Home / ಕವನ / ಕವಿತೆ / ಕಾಬೂಲಿವಾಲಾ

ಕಾಬೂಲಿವಾಲಾ

ಅಂದು ಬದುಕಿದ್ದೆ ನಾನು
ಕಾಬೂಲ್ ಖಂದಹಾರ್‌ನ
ಖರ್‍ಜೂರದ ಗಿಡದಂತೆ
ಸಿಹಿ ಹುಳಿಯ ಸಂಗಮ
ಅಂಗೂರದ ಬಳ್ಳಿಯಂತೆ
ಶಾಂತಿ ಕಾಲವೇ ಇರಲಿ
ಯುದ್ಧ ಕಾಲವೇ ಬರಲಿ
ಬಂದೂಕಿಲ್ಲದ ಬರಿಗೈಯಲಿ
ಕಂಡಿಲ್ಲ ಅವನ
ಸದಾ ಭಯದ ನೆರಳಿನಲೇ
ನನ್ನ ಬದುಕಿನ ಪಯಣ

ವಿಶ್ವವನ್ನೇ ನಿಯಂತ್ರಿಸಲು
ಹಿರಿಯಣ್ಣನ ಹಿಂಸೆಯಾದರೆ
ಒಳಗೆ ಮೀಸೆ ತಿರುಗಿಸುವ
ಪೌರುಷದ ಅಟ್ಟಹಾಸ
ಮಿದುಳಿನಲಿ ಗನ್ನುಗಳ ಸ್ಫೋಟ
ವ್ಯಾಪಕ ಭಯದ ನೋಟ
ಬಿಸಿ ತಟ್ಟಿದೆ ನನಗೆ
ಯುದ್ಧ ಕಾಲದಲೂ –
ಶಾಂತಿ ಸಮಯದಲೂ
ನನ್ನ ಹಕ್ಕುಗಳ ದಮನ
ಕ್ರೂರ ವ್ಯಾಘ್ರರ ನರ್‍ತನ.

ಭೀತಿಯಿಂದ ಧರ್‍ಮ ಪ್ರಶ್ನಿಸಲಿಲ್ಲ
ಹಕ್ಕಿನ ಅಧಿಕಾರ ಕೇಳಲಿಲ್ಲ
ದುಷ್ಟ ಶಿಕ್ಷೆಯ ಸಂದರ್‍ಭವಿರಲಿ
ರಾಷ್ಟ್ರ ರಕ್ಷಣೆಯ ಕಾವಲಿರಲಿ
ಧರ್‍ಮ ಯುದ್ಧದ ಜೇಹಾದೇ ಆಗಿರಲಿ
ಕಪಟ ನಾಟಕದ ಆಟದಲಿ
ಬಲಿಯಾದರು ನನ್ನವರು
ಹಿಂಸೆ-ಅಹಿಂಸೆ ಎರಡೂ ಶಬ್ದಗಳಿಗೂ
ಇಲ್ಲಿ ಒಂದೇ ಅರ್‍ಥ ಅನ್ವಯ
ಮನೆಯಿಂದ ರಣರಂಗದವರೆಗೂ

ಬಲಿಯಾದ ನನ್ನ ಕುಡಿಗಳು.
ನೋವಿನ ತೆಂಗಿನ ಮರದಲಿ
ಯಾತನೆಯ ಕೆಂಪು ರಕ್ತದ ಎಳನೀರು
ಮುಗ್ಧ ಮಕ್ಕಳ ಮಾರಣಹೋಮ
ಧರ್‍ಮ-ರಾಜಕೀಯದ ಸಾವು ನೋವುಗಳ
ಅನುಭವಿಸಿರುವೆ ನಾನು ಬಹಳ
ಸಹಿಸಲಾರೆ ಸಾವಿನಾಟವನು
ಸಾಕು ಮಾಡಿ ಮುಂಡಾಟಿಕೆ
ಬೇಕು ನನಗೆ ನೆಮ್ಮದಿಯ ನೆಲೆ
ಪುಟ್ಟ ಮನೆಯಂಗಳದಲಿ ತೆಂಗಿನಮರ
ನೆಮ್ಮದಿಯ ಶುದ್ಧ ಗಾಳಿ, ನೀರು
ಸಮವಸ್ತ್ರವಿಲ್ಲದ ಪುರುಷರು
ಬಂದೂಕಿಲ್ಲದ ಕೈಗಳು
ಜೀವಪೋಷಕ ಸಂಗಾತಿಗಳು
ಮನುಕುಲವನು ಪ್ರೀತಿಸುವ
ಕಾಬೂಲಿವಾಲಾಗಳು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...