Home / ಲೇಖನ / ವಿಜ್ಞಾನ / ಮಳೆಯ ಆಗಮನ ತಿಳಿಸುವ ಉಪಕರಣ

ಮಳೆಯ ಆಗಮನ ತಿಳಿಸುವ ಉಪಕರಣ

ಅಗತ್ಯಕ್ಕೆ ತಕ್ಕಷ್ಟು ಮಳೆಬೇಕು, ಮಳೆ ಬರದೇ ಇದ್ದರೂ ಆಗದು ಅಥವಾ ಕುಂಬದ್ರೋಣ ಮಳೆಯಾದರೂ ಕಷ್ಟವಾಗುತ್ತದೆ. ಯಾವಾಗ ಮಳೆ ಬರುತ್ತದೆ, ಬರುವದಿಲ್ಲ, ಎಂಬುದನ್ನು ತಿಳಿದುಕೊಳ್ಳಲೆಂದೇ ವಿಜ್ಞಾನಿಗಳು ಸಂಶೋಧನೆ ನಡೆಯಿಸಿ ಒಂದು ಉಪಕರಣವನ್ನು ಕಂಡುಹಿಡಿದಿದ್ದಾರೆ. ಮ್ಯಟ್ರಾಮಾರ್‍ಕೋನಿ ಅತ್ಯಾಧುನಿಕ ಮೈಕ್ರೋವೇವ್ ಸೆನ್ಸರನ್ನು ರೂಪಿಸಿದೆ. ಈ ಉಪಕರಣದ ಹೆಸರು ಆಡ್ವಾನ್ಸ್‌ಡ್ ಮೈಕ್ರೋವೇವ್ ಸೌಂಡಿಂಗ್ ಯುನಿಟ್ ಎಂದು. ಅಮೇರಿಕಾದ ನ್ಯಾಶನಲ್ ಓಷಿಯಾನಿಕ್ ಅಂಡ್ ಅಟ್ಮಾ ಸ್ಫೆರಿಕ್ ಅಡ್ಮಿನಿಸ್ಟ್ರೇಷನ್ ಎಂಬ ಸಂಸ್ಥೆ ಈಗಾಗಲೇ ಈ ಸೆನ್ಸರ್ ಉಪಕರಣವನ್ನು ಉಪಗ್ರಹದ ನೆರವಿನಿಂದ ಒಂದು ನಿರ್ದಿಷ್ಟ ಕಡೆಯೊಳಗೆ ಕಳಿಸಿದೆ. ನಮಗೀಗ ಲಭ್ಯವಿರುವ ವಾತಾವರಣದ ವಿಸ್ತಾರಿಸಲ್ಪಟ್ಟ ಪ್ರದೇಶವನ್ನು ಇದು ಗುರುತಿಸುತ್ತದೆ. ಮೋಡಗಳ ಸ್ಥಿತಿಗತಿಗಳನ್ನು ವಿವರಿಸುತ್ತದೆ. ಈ ಅತ್ಯಾಧುನಿಕ ಉಪಕರಣದ ನೆರವು ಪಡೆದು ಮಳೆಯ ಆಗಮನವನ್ನಷ್ಟೇ ಅಲ್ಲದೇ ವರ್ಷಾತಾಪವನ್ನು ನಿರ್ಧಿಷ್ಟವಾಗಿ ತಿಳಿದುಕೊಳ್ಳಬಹುದು. ವಿಪರೀತ ಮಳೆ ಸುರಿಯುವದರಿಂದ ಆಗುವ ಅಸ್ತವ್ಯಸ್ತವನ್ನು ಸಾಧ್ಯವಾದಷ್ಟು ಪಡೆಯಬಹುದು. ಇದರಿಂದ ಪರ್ಜನ್ಯಜಪದ, ಸೋಗುಹಾಕುವ ಜನಕ್ಕೆ ಒಂದಿಷ್ಟು ಬುದ್ದಿಬರಲಿದೆ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...