Home / ಕವನ / ಕವಿತೆ / ಕಾಬೂಲಿವಾಲಾ

ಕಾಬೂಲಿವಾಲಾ

ಅಂದು ಬದುಕಿದ್ದೆ ನಾನು
ಕಾಬೂಲ್ ಖಂದಹಾರ್‌ನ
ಖರ್‍ಜೂರದ ಗಿಡದಂತೆ
ಸಿಹಿ ಹುಳಿಯ ಸಂಗಮ
ಅಂಗೂರದ ಬಳ್ಳಿಯಂತೆ
ಶಾಂತಿ ಕಾಲವೇ ಇರಲಿ
ಯುದ್ಧ ಕಾಲವೇ ಬರಲಿ
ಬಂದೂಕಿಲ್ಲದ ಬರಿಗೈಯಲಿ
ಕಂಡಿಲ್ಲ ಅವನ
ಸದಾ ಭಯದ ನೆರಳಿನಲೇ
ನನ್ನ ಬದುಕಿನ ಪಯಣ

ವಿಶ್ವವನ್ನೇ ನಿಯಂತ್ರಿಸಲು
ಹಿರಿಯಣ್ಣನ ಹಿಂಸೆಯಾದರೆ
ಒಳಗೆ ಮೀಸೆ ತಿರುಗಿಸುವ
ಪೌರುಷದ ಅಟ್ಟಹಾಸ
ಮಿದುಳಿನಲಿ ಗನ್ನುಗಳ ಸ್ಫೋಟ
ವ್ಯಾಪಕ ಭಯದ ನೋಟ
ಬಿಸಿ ತಟ್ಟಿದೆ ನನಗೆ
ಯುದ್ಧ ಕಾಲದಲೂ –
ಶಾಂತಿ ಸಮಯದಲೂ
ನನ್ನ ಹಕ್ಕುಗಳ ದಮನ
ಕ್ರೂರ ವ್ಯಾಘ್ರರ ನರ್‍ತನ.

ಭೀತಿಯಿಂದ ಧರ್‍ಮ ಪ್ರಶ್ನಿಸಲಿಲ್ಲ
ಹಕ್ಕಿನ ಅಧಿಕಾರ ಕೇಳಲಿಲ್ಲ
ದುಷ್ಟ ಶಿಕ್ಷೆಯ ಸಂದರ್‍ಭವಿರಲಿ
ರಾಷ್ಟ್ರ ರಕ್ಷಣೆಯ ಕಾವಲಿರಲಿ
ಧರ್‍ಮ ಯುದ್ಧದ ಜೇಹಾದೇ ಆಗಿರಲಿ
ಕಪಟ ನಾಟಕದ ಆಟದಲಿ
ಬಲಿಯಾದರು ನನ್ನವರು
ಹಿಂಸೆ-ಅಹಿಂಸೆ ಎರಡೂ ಶಬ್ದಗಳಿಗೂ
ಇಲ್ಲಿ ಒಂದೇ ಅರ್‍ಥ ಅನ್ವಯ
ಮನೆಯಿಂದ ರಣರಂಗದವರೆಗೂ

ಬಲಿಯಾದ ನನ್ನ ಕುಡಿಗಳು.
ನೋವಿನ ತೆಂಗಿನ ಮರದಲಿ
ಯಾತನೆಯ ಕೆಂಪು ರಕ್ತದ ಎಳನೀರು
ಮುಗ್ಧ ಮಕ್ಕಳ ಮಾರಣಹೋಮ
ಧರ್‍ಮ-ರಾಜಕೀಯದ ಸಾವು ನೋವುಗಳ
ಅನುಭವಿಸಿರುವೆ ನಾನು ಬಹಳ
ಸಹಿಸಲಾರೆ ಸಾವಿನಾಟವನು
ಸಾಕು ಮಾಡಿ ಮುಂಡಾಟಿಕೆ
ಬೇಕು ನನಗೆ ನೆಮ್ಮದಿಯ ನೆಲೆ
ಪುಟ್ಟ ಮನೆಯಂಗಳದಲಿ ತೆಂಗಿನಮರ
ನೆಮ್ಮದಿಯ ಶುದ್ಧ ಗಾಳಿ, ನೀರು
ಸಮವಸ್ತ್ರವಿಲ್ಲದ ಪುರುಷರು
ಬಂದೂಕಿಲ್ಲದ ಕೈಗಳು
ಜೀವಪೋಷಕ ಸಂಗಾತಿಗಳು
ಮನುಕುಲವನು ಪ್ರೀತಿಸುವ
ಕಾಬೂಲಿವಾಲಾಗಳು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...