Home / ಲೇಖನ / ಇತರೆ / ನಾಯಿಗೆ ನಿಷೇಧ

ನಾಯಿಗೆ ನಿಷೇಧ

ಇಟಲಿಯ ದಕ್ಷಿಣ ಭಾಗದಲ್ಲಿರುವ ಕ್ಯಾಂಪೇನಿಯ ಪ್ರಾಂತ್ಯದ ಕೊಂಟ್ರೋನ್ ಪಟ್ಟಣದಲ್ಲಿ ಮೇಯರ್ ಬಲು ಸ್ಟ್ರಾಂಗ್! ಇಡೀ ವಿಶ್ವದಲ್ಲೇ ಇಲ್ಲದ ಆದೇಶವನ್ನು ಇವರು ಮಾಡಿರುವರು.

ಅಬ್ಬಾ! ಮೇಯರ್‌ ಎಂದರೆ ಹೀಗಿರಬೇಕು. ಜನರಿಂದ ಆಯ್ಕೆಯಾಗಿ ಜನರು ಸಾಕಿದ ನಾಯಿಗಳು ಮಧ್ಯಾಹ್ನ ೨ ರಿಂದ ೪ ಗಂಟೆಯ ಅವಧಿಯಲ್ಲಿ ಯಾವುದೇ ಕಾರಣಕ್ಕೂ… ಬೊಗಳದಂತೆ ಅದರ ಮಾಲೀಕರು ನೋಡಿಕೊಳ್ಳಬೇಕೆಂದು ಆದೇಶಿಸಿರುವರು! ಕಾರಣ- ಈ ವೇಳೆಯಲ್ಲಿ ಪಟ್ಟಣದ ಜನರು ವಿಶ್ರಾಂತಿಯಲ್ಲಿರುವರು. ಕಿರು ಸಕ್ಕರೆ ನಿದ್ರೆಯಲ್ಲಿರುವರು. ಅವರ ಭಂಗಕ್ಕೆ ನಾಯಿಯ ಬೊಗಳು ಅಡ್ಡಿಯಾಗಬಾರದು! ಭಪ್ಪರೆ… ಜನರ ಬಗ್ಗೆ ಇಷ್ಟು ಕಾಳಜಿಯೇ..?

ಈ ಸಮಯದಲ್ಲಿ ನಾಯಿ ಬೊಗಳಿದರೆ ಅದರ ಮಾಲೀಕರಿಗೆ ರೂ. ೩೫,೦೦೦ ಅಂದರೆ ೫೦೦ ಯೂರೊಗಳವರೆಗೆ ದಂಡ ವಿಧಿಸಲಾಗುವುದೆಂದು ಮೇಯರ್ ಆದೇಶ ನೀಡಿರುವರು.

-ಹೀಗೆ ಮಧ್ಯಾಹ್ನ ೨ ರಿಂದ ೪ ರವರೆಗಿನ ಹಗಲು ವಿರಾಮದ ಅವಧಿಯಲ್ಲಿ ಅಲ್ಲದೆ ರಾತ್ರಿ ವೇಳೆಯೂ ನಾಯಿಗಳು ಶಬ್ದ ಮಾಡದಂತೆ ನಾಯಿ ಸಾಕುವವರು ಎಚ್ಚರ ವಹಿಸಬೇಕೆಂದೂ ಆದೇಶದಲ್ಲಿ ಮೇಯರ್‌ ಸ್ಪಷ್ಟವಾಗಿ ಆಗ್ರಹಿಸಿರುವರು.

ಇಷ್ಟೇ ಅಲ್ಲದೇ ಸಾರ್‍ವಜನಿಕ ಸ್ಥಳಗಳಲ್ಲಿ ಯಾವುದೇ ಯಾರದೇ ನಾಯಿಗಳನ್ನು ಒಂಟಿಯಾಗಿ ಬಿಡಾಡಿಯಾಗಿ ಬಿಡಬಾರದು!! ಹೀಗೆ ಬಿಟ್ಟರೆ ಅದಕ್ಕೂ ಮಾಲೀಕರು ದಂಡ ಕಟ್ಟಬೇಕು. ನಾಯಿ ಮೂತ್ರ ಮಾಡಿದರೆ- ಮಲ ವಿಸರ್ಜಿಸಿದರೆ ಅದನ್ನು ನೀರು ಹಾಕಿ ಮಾಲೀಕರೇ ಸ್ವಚ್ಛಗೊಳಿಸಬೇಕು! ಇಲ್ಲವಾದರೆ ದಂಡ ಸ್ಥಳದಲ್ಲೇ ಕಟ್ಟಿ ನಾಯಿ ಒಯ್ಯಬೇಕು.

ಹೇಗಿದೆ ಮೇಯರ್‌ ಆದೇಶ?! ಈಗೀಗ ಇಟಲಿಯ ಜನರು ನಾಯಿಗಳನ್ನು ಸಾಕುವುದನ್ನು ಕೈಬಿಟ್ಟಿರುವರು. ನಾಯಿ ರುಚಿಗೆ ಅಂಟಿಕೊಂಡವರು ನಾಯಿ ಬಾಯಿಗೆ ಕ್ಯಾಪ್ ಹಾಕಿ ಭದ್ರಗೊಳಿಸಿ ಸಾಕುತ್ತಿರುವರು ಹೆಚ್ಚು ರಚ್ಚೆ ಹಿಡಿದು ಬೊಗಳಿದ ನಾಯಿಯನ್ನು ಕೊಂದು ತಿಂದು ತೃಪ್ತಿ ಪಟ್ಟುಕೊಂಡು ಬೀಗುವರು.

ಆಹಾ! ನಮ್ಮಲ್ಲಿ ಬೆಂಗಳೂರಿನಲ್ಲಿ ಮೈಸೂರು, ಹುಬ್ಬಳ್ಳಿ, ಧಾರವಾಡ, ಗುಲ್ಬರ್‍ಗ, ಬೆಳಗಾವಿಯಲ್ಲಿ ಮೇಯರ್‌ಗಳೆಲ್ಲ ಈ ರೀತಿ ಆದೇಶ ಹೊರಡಿಸಿದರೆ ಹೇಗೆ? ಕಾದು ನೋಡೋಣವಲ್ಲವೇ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...