Home / ಕಥೆ / ಕಿರು ಕಥೆ / ಚರ್ಚೆ

ಚರ್ಚೆ

ಒಂದು ಸೇವಾಶ್ರಮದಲ್ಲಿ ಅನೇಕ ಅಂಗವಿಕಲರು, ಕುಂಟರು, ಕುರುಡರು, ಹೆಳವರು, ಮೂಕರು, ಬುದ್ಧಿ ಮಾಂದ್ಯರು, ನಿಶ್ಯಕ್ತರು, ಹೀಗೆ ಹಲವು ಹತ್ತು ಜನರಿದ್ದರು. ಅವರು ಜಗತ್ತನ್ನು ನೋಡುತ್ತಿದ್ದರು. ಜನಗಳು ಹಣೆಯಲ್ಲಿ, ತಿಲಕ, ವಿಭೂತಿ, ಪಟ್ಟೆ, ಮುದ್ರೆ, ನಾಮ, ಅಂಗಾರ ಅಕ್ಷತೆ ಹಚ್ಚಿಕೊಂಡು ದೇವಾಲಯಗಳಿಗೆ ಹೋಗುವುದನ್ನು, ತಮ್ಮ ಧರ್ಮದ ಬಗ್ಗೆ ಬಾಯಿ ತುಂಬಾ ಮಾತಾಡಿ ಗುರುಗಳ ಉಪದೇಶ ಕೇಳಿ ಧರ್ಮ ದೈವದ ಬಗ್ಗೆ ಚರ್ಚೆ ಮಾಡುವುದನ್ನು ನೋಡಿದ್ದರು. ಅಂಗವಿಕಲರು ಒಮ್ಮೆ ಸಭೆ ಸೇರಿ ಚರ್ಚೆಗೆ ತೊಡಗಿದರು.

“ಕುರುಡನ ಕಣ್ಣಿಗೆ ದೈವದ ದರ್ಶನ ಒಳಗಿನ ಕಣ್ಣೆಅಲ್ಲವೇ?” ಎಂದ ಒಬ್ಬ ಹುಟ್ಟು ಕುರುಡ.

ಕೈಯಿಲ್ಲದ ಹೆಳವನಾದ ನನಗೆ “ಹಣೆಯಲ್ಲಿ ಯಾವ ತಿಲಕ ನಾಮ ಇಟ್ಟುಕೊಳ್ಳಲು ನನಗೆ ಕೈ ಇಲ್ಲ. ನನಗೆ ದಯಯೇ ದೈವ, ಧರ್ಮ” ಎಂದ.

ಕುಂಟನೋರ್ವ ಹೇಳಿದ “ನಾನು ನಡೆದು ಹೋಗಲಾರೆ. ನನಗೆ ದೇಹವೇ ದೇವಾಲಯ. ನನ್ನ ಆಂತರ್ಯದಲ್ಲೇ ನನ್ನ ಆರಾಧ್ಯ ದೈವ” ಎಂದ.

“ಹೀಗೆ ಅಂಗವಿಕಲಾರಾದರೂ ನಾವು ನಾಮ, ಮುದ್ರೆ ಮಂದಿರ, ಜಾತಿ ಪಂಗಡಗಳಿಲ್ಲದೆ ದೇವರನ್ನು ದಯೆಯಲ್ಲಿ ಧರ್ಮದಲ್ಲಿ ಕಂಡುಕೊಂಡಿದ್ದೇವೆ. ಎಲ್ಲಾ ನೆಟ್ಟಗಿರುವ ಜನರೇಕೆ ದಯೆಯೇ ಧರ್ಮವೆಂಬುದು ಬಿಟ್ಟು ವಕ್ರಗತಿಯಲ್ಲಿ ಸಾಗಿದ್ದಾರೆ?” ಎಂದ ಮತ್ತೋರ್ವ ಅಂಗವಿಕಲ.

ಇವರೆಲ್ಲರ ಹೃದಯದಲ್ಲಿ ಅಧ್ಯಕ್ಷತೆವಹಿಸಿದ ದೈವ, ದಯೆಯ ಮಹಾಪೂರ ಹರಿಸಿದ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...