Home / ಕಥೆ / ಕಿರು ಕಥೆ / ತಪಸ್ವಿ

ತಪಸ್ವಿ

ತೋಟದ ಗಿಡದಲ್ಲಿ ಒಂದು ಜೇಡ ಬಲೆ ಕಟ್ಟಿತ್ತು. ಕವಿ ನೋಡುತ್ತಾ ನಿಂತ. ನವಿರಾದ ಎಳೆಗಳು ಬಿಸಿಲು ಕಿರಣದಲ್ಲಿ, ಬಂಗಾರದ ನೇಯ್ಗೆಯಂತೆ ಅತ್ಯಂತ ಚೆಲುವಾಗಿತ್ತು. ವರ್ತುಲ ವರ್ತುಲವಾಗಿ ಎಳೆಗಳು ಹಾದುಹಾದು ಸುಂದರ ಜಾಲ ರಚಿಸಿತ್ತು. ಕಲಾರಾಧಕನಂತಿದ್ದ ಜೇಡ, ಮಧ್ಯದಲ್ಲಿ ಕಲಾತಪಸ್ವಿಯಂತೆ ಎಂಟುಕಾಲಿನ ಪದ್ಮಾಸನದಲ್ಲಿ ಕುಳಿತಿತ್ತು. ಪೂಜೆ, ಧ್ಯಾನ ತಪದಲ್ಲಿ ಉದರಿದ ಹೂವಿನ ದಳಗಳು, ಜೇಡದ ತೊಟ್ಟಿಲಲ್ಲಿ ಮಲಗಿತ್ತು. ಪುಟ್ಟ ಹಸಿರು ಎಲೆಗಳು ಜಾಲಕ್ಕೆ ತೋರಣ ಕಟ್ಟಿದಂತಿತ್ತು. ಹುಳು ಬಂದಾಗ ಅದನ್ನು ಮೆಲ್ಲಗೆ ಆಹ್ವಾನಿಸಿತು. ಪೂಜೆ ಅರ್ಚನೆ ಮಾಡಿತು. ಕೊನೆಗೆ ತನ್ನಲ್ಲಿ ಸ್ಥಿತ ದೈವಕ್ಕೆ ನೈವೇದ್ಯ ಮಾಡಿ ನಲಿಯಿತು.

ಇದು ಪೂಜೆಯ ಪರಮಾರ್ಥವೋ ಅಥವಾ ಇದು ಸ್ವಾರ್ಥದ ಪರಮಾವಧಿಯೋ ಒಂದು ಅರ್ಥವಾಗದೆ ಕವಿಯ ಕಣ್ಣು ಮನಗಳು ಜೇಡ ಬಲೆಯಲ್ಲಿ ಸೆರೆಯಾಯಿತು.
*****

Tagged:

Leave a Reply

Your email address will not be published. Required fields are marked *

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...