Home / ಕಥೆ / ಕಿರು ಕಥೆ / ಕಲ್ಲು-ಹುಲ್ಲು

ಕಲ್ಲು-ಹುಲ್ಲು

ಒಮ್ಮೆ ಒಂದು ಕಲ್ಲು ಬಂಡೆಯ ಪಕ್ಕದಲ್ಲಿ ಬೆಳೆದ ಹುಲ್ಲುಗರಿಗೆ, ಕಲ್ಲು ಬಂಡೆಯ ಮೇಲೆ ಪ್ರೇಮ ಅಂಕುರಿಸಿತು. ಹುಲ್ಲಿನ ಗರಿ ಗಾಳಿ ಬಂದ ನೆಪದಲ್ಲಿ ಕಲ್ಲು ಬಂಡೆಯ ಎದೆಯನ್ನು ಬಾಗಿತಾಗಿ, ತನ್ನ ಪ್ರೀತಿ ತೋರುತ್ತಿತ್ತು. ಹಸಿರು ಹುಲ್ಲಿನಲ್ಲಿ ಪ್ರೀತಿ ಉಕ್ಕಿ ಒಮ್ಮೊಮ್ಮೆ ನರ್ತನವನ್ನು ಮಾಡಿ ಬಂಡೆಯ ಮನವೊಲಿಸಲು ತೊಡಗುತ್ತಿತ್ತು. ಇದನ್ನು ಗಮನಿಸಿದ ಕಲ್ಲು ಬಂಡೆಗೆ ಏನೂ ಅರ್ಥವಾಗಲಿಲ್ಲ. ಬರಡು ಬಂಡೆಯಲ್ಲಿ ಭಾವ ಸ್ಪಂದನವಿರಲಿಲ್ಲ. ಅದರ ಹೃದಯ ಹೆಪ್ಪುಗಟ್ಟಿ ಬಿಟ್ಟಿತ್ತು. ಆರ್ದ್ರತೆ ಎಂಬುದು ಬಂಡೆಗೆ ಗೊತ್ತಿರಲಿಲ್ಲ. ಹುಲ್ಲಿನ ಮೃದುಲತೆ ಕೂಡ ಎಂದೂ ಅನುಭವಿಸಿರಲಿಲ್ಲ. ಕಲ್ಲು ಬಂಡೆ ಕನಸುಗಳನ್ನೆಲ್ಲಾ ಮೂಟೆ ಕಟ್ಟಿ ಘನೀಭೂತವಾಗಿ ಕೂತಿತ್ತು. ಆದರೆ ಹುಲ್ಲಿಗೆ ಮಾತ್ರ ಬಂಡೆಯ ಮೇಲಿನ ಪ್ರೀತಿ ಹೋಗಲಿಲ್ಲ. ಆಗಾಗ ಗಾಳಿಯಲ್ಲಿ ವಾಲಿ ಬಂಡೆಯನ್ನು ಅಪ್ಪಿ ಮುದ್ದಿಸುತ್ತಿತ್ತು. ತನ್ನ ಎದೆಯ ಮೇಲೆ ಇಬ್ಬನಿ ಬಿದ್ದಾಗ ಅದನ್ನು ಬಂಡೆಯ ಎದೆಯ ಮೇಲಿಟ್ಟು ತನ್ನ ಪ್ರೇಮದ ಕಾಣಿಕೆ ಕೊಡುತ್ತಿತ್ತು.

ಹುಲ್ಲಿನ ಈ ಪ್ರೇಮಾರಾಧನೆ ಬಂಡೆಗೆ ಏನೂ ಅರ್ಥವಾಗಲಿಲ್ಲ. ಇದೇನು ಈ ಹುಲ್ಲಿನ ವಿಚಿತ್ರ ವರ್ತನೆ ಎಂದು ಯೋಚಿಸಿ ಒಂದು ದಿನ ತುಟಿ ತೆರೆದು ಮಾತನಾಡಲಾರಂಭಿಸಿತು.

“ಎಲೆ ಹುಲ್ಲೆ! ನೀನು ಏಕೆ ನನ್ನ ಬಳಿಯೇ ಜೀವಿಸುತ್ತಿರುವೆ?”ಎಂದಿತು.
“ನನಗೆ ನಿನ್ನ ಕಂಡರೆ ಬಲು ಪ್ರೀತಿ”ಎಂದಿತು ಹುಲ್ಲು.
“ಪ್ರೀತಿ” ಹಾಗಂದರೆ ಏನು?” ಎಂದಿತು ಕಲ್ಲು.
“ಬೀಡು ಬಿಟ್ಟಿರುವ ನನ್ನ ಬೇರಿನ ಜೀವರಸವಾದ ಹಸಿರೇ ಪ್ರೀತಿ”
“ಅದು ಸರಿ, ನನ್ನನೇಕೆ ನೆಚ್ಚಿಕೊಂಡಿರುವೆ?” ಎಂದಿತು ಕಲ್ಲು.
“ಕಮಾನಿನಂತೆ ಬಾಗುವ ನನ್ನ ಹೃದಯ ಭಾವಗಳಿಗೆ ನೀನು ಆಧಾರ, ಆಶ್ರಯವಾಗಿರುವೆ. ಅದಕ್ಕೆ ನಿನ್ನ ಕಂಡರೆ ನನಗೆ ಬಲು ಪ್ರೀತಿ” ಎಂದಿತು.
“ನಾನು ಕಲ್ಲು ಬಂಡೆ, ಬಲು ಒರಟು, ಗಟ್ಟಿ, ನೀನು ಹುಲ್ಲು ನವಿರು, ಮತ್ತು ಮೃದು. ನಮ್ಮಿಬ್ಬರ ಸಮಾಗಮ ಸಾಧ್ಯವಿಲ್ಲ.” “ನನ್ನಿಂದ ನಿನ್ನ ಸಾವು ಕೂಡ ಸಾಧ್ಯ. ಆದ್ದರಿಂದ ನನ್ನಿಂದ ನೀನು ದೂರ ಹೋಗಿ ಬಿಡು” ಎಂದಿತು ಕಲ್ಲು ಬಂಡೆ.

“ಹಾಗೆ ಹೇಳಬೇಡ ಪ್ರಿಯಕರ ಕಲ್ಲು ಬಂಡೆ! ನಮ್ಮಲ್ಲಿ ಸಹ ಜೀವನ ಸಾಧ್ಯ. ನನ್ನ ಮೃದುಲತೆಗೆ ನಿನ್ನ ಕಠಿಣತೆಯ ಮೋಹವಿದೆ. ನಿನ್ನ ಕಠಿಣತೆಗೆ ನನ್ನ ಮೃದುಲತೆಯ ಆಶೆ ಇದೆ. ನಿನ್ನ ಪಾದದ ಅಡಿದಾವರೆಯಲಿ ನನ್ನ ಬೆಳೆಯಲು ಬಿಡು, ನಾವು ಜೋಡಿಯಾಗಿ ಇರೋಣ, ಬಾಳೋಣ, ಕಲ್ಲು-ಹುಲ್ಲಿನ ಬಾಳು ವಿಶ್ವ ಕನ್ನಡಿಯಲಿ ಸಮರಸದ ಬಿಂಬವಾಗಲಿ” ಎಂದಿತು.

ಕಲ್ಲು ಬಂಡೆಗೆ ಹೃದಯ ಕರಗಿತು. ಪ್ರೀತಿ ಅಂಕುರಿಸಿತು.
*****

Tagged:

Leave a Reply

Your email address will not be published. Required fields are marked *

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...