Home / ಕಥೆ / ಕಿರು ಕಥೆ / ಗುಡುಗಿನ ಧ್ವನಿಯಲ್ಲಿ ಗುರು

ಗುಡುಗಿನ ಧ್ವನಿಯಲ್ಲಿ ಗುರು

ಒಬ್ಬ ನಿಷ್ಠಾವಂತ ಸಾಧಕ ಶ್ರಾವಣದ ಭೋರ್ಗರೆವ ಮಳೆಯಲ್ಲಿ ಒಂಟಿ ಕಾಲ ಮೇಲೆ ನಿಂತು ತಪಗೈಯುತ್ತಿದ್ದ. ಧಾರಕಾರ ಮಳೆ ಹುಯ್ಯುತ್ತಿತ್ತು. ಮಳೆಯ ತೀವ್ರತೆ ಚಾವಟಿಯಂತೆ ಥಳಥಳಿಸುತ್ತಿತ್ತು. ಮೇಲೆ ಆಲಿಕಲ್ಲುಗಳು ಉದುರುತ್ತಿದ್ದವು. ಕಾರ್ಮೊಡಗಳು ಒಂದನ್ನೊಂದು ಘರ್ಷಿಸಿ ಘರ್ಜನೆ ಮಾಡುತಿತ್ತು. ಗುಡುಗು ಸಿಡಿಲು ಧ್ವನಿ ಎದೆ ನಡುಗಿಸುತಿತ್ತು. ಮಿಂಚು ಕಣ್ಣು ಕೋರೈಸುತ್ತಿತ್ತು. ಕಾಡಿನಲ್ಲಿ ಕಟ್ಟಿಗೆ ಶೇಖರಿಸಲು ಬಂದ. ಒಬ್ಬ ಬಡವ ಈ ಸಾಧಕನ ತಪಸ್ಸು ನೋಡಿ ಬೆರಗಾಗಿ ಕೇಳಿದ.

“ಏ! ಸಾಧಕ, ನಿನ್ನ ಈ ತಪಸ್ಸಿನಿಂದ ಏನು ಪಡೆಯುತ್ತಿರುವೆ?” ಎಂದ.

ಸಾಧಕ ಹೇಳಿದ- “ಗುಡುಗಿನಲ್ಲಿ ಗುರುವಿನ ಧ್ವನಿ ಕೇಳುತ್ತಿದೆ. ಸಿಡಿಲು ಬಡಿದು ನನ್ನ ಅಜ್ಞಾನ ತೊಲಗುತ್ತಿದೆ. ಮಿಂಚಿನಲ್ಲಿ, ಜ್ಞಾನೋದಯವಾಗುತ್ತಿದೆ. ನನ್ನ ಬರಡಾದ ಹೃದಯ ಮಳೆಯಲ್ಲಿ ಫಲವತ್ತಾಗುತ್ತಿದೆ. ಕಾರ್ಮೊಡಗಳು ಕರಗಿ ನನ್ನ ಬಾಳು ಶುಭ್ರ ನೀಲ ಆಗಸದಂತಾಗುತ್ತಿದೆ.” ಎಂದಾಗ ಕಟ್ಟಿಗೆ ಶೇಖರಿಸುವ ಬಡವನಿಗೆ ಏನೂ ಅರ್ಥವಾಗಲಿಲ್ಲ.

ಅವನಿಗೆ ಊಟಕ್ಕೆ ಬೇಕಾದ ಕಟ್ಟಿಗೆಯ ಉರಿಯಲ್ಲಿ ಅವನಿಗೆ ಬಾಳ ದೀಪ್ತಿಯ ಪೂರ್ಣತೆ ಸಿಕ್ಕಿತ್ತು.

“ಪೂರ್ಣತೆಗೆ ಅದೆಷ್ಟು ಕಠಿನ ಮಾರ್ಗ, ಅದೆಷ್ಟು ಸುಲಭ ಮಾರ್ಗ” ಎಂದು ಮನವು ಯೋಚಿಸಿತು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...