Home / ಕವನ / ಅನುವಾದ / ಸರ್‍ಕಸ್ ಕಂಪೆನಿ ಮುಚ್ಚಿದ್ದು

ಸರ್‍ಕಸ್ ಕಂಪೆನಿ ಮುಚ್ಚಿದ್ದು

ಮೂಲ: ವಿಲಿಯಂ ಬಟ್ಲರ್ ಏಟ್ಸ್

ಕವನಕ್ಕೆ ವಸ್ತು ಸಿಗಲಿಲ್ಲ, ವ್ಯರ್‍ಥ ಪ್ರಯತ್ನಿಸಿದ್ದೆಲ್ಲ
ಪ್ರತಿದಿನ ಪರದಾಟ, ಆರುವಾರ ಕಳೆದರೂ ಇಲ್ಲ,
ಶಾಂತನಾಗುವುದೆ ಉತ್ತಮ ಮುದುಕ ಅಲ್ಲಿಗೆ;
ವಯಸ್ಸಾಗುವ ಮುಂಚೆ ಪ್ರತಿ ಚಳಿಗಾಲ ಬೇಸಿಗೆ
ಆಟಕ್ಕಿದ್ದವು ನನ್ನ ಸರ್‍ಕಸ್ ಪ್ರಾಣಿಗಳೆಲ್ಲ
ಮೆಟ್ಟುಗಾಲನ್ನು ಕಟ್ಟಿಕೊಂಡ ಆ ಹುಡುಗರು,
ಕಣ್ಣು ಕುಕ್ಕುವ ಹಾಗೆ ಥಳಥಳಿಸುತ್ತಿದ್ದ ರಥ,
ಸಿಂಹಗಳು ಹೆಣ್ಣುಗಳು ಏನೆಲ್ಲ, ಎಲ್ಲ ಆ ದೇವರೇ ಬಲ್ಲ.

ಇನ್ನೇನಿದೆ ಹೊರಡುವುದೆ ಹಳೆವಸ್ತುಗಳ ಸ್ಮರಣೆಗೆ:
ಮೂಗುದಾರಕ್ಕೆ ಸಿಕ್ಕು ಮೂರುಮೋಹಕ ದ್ವೀಪಗಳಲ್ಲಿ
ವ್ಯರ್‍ಥ ಹರ್‍ಷ, ವ್ಯರ್‍ಥಯುದ್ಧ ವ್ಯರ್‍ಥ ಶಾಂತಿಗಳ
ರೂಪಕ ಸ್ವಪ್ನಗಳಲ್ಲಿ ನಡೆದ ಕಡಲ ಸವಾರ
ಉಷೀನ್ ಬರುತ್ತಾನೆ ಎಲ್ಲಕ್ಕೂ ಮೊದಲಲ್ಲಿ
ಕಹಿಯುಂಡ ಹೃದಯ ಆಯ್ದಂಥ ವಸ್ತುಗಳು,
ಗತಯುಗದ ಗೀತಕ್ಕೆ, ಆಸ್ಥಾನದಬ್ಬರಕ್ಕೆ ಹೇಳಿಸಿದ ವಿಷಯಗಳು.
ಅವನನ್ನಲೆಸಿದ ನಾನೇ ಎಷ್ಟು ಬೆಲೆ ಕೊಟ್ಟಿದ್ದೆ ಅವನ ಕಷ್ಟಕ್ಕೆ?
ಅವನ ಕನಸಿನ ಕನ್ನೆಯನ್ನು ನಾನೇ ಬಯಸಿ ಕಂಗಾಲಾಗಿದ್ದೆ.

ಮುಂದೆ ಆಟಕ್ಕಿಳಿದದ್ದು ಅದರ ವಿರೋಧೀ ಸತ್ಯ:
ನಾ ಕೊಟ್ಟ ಹೆಸರು ಕ್ಯಾಥಲೀನಿನ ರಾಣಿ, ಆ ಹೆಣ್ಣ ಚಿತ್ತ
ಮರುಕಕ್ಕೆ ತುತ್ತಾಗಿ, ತೆತ್ತುಕೊಂಡರೆ ತನ್ನಾತ್ಮವನ್ನೇ ಹುಚ್ಚಿಗೆ,
ಇಳಿದು ಬಂದಿತು ಸ್ವರ್‍ಗ ಅವಳನ್ನು ರಕ್ಷಿಸಲು ಪ್ರದರ್‍ಶಿಸುತ ಮೆಚ್ಚಿಗೆ.
ಆತ್ಮನಾಶದ ಕಡೆಗೆ ಸಾಗಿದ್ದಾಳೆ ಪ್ರಿಯ ಎಂದೇ ಅನಿಸಿತ್ತು.
ಮತ ಭ್ರಾಂತಿ ದ್ವೇಷಕ್ಕೆ ಸಿಕ್ಕು ಅವಳಾತ್ಮ ತುತ್ತಾಗಿ ಹೋಗಿತ್ತು.
ಮುಂದೆ ಹೊಸ ಕನಸೊಂದಕ್ಕೆ ಇದೇ ಎಡೆಮಾಡಿತು.
ನನ್ನ ಚಿಂತನೆ ಒಲವು ಅದಕ್ಕೇ ಮುಡಿಪಾಯಿತು.

ಆ ಮೂರ್‍ಖ ಕುರುಡರು ರೊಟ್ಟಿ ಕದ್ದಾಗ
ಅದಮ್ಯ ಸಾಗರದ ಜೊತೆ ಕುಹುಲೇನ್ ಹೋರಾಡಿದ.
ಹೃದಯ ರಹಸ್ಯಗಳೇ ಅಲ್ಲಿ ಎಲ್ಲೆಡೆಗೂ, ಆದರೂ
ಮರುಳುಮಾಡಿದ್ದು ಕನಸೇ ನನ್ನನ್ನು ಕಡೆಗೂ:
ಕೃತಿಯಿಂದ ಮುಕ್ತವಾದಂಥ ಪಾತ್ರಗಳೇ
ಪ್ರಸ್ತುತವನ್ನು ತುಂಬ ಸ್ಮೃತಿಯನ್ನು ಆಳಿದ್ದು.
ಬಣ್ಣದ ವೇದಿಕೆ, ನಟರೇ ನನ್ನೊಲವ ಗಳಿಸಿದ್ದು,
ಆಟ ಸಂಕೇತಿಸಿದ ವಿಷಯವಲ್ಲ.

ಸರ್‍ವ ಸ್ವತಂತ್ರ ಆ ಪರಿಪೂರ್‍ಣ ಪ್ರತಿಮೆಗಳು
ಪರಿಶುದ್ಧ ಮನದಲ್ಲಿ ಬೆಳೆದರೂ ಮೊದಲಲ್ಲಿ ಎಲ್ಲಿಂದ ಮೊಳೆತವು?
ಎಸೆದ ‘ಬಿಸಾಕು’ಗಳ ತಿಪ್ಪೆ, ರಸ್ತೆಯ ಕಸದ ಗುಪ್ಪೆ,
ಹಳೆಸೀಸ, ಹಳೆಕೆಟಲು, ಸುಲಿದ ಬಾಳೆಯ ಸಿಪ್ಪೆ,
ಹಳೆಜಂಕು, ಮೂಳೆ ಕೊಳೆಚಿಂದಿ, ಮುರುಕಲು ಗೊಂಬೆ,
ಅಂಗಡಿಗಲ್ಲಕ್ಕೆ ಕೂತು ಕೂಗುವ ಗಲ್ಲಿಯ ರಂಭೆ,
ಈಗ ಏಣಿಯೆ ಇಲ್ಲ, ಕೆಳಗೆ ಮಲಗುವುದಷ್ಟೆ ಎಲ್ಲ ಏಣಿಗಳು ಶುರುವಾಗುವಲ್ಲಿ
ಚಿಂದಿ, ಮೂಳೆಗಳು ತುಂಬಿರುವ ಹೃದಯದ ಕೊಳೆ ಕಿರಾಣಿಯಂಗಡಿಯಲ್ಲಿ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...