ಬೆಳಕಾದ ಬೀಡು

ಯಾವ ಜನ್ಮದ ಪುಣ್ಯವೊ ಏನೊ
ನಾನಾಗಿಹೆನು ಕನ್ನಡಿಗ
ಕವಿ ಕಲ್ಪನೆಯ ಚೆಲುವಿಗು-ಮೀರಿದ
ಕಾಣುತಲಿಹೆನೀ ಸಿರಿಸಗ್ಗ
ಹನಿಯುತಲಿದೆಯೊ ನವ ಸ್ಫೂರ್ತಿಯ ಮಳೆ
ಅಮೃತ ಸಲೆಯಾಗಿ
ಹರಿಯುತಲಿದೆಯೊ ಸಾಹಿತ್ಯದ ಹೊಳೆ
ಕಲಕಲ ದನಿಯಾಗಿ
ಹಾಡುತಲಿದೆಯೊ ಕೋಗಿಲೆಯಾ ಮನ
ಸಪ್ತ ಸ್ವರವಾಗಿ
ಆಲಿಸಿ ಅರಳಿದೆ ರಸಿಕರ ಹೃನ್ಮನ
ಚೈತ್ರದ ಸುಮವಾಗಿ
ಸಹ್ಯಾದ್ರಿಯ ಸಲೆ ಮಲೆನಾಡಿನ ಮಲೆ
ನಂದನ ವನವಾಗಿ
ಬೇಲೂರಿನ ಕಲೆ ಗೊಮ್ಮಟನಾ ನೆಲೆ
ಶಿಲ್ಪದ ಬೀಡಾಗಿ
ವಿಶ್ವದ ಕಣ್ಮನ ಸೂರೆಗೊಂಡಿದೆ
ಚೆಲುವಿನ ಬಲೆಯಾಗಿ
ಕಲೆಯಿಂದಲಿ ಈ ಕನ್ನಡನಾಡು
ಬೆಳಗಿದೆ ಬೆಳಕಾಗಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಈರ ಯಾಕೆ ಹೋದ?
Next post ವಿವಿಧತೆಯಲ್ಲಿ ಏಕತೆಯ

ಸಣ್ಣ ಕತೆ

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…