Home / ಲೇಖನ / ಇತರೆ / ನಾಯಿಗೆ ನಿಷೇಧ

ನಾಯಿಗೆ ನಿಷೇಧ

ಇಟಲಿಯ ದಕ್ಷಿಣ ಭಾಗದಲ್ಲಿರುವ ಕ್ಯಾಂಪೇನಿಯ ಪ್ರಾಂತ್ಯದ ಕೊಂಟ್ರೋನ್ ಪಟ್ಟಣದಲ್ಲಿ ಮೇಯರ್ ಬಲು ಸ್ಟ್ರಾಂಗ್! ಇಡೀ ವಿಶ್ವದಲ್ಲೇ ಇಲ್ಲದ ಆದೇಶವನ್ನು ಇವರು ಮಾಡಿರುವರು.

ಅಬ್ಬಾ! ಮೇಯರ್‌ ಎಂದರೆ ಹೀಗಿರಬೇಕು. ಜನರಿಂದ ಆಯ್ಕೆಯಾಗಿ ಜನರು ಸಾಕಿದ ನಾಯಿಗಳು ಮಧ್ಯಾಹ್ನ ೨ ರಿಂದ ೪ ಗಂಟೆಯ ಅವಧಿಯಲ್ಲಿ ಯಾವುದೇ ಕಾರಣಕ್ಕೂ… ಬೊಗಳದಂತೆ ಅದರ ಮಾಲೀಕರು ನೋಡಿಕೊಳ್ಳಬೇಕೆಂದು ಆದೇಶಿಸಿರುವರು! ಕಾರಣ- ಈ ವೇಳೆಯಲ್ಲಿ ಪಟ್ಟಣದ ಜನರು ವಿಶ್ರಾಂತಿಯಲ್ಲಿರುವರು. ಕಿರು ಸಕ್ಕರೆ ನಿದ್ರೆಯಲ್ಲಿರುವರು. ಅವರ ಭಂಗಕ್ಕೆ ನಾಯಿಯ ಬೊಗಳು ಅಡ್ಡಿಯಾಗಬಾರದು! ಭಪ್ಪರೆ… ಜನರ ಬಗ್ಗೆ ಇಷ್ಟು ಕಾಳಜಿಯೇ..?

ಈ ಸಮಯದಲ್ಲಿ ನಾಯಿ ಬೊಗಳಿದರೆ ಅದರ ಮಾಲೀಕರಿಗೆ ರೂ. ೩೫,೦೦೦ ಅಂದರೆ ೫೦೦ ಯೂರೊಗಳವರೆಗೆ ದಂಡ ವಿಧಿಸಲಾಗುವುದೆಂದು ಮೇಯರ್ ಆದೇಶ ನೀಡಿರುವರು.

-ಹೀಗೆ ಮಧ್ಯಾಹ್ನ ೨ ರಿಂದ ೪ ರವರೆಗಿನ ಹಗಲು ವಿರಾಮದ ಅವಧಿಯಲ್ಲಿ ಅಲ್ಲದೆ ರಾತ್ರಿ ವೇಳೆಯೂ ನಾಯಿಗಳು ಶಬ್ದ ಮಾಡದಂತೆ ನಾಯಿ ಸಾಕುವವರು ಎಚ್ಚರ ವಹಿಸಬೇಕೆಂದೂ ಆದೇಶದಲ್ಲಿ ಮೇಯರ್‌ ಸ್ಪಷ್ಟವಾಗಿ ಆಗ್ರಹಿಸಿರುವರು.

ಇಷ್ಟೇ ಅಲ್ಲದೇ ಸಾರ್‍ವಜನಿಕ ಸ್ಥಳಗಳಲ್ಲಿ ಯಾವುದೇ ಯಾರದೇ ನಾಯಿಗಳನ್ನು ಒಂಟಿಯಾಗಿ ಬಿಡಾಡಿಯಾಗಿ ಬಿಡಬಾರದು!! ಹೀಗೆ ಬಿಟ್ಟರೆ ಅದಕ್ಕೂ ಮಾಲೀಕರು ದಂಡ ಕಟ್ಟಬೇಕು. ನಾಯಿ ಮೂತ್ರ ಮಾಡಿದರೆ- ಮಲ ವಿಸರ್ಜಿಸಿದರೆ ಅದನ್ನು ನೀರು ಹಾಕಿ ಮಾಲೀಕರೇ ಸ್ವಚ್ಛಗೊಳಿಸಬೇಕು! ಇಲ್ಲವಾದರೆ ದಂಡ ಸ್ಥಳದಲ್ಲೇ ಕಟ್ಟಿ ನಾಯಿ ಒಯ್ಯಬೇಕು.

ಹೇಗಿದೆ ಮೇಯರ್‌ ಆದೇಶ?! ಈಗೀಗ ಇಟಲಿಯ ಜನರು ನಾಯಿಗಳನ್ನು ಸಾಕುವುದನ್ನು ಕೈಬಿಟ್ಟಿರುವರು. ನಾಯಿ ರುಚಿಗೆ ಅಂಟಿಕೊಂಡವರು ನಾಯಿ ಬಾಯಿಗೆ ಕ್ಯಾಪ್ ಹಾಕಿ ಭದ್ರಗೊಳಿಸಿ ಸಾಕುತ್ತಿರುವರು ಹೆಚ್ಚು ರಚ್ಚೆ ಹಿಡಿದು ಬೊಗಳಿದ ನಾಯಿಯನ್ನು ಕೊಂದು ತಿಂದು ತೃಪ್ತಿ ಪಟ್ಟುಕೊಂಡು ಬೀಗುವರು.

ಆಹಾ! ನಮ್ಮಲ್ಲಿ ಬೆಂಗಳೂರಿನಲ್ಲಿ ಮೈಸೂರು, ಹುಬ್ಬಳ್ಳಿ, ಧಾರವಾಡ, ಗುಲ್ಬರ್‍ಗ, ಬೆಳಗಾವಿಯಲ್ಲಿ ಮೇಯರ್‌ಗಳೆಲ್ಲ ಈ ರೀತಿ ಆದೇಶ ಹೊರಡಿಸಿದರೆ ಹೇಗೆ? ಕಾದು ನೋಡೋಣವಲ್ಲವೇ?
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...