍ಶನ ಕುರಿತು ಮಾತನಾಡಿದೆ ನಾನು.
ದಿಟ್ಟವೋ ಸೊಟ್ಟವೋ ಒಟ್ಟು ಜನರುಚಿಯಲ್ಲೇ
ಎಳ್ಳಷ್ಟೂ ವಿಶ್ವಾಸ ಇಲ್ಲವೆಂದೇ ಅದನ್ನು
ಸಾಧಿಸುವ, ಸಂಭಾವ್ಯವೆಂದು ವಾದಿಸುವ
ಗೋಜಿಗೇ ನಾ ಹೋಗಲಿಲ್ಲ. ನಿಜವೆಂದರೆ
ಭೂತ ಕಂಡಿದೆ ನನಗೆ ಹದಿನೈದು ಥರದಲ್ಲಿ,
ಗೂಟಕ್ಕೆ ನೇತ ಕೋಟು ಬಹು ಘೋರ ಅದರಲ್ಲಿ.

ಯೋಜಿಸಿ ಸಾಧಿಸಿದ್ದು ನನ್ನ ಅರೆ‌ಏಕಾಂತ,
ಅದರ ಅರ್‍ಧ ಪ್ರಿಯವಾದ್ದೂ ಇಲ್ಲ ಈತನಕ,
ನಟ್ಟಿರುಳವರೆಗೆ ಮಲಗದೆ ಕೂರಬಹುದು.
ತಿಳಿಯದಿದ್ದಾಗಲೂ ನನ್ನ ಮಾತಿನ ಅರ್‍ಥ
ತೋರಗೊಡದಂಥ ಸೂಕ್ಷ್ಮಮತಿ ಜೊತೆಗೆ
ಕೂತು ಏನೇನೆಲ್ಲ ಹರಟಬಹುದಲ್ಲ.
ಭೂತ ಕಂಡಿದೆ ನನಗೆ ಹದಿನೈದು ಥರದಲ್ಲಿ,
ಗೂಟಕ್ಕೆ ನೇತ ಕೋಟು ಬಹು ಘೋರ ಅದರಲ್ಲಿ.

ಮುದುಕನಾಗುತ್ತ ಹೋದಂತೆ ಒಬ್ಬ ಮನುಷ್ಯ
ಆಳವಾಗುತ್ತದೆ ಅವನ ಸಂತೋಷ,
ತುಂಬಿಬಿಡುತ್ತದೆ ಅವನ ಖಾಲಿ ಎದೆ ಕೊನೆಗೆ,
ಇಂಥ ಬಲವೆಲ್ಲದರ ಅಗತ್ಯವಿದೆ ಅವನಿಗೆ,
ಏಕೆಂದರೆ ಇರುಳು ಬೆಳೆಯುತ್ತ ಇರುತ್ತದೆ
ಭಯ ರಹಸ್ಯಗಳನ್ನು ತೆರೆಯುತ್ತ ಇರುತ್ತದೆ.
ಭೂತ ಕಂಡಿದೆ ನನಗೆ ಹದಿನೈದು ಥರದಲ್ಲಿ,
ಗೂಟಕ್ಕೆ ನೇತ ಕೋಟು ಬಹು ಘೋರ ಅದರಲ್ಲಿ.
*****

Tagged:

Leave a Reply

Your email address will not be published. Required fields are marked *

ಲಲಿತೆ ಬಾಲವಿದವೆ. ಮದುವೆಯಾದ ಮೂರು ತಿಂಗಳಿಗೆ ಗಂಡ ಸಿಡುಬಿನಲ್ಲಿ ಸತ್ತ. ಲಲಿತೆ ಕುಂಕುಮವಳಿಸಿದಳು. ಒಂದೆರಡು ತಿಂಗಳ ನಂತರ ಕಣ್ಣೀರನ್ನೊರೆಸಿ ಮುಖ ತೊಳೆದುಕೊಂಡು ತನ್ನ ವಿದ್ಯಾಭ್ಯಾಸವನ್ನು ಮುಂದುವರಿಸಿದಳು. ಅವಳು ಆಗ ತಾನೇ ಇಂಟಿರ್‌ ಮೀಡಿಯಟ್‌ ಪಾಸುಮಾಡಿದ್ದಳು. ಎಂ. ಬಿ. ಬಿ. ಎಸ್...

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...