Home / ಲೇಖನ / ಇತರೆ / ಆರೋಗ್ಯಕ್ಕೆ…

ಆರೋಗ್ಯಕ್ಕೆ…

ಆರೋಗ್ಯಕ್ಕೆ ಕಾಫಿ ಟೀ ಒಳ್ಳೆಯದಲ್ಲ ಎಂದು ಸಂಶೋಧನೆಗಳು ಸಾರಿ ಸಾರಿ ಹೇಳುತ್ತಿವೆ. ಆದರೂ ಬೆಳಿಗ್ಗೆ ಒಂದು ಕುಡಿದರೆ ಏನಾಗದೆಂದು ಕೆಲವು ಜನರು ಕಾಫಿ-ಟೀಯೊಂದಿಗೆ ರಾಜಿಯಾಗಿರುವರು.

ಇನ್ನು ಕೆಲವರು ಟೀ… ಅದರಲ್ಲೂ ಗ್ರೀನ್ ಟೀ ಎರಡೂ ಹೊತ್ತು ಕುಡಿಯುವುದು ಒಳ್ಳೆಯದೆಂದು ಹೇಳುವರು. ಮೊನ್ನೆ ದಿನ ಶಾಲೆಗೆ ಡಾ|| ವಿ. ನಾಗರಾಜು ಅವರು ಬಂದಿದ್ದರು. ಅವರು ಬರುವಾಗ ದಿನ ಪತ್ರಿಕೆ, ವಾರಪತ್ರಿಕೆ, ಮಾಸ ಪತ್ರಿಕೆ, ರಾಷ್ಟ್ರೀಯ ಅಂತರರಾಷ್ಟ್ರೀಯ ಪತ್ರಿಕೆಗಳನ್ನು ತಂದು ಮಕ್ಕಳಿಗೆಲ್ಲ ವಿತರಿಸಿ ಇವುಗಳನ್ನು ಓದಲು ಗ್ರೀನ್ ಟೀ ಕುಡಿಯಲು ಸಲಹೆ ಮಾಡುತ್ತಾ ನಿಂತರು.

ಪುಟಾಣಿಗಳೆ… ಗ್ರೀನ್ ಟೀ ಎಂದರೆ… ದಿವ್ಯೌಷಧಿಯಂತೆ ಕೆಲಸ ಮಾಡುವುದು. ಅದರಿಂದ ಉಪಯೋಗಗಳು ಈ ರೀತಿಯಲ್ಲಿವೆ…

೧. ಇದು ನಿದ್ದೆಯನ್ನು ಸೋಮಾರಿತನವನ್ನು ದೂರ ಮಾಡುವುದು.

೨. ಮೆದುಳನ್ನು ಚುರುಕುಗೊಳಿಸುವುದು.

೩. ನೆನಪಿನ ಶಕ್ತಿ ವೃದ್ಧಿಸುವುದು.

೪. ಬೊಜ್ಜು ಕರಗಿಸುವುದು. ತೂಕ ಇಳಿಸುವುದು, ನಿರಂತರ ಚುರುಕಾಗಿರುವಂತೆ ಮಾಡುವುದು.

೫. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು. ಕ್ಯಾನ್ಸರ್ ಬರದಂತೆ ತಡೆಯುವ ಶಕ್ತಿ ಇದೆ.

೬. ಸಕ್ಕರೆ ಕಾಯಿಲೆ ಬರದಂತೆ, ಹೃದಯಾಘಾತವಾಗುವುದನ್ನು ತಡೆಯುವುದು.

೭. ಬಾಯಿ ವಾಸನೆ ತಡೆಯುವುದು, ಹಲ್ಲು ಹುಳುಕು ಹಿಡಿಯದಂತೆ ತಡೆಯುವುದು.

೮. ಎಲುಬುಗಳನ್ನು ಗಟ್ಟಿಗೊಳಿಸುವುದು. ಮರೆಗುಳಿತನವನ್ನು ದೂರ ಮಾಡುವುದು.

೯. ಹುರುಪು ಉತ್ಸಾಹ ತುಂಬುವುದು.

೧೦. ದೇಹವನ್ನು ಬೆಚ್ಚಗಿಡುವುದು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...