Home / ಬಾಲ ಚಿಲುಮೆ / ಕವಿತೆ / ವಿದ್ಯೆ ಕಲಿತ ರಕ್ಕಸ

ವಿದ್ಯೆ ಕಲಿತ ರಕ್ಕಸ

ಹಿತ್ತಲಿಂದ ಬರುತಲೊಮ್ಮೆ
ಬೆಚ್ಚಿ ಬಿದ್ದೆನು
ದೂರದಲ್ಲಿ ಕಪ್ಪು ಕಪ್ಪು
ಏನೋ ಕಂಡೆನು

ತಲೆಯ ಮೇಲೆ ಕೋಡು
ಕೋರೆಗಳಿವೆ ಜೋಡು
ವಿಕಾರವಾದ ಮುಖ
ಉದ್ದುದ್ದನೆಯ ನಖ

ಮಾರಿಗೊಂದು ಹೆಜ್ಜೆ
ತಿನುವ ಮಾಂಸ ಮಜ್ಜೆ
ಝಲ್ಲೆಂದಿತು ಎದೆಯು
ಬಿರಿಯ ಬಾರ್ದೆ ಭುವಿಯು

ಆನೆಗಿಂತ ಎತ್ರ
ಅವನ ಆ ಗಾತ್ರ
ನಡುಗುತ್ತಲೆ ನಿಲುವುದ್ಹೇಗೆ
ಅಯ್ಯೋ ಬಂದ ಹತ್ರ

ಇವನೆ ಇವನೆ ರಕ್ಕಸ
ಏರಿಳಿಯಿತು ಪುಪ್ಪಸ
ರಾಮ, ಭೀಮ, ಹನುಮರೆಲ್ಲ
ಕೊಂದ ರಕ್ಕಸ

ಓಡಲೆಂದು ನೋಡಿದೆ
ಕಾಲು ಮರವೆ ಆಗಿದೆ
ಕೂಗಲೆಂದು ಬಾಯಿತೆರೆದೆ
ಅದೂ ಹೊಲೆದು ಕೊಂಡಿದೆ

ಗಣಪನನ್ನು ನೆನೆದೆ
ಮೇಷ್ಟ್ರರನ್ನು ಕರೆದೆ
ಬರಲಿಲ್ಲ ಯಾರು ಪಾಲಿಗೆ
ಮಗನಿಲ್ಲ ನನ್ನತಾಯಿಗೆ

ದಡಬಡನೆ ಬಂದೆಬಿಟ್ಟ
ಮುಷ್ಟಿಯಲ್ಲಿ ಎತ್ತಿಬಿಟ್ಟ
ಮುದ್ದು ಮರಿಯೆ ಎಂದ
ಕೊಟ್ಟ ಮುತ್ತನೊಂದ

ಹೆದರಬೇಡ ನಡುಗಬೇಡ
ಕೇಳೋ ಇಲ್ಲಿ ಪೋರ
ತಿನ್ನೋದಿಲ್ಲ ನಿನ್ನ ನಾನು
ಗೆಳೆಯ ನೀನು ಬಾರ

ಗೆಳೆಯನಲ್ಲ ನೀನು
ಹೆದರಿಹೆನು ನಾನು
ನೀನು ನರ ಭಕ್ಷಕ
ನಾನು ಶಾಲಾ ಬಾಲಕ

ನಾನು ಶಾಲೆಗೆ ಬರುವೆ
ನಿನ್ನ ಜೊತೆಗೆ ಆಡುವೆ
ಬಿಸಿಊಟವನ್ನೆ ಮಾಡುವೆ
ಆಪ್ ಎಂದು ತೇಗುವೆ

ಬೇಡ, ಬೇಡ ರಕ್ಕಸ
ನನ್ನ ಕಾಡಬೇಡ
ನೀನು ಜೊತೆಗೆ ಬಂದರೆ
ನನಗೆ ಭಾರಿ ತೊಂದರೆ

ತಂಟೆ ಮಾಡೆನು
ಮಾಂಸ ಮಜ್ಜೆ ಕೇಳೆನು
ಗೆಳೆಯನಲ್ವೆ ನೀನು
ಪಪ್ಪಿ ಕೊಡುವೆ ನಾನು

ಶಾಲೆಗೆ ಬಂದ್ರೆ ನೀನು
ಪಾಠಕಲಿಯ ಬೇಕು
ಹೋಂವರ್ಕ ಮಾಡಬೇಕು
ಅಲ್ಲಿ ಏಟು ತಿನ್ನಬೇಕು

ಪಾಠ ಗೀಟ ಓದುವೆ
ಮಗ್ಗಿ ಹಾಡು ಹೇಳುವೆ
ಏಟು ಕೊಡಲು ಮೇಷ್ಟ್ರು ಬಂದ್ರೆ
ಅವರನ್ನೆ ಮಾಯ ಮಾಡುವೆ

ನರ-ರಾಕ್ಷಸ ಒಂದಾದರು
ಸಂತಸದೀ ಕುಣಿದರು
ಶಾಲೆ ಕಡೆಗೆ ನಡೆದರು
ಗೇಟು ತೆರೆದು ಬಿಟ್ಟರು

ರಕ್ಕಸನ ಕಂಡರು
ಮಕ್ಕಳು ಬೆರಗಾದರು
ಚಿಳ್ಳೆ ಪಿಳ್ಳೆ ಎಲ್ಲರೂ
ಚೆಡ್ಡಿ ತೋಯಿಸಿಕೊಂಡರು

ಹೆದರಬೇಡಿ ಮಕ್ಕಳೆ
ಮುದ್ದು ಮುದ್ದು ಹೂಗಳೆ
ನಾನು ನಿಮ್ಮ ತಿನ್ನೆನು
ಆಗುವೆ ನಿಮ್ಮ ಗೆಳೆಯನು

ಮಕ್ಕಳೆಲ್ಲ ನಕ್ಕರು
ಹತ್ತಿರಕ್ಕೆ ಬಂದರು
ಕೈಯ ಹಿಡಿದು ಎಳೆದರು
ಭಾರಿ ಖಷಿಯಪಟ್ಟರು

ಮಾಸ್ತರ್ ಮಾತು ಮರೆತರು
ಶಿಕ್ಷಕಿ ಶಿಲೆಯಾದರು
ಕನಸೆ ಇರಬೇಕೆಂದುಕೊಂಡು
ಕೈಯ ಚಿವುಟಿಕೊಂಡರು

ಪುರದ ಜನರು ನೆರೆದರು
ಬಡಿಗೆ ಹಿಡಿದು ಬಂದರು
ರಕ್ಕಸನ ಕಂಡ ಅವರು
ಅವಾಕ್ಕಾಗಿ ನಿಂತರು

ಕೇಳಿ ಪುರದ ಜನಗಳೇ
ಇಲ್ಲ ನನ್ನಿಂದ ತೊಂದರೆ
ಬೇರೆ ಏನು ಬಯಸೆನು
ವಿದ್ಯೆ ಕಲಿಯ ಬಂದೆನು

ಬಡಿಯ ಬೇಡಿ ನನ್ನ
ತಿನ್ನುವುದಿಲ್ಲ ನಿಮ್ಮ
ವಿದ್ಯೆ ಕಲಿಸಿ ನನಗೆ
ನಾನು ಶರಣು ನಿಮಗೆ

ಟೀಚರ್ ಒಪ್ಪಿಬಿಟ್ಟರು
ಶಾಲೆಯೊಳಗೆ ಕರೆದರು
ಸ್ಟೇಟು ಬಳಪ ಕೊಟ್ಟರು
ಅಕ್ಷರ ಕಲಿಸಿ ಬಿಟ್ಟರು

ವಿದ್ಯೆ ಕಲಿತ ರಕ್ಕಸ
ವಿರೂಪ ಕಳಚಿ ಬಿಟ್ಟನು
ಕೋರೆ, ದಾಡೆ, ಕೋಡು ಎಲ್ಲ
ಮಾಯವಾಗಿ ಬಿಟ್ಟವು.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...