ನಾಯಿಗೆ ನಿಷೇಧ

ನಾಯಿಗೆ ನಿಷೇಧ

ಇಟಲಿಯ ದಕ್ಷಿಣ ಭಾಗದಲ್ಲಿರುವ ಕ್ಯಾಂಪೇನಿಯ ಪ್ರಾಂತ್ಯದ ಕೊಂಟ್ರೋನ್ ಪಟ್ಟಣದಲ್ಲಿ ಮೇಯರ್ ಬಲು ಸ್ಟ್ರಾಂಗ್! ಇಡೀ ವಿಶ್ವದಲ್ಲೇ ಇಲ್ಲದ ಆದೇಶವನ್ನು ಇವರು ಮಾಡಿರುವರು.

ಅಬ್ಬಾ! ಮೇಯರ್‌ ಎಂದರೆ ಹೀಗಿರಬೇಕು. ಜನರಿಂದ ಆಯ್ಕೆಯಾಗಿ ಜನರು ಸಾಕಿದ ನಾಯಿಗಳು ಮಧ್ಯಾಹ್ನ ೨ ರಿಂದ ೪ ಗಂಟೆಯ ಅವಧಿಯಲ್ಲಿ ಯಾವುದೇ ಕಾರಣಕ್ಕೂ… ಬೊಗಳದಂತೆ ಅದರ ಮಾಲೀಕರು ನೋಡಿಕೊಳ್ಳಬೇಕೆಂದು ಆದೇಶಿಸಿರುವರು! ಕಾರಣ- ಈ ವೇಳೆಯಲ್ಲಿ ಪಟ್ಟಣದ ಜನರು ವಿಶ್ರಾಂತಿಯಲ್ಲಿರುವರು. ಕಿರು ಸಕ್ಕರೆ ನಿದ್ರೆಯಲ್ಲಿರುವರು. ಅವರ ಭಂಗಕ್ಕೆ ನಾಯಿಯ ಬೊಗಳು ಅಡ್ಡಿಯಾಗಬಾರದು! ಭಪ್ಪರೆ… ಜನರ ಬಗ್ಗೆ ಇಷ್ಟು ಕಾಳಜಿಯೇ..?

ಈ ಸಮಯದಲ್ಲಿ ನಾಯಿ ಬೊಗಳಿದರೆ ಅದರ ಮಾಲೀಕರಿಗೆ ರೂ. ೩೫,೦೦೦ ಅಂದರೆ ೫೦೦ ಯೂರೊಗಳವರೆಗೆ ದಂಡ ವಿಧಿಸಲಾಗುವುದೆಂದು ಮೇಯರ್ ಆದೇಶ ನೀಡಿರುವರು.

-ಹೀಗೆ ಮಧ್ಯಾಹ್ನ ೨ ರಿಂದ ೪ ರವರೆಗಿನ ಹಗಲು ವಿರಾಮದ ಅವಧಿಯಲ್ಲಿ ಅಲ್ಲದೆ ರಾತ್ರಿ ವೇಳೆಯೂ ನಾಯಿಗಳು ಶಬ್ದ ಮಾಡದಂತೆ ನಾಯಿ ಸಾಕುವವರು ಎಚ್ಚರ ವಹಿಸಬೇಕೆಂದೂ ಆದೇಶದಲ್ಲಿ ಮೇಯರ್‌ ಸ್ಪಷ್ಟವಾಗಿ ಆಗ್ರಹಿಸಿರುವರು.

ಇಷ್ಟೇ ಅಲ್ಲದೇ ಸಾರ್‍ವಜನಿಕ ಸ್ಥಳಗಳಲ್ಲಿ ಯಾವುದೇ ಯಾರದೇ ನಾಯಿಗಳನ್ನು ಒಂಟಿಯಾಗಿ ಬಿಡಾಡಿಯಾಗಿ ಬಿಡಬಾರದು!! ಹೀಗೆ ಬಿಟ್ಟರೆ ಅದಕ್ಕೂ ಮಾಲೀಕರು ದಂಡ ಕಟ್ಟಬೇಕು. ನಾಯಿ ಮೂತ್ರ ಮಾಡಿದರೆ- ಮಲ ವಿಸರ್ಜಿಸಿದರೆ ಅದನ್ನು ನೀರು ಹಾಕಿ ಮಾಲೀಕರೇ ಸ್ವಚ್ಛಗೊಳಿಸಬೇಕು! ಇಲ್ಲವಾದರೆ ದಂಡ ಸ್ಥಳದಲ್ಲೇ ಕಟ್ಟಿ ನಾಯಿ ಒಯ್ಯಬೇಕು.

ಹೇಗಿದೆ ಮೇಯರ್‌ ಆದೇಶ?! ಈಗೀಗ ಇಟಲಿಯ ಜನರು ನಾಯಿಗಳನ್ನು ಸಾಕುವುದನ್ನು ಕೈಬಿಟ್ಟಿರುವರು. ನಾಯಿ ರುಚಿಗೆ ಅಂಟಿಕೊಂಡವರು ನಾಯಿ ಬಾಯಿಗೆ ಕ್ಯಾಪ್ ಹಾಕಿ ಭದ್ರಗೊಳಿಸಿ ಸಾಕುತ್ತಿರುವರು ಹೆಚ್ಚು ರಚ್ಚೆ ಹಿಡಿದು ಬೊಗಳಿದ ನಾಯಿಯನ್ನು ಕೊಂದು ತಿಂದು ತೃಪ್ತಿ ಪಟ್ಟುಕೊಂಡು ಬೀಗುವರು.

ಆಹಾ! ನಮ್ಮಲ್ಲಿ ಬೆಂಗಳೂರಿನಲ್ಲಿ ಮೈಸೂರು, ಹುಬ್ಬಳ್ಳಿ, ಧಾರವಾಡ, ಗುಲ್ಬರ್‍ಗ, ಬೆಳಗಾವಿಯಲ್ಲಿ ಮೇಯರ್‌ಗಳೆಲ್ಲ ಈ ರೀತಿ ಆದೇಶ ಹೊರಡಿಸಿದರೆ ಹೇಗೆ? ಕಾದು ನೋಡೋಣವಲ್ಲವೇ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವನಮಹೋತ್ಸವ
Next post ನನ್ನ ಕೊಲೆಗಾರ

ಸಣ್ಣ ಕತೆ

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…