Home / ಲೇಖನ / ಇತರೆ / ಭೂನಿಧಿ ಪತ್ತೆ

ಭೂನಿಧಿ ಪತ್ತೆ

ನಮ್ಮ ದೇಶ ಚಿನ್ನ, ನಮ್ಮ ಜಲ ದಿವ್ಯ‌ಔಷಧಿ, ನಮ್ಮ ಜನ ರನ್ನರೆಂದು, ನಾನು ಈಗಾಗಲೇ ಬಹಳಷ್ಟು ಸಾರಿ ಹೇಳಿದ್ದೇನೆ ಬರೆದಿದ್ದೇನೆ.

ಈ ಮಾತುಗಳಿಗೆ ಪೂರಕವಾಗಿ ಹೈದ್ರಾಬಾದಿನ ಒಸ್ಮಾನಿಯಾ ವಿಶ್ವವಿದ್ಯಾಲಯ ಹಾಗೂ ಅಣು ಖನಿಜ ನಿರ್‍ದೇಶನಾಲಯ ನಡೆಸಿದ ಜಂಟಿ ಸಂಶೋಧನೆಯಲ್ಲಿ ಶ್ರೀಶೈಲ ಅರಣ್ಯದಲ್ಲಿ ಬೃಹತ್ ಪ್ರಮಾಣದ ಯುರೇನಿಯಮ್ ಅದಿರು ನಿಕ್ಷೇಪ ಇತ್ತೀಚೆಗೆ ಜುಲೈ-೨೦೧೫ ರ ಮಾಹೆಯಲ್ಲಿ ಪತ್ತೆಯಾಗಿರುವುದು.

ಆಂಧ್ರ ಪ್ರದೇಶದ ಕಡಪ ಬಳಿಯ ಶ್ರೀಶೈಲ ಅರಣ್ಯದಲ್ಲಿರುವ ಈ ನಿಕ್ಷೇಪದಿಂದ ಭವ್ಯ ಭಾರತದಲ್ಲಿನ ಪರಮಾಣು ಸ್ಥಾವರಗಳ ಇಂಧನ ಕೊರತೆ ನೀಗುವ ಸಾಧ್ಯತೆ ಬಹಳ ಇದೆಯೆಂದು ಈಗಾಗಲೇ ತಜ್ಞರು ಅಭಿಪ್ರಾಯ ಪಟ್ಟಿರುವರು.

ಈ ಭಾರೀ ನಿಕ್ಷೇಪ ತೆಲಂಗಾಣ ರಾಜ್ಯದಲ್ಲೂ ತೀವ್ರವಾಗಿ ವ್ಯಾಪಿಸಿದೆಯೆಂದು ಸಂಶೋಧನೆಗಳು ದೃಢಪಡಿಸಿವೆ. ಇದೊಂದು ತೀರಾ ವಿರಳವಾದ ಖನಿಜವಾಗಿದ್ದು ಇದು ಗುಣಮಟ್ಟದಲ್ಲಿ ಅತ್ಯುತ್ತಮವಾಗಿದ್ದು ಆಸ್ಟ್ರೇಲಿಯಾ ಕೆನಡಾದಲ್ಲಿ ಲಭ್ಯವಿರುವ ಯೂರೇನಿಯಂ ಖನಿಜದ ಗುಣಮಟ್ಟಕ್ಕೆ ಹೋಲಿಸಬಹುದಾಗಿದೆಯೆಂದು ಅಭಿಪ್ರಾಯ ಪಟ್ಟಿರುವರು.

ಇದೇ ರೀತಿ- ಈಗಾಗಲೇ ಮೆಹಬೂಬ್ ನಗರ, ನೆಲಗೊಂಡ. ಗುಂಟೂರುಗಳಲ್ಲೂ ಈ ಮೊದಲು ಯುರೇನಿಯಂ ನಿಕ್ಷೇಪ ಪತ್ತೆಯಾಗಿದ್ದನ್ನು ಇಲ್ಲಿ ಸ್ಮರಿಸಿರುವರು. ಇಲ್ಲಿನ ಅಧಿಕಾರಿಗಳ ಪ್ರಕಾರ ಈಗ ಕಡಪದಲ್ಲಿ ಪತ್ತೆಯಾಗಿರುವ ನಿಕ್ಷೇಪದಲ್ಲಿ ಸುಮಾರು ೭ ಲಕ್ಷ ಟನ್ ಯುರೇನಿಯಂ ಲಭ್ಯವಾಗುವ ಸಾಧ್ಯತೆ ಇದ್ದು ತೆಲಂಗಾಣ ಪ್ರದೇಶದಲ್ಲಿ ೩ ಲಕ್ಷ ಟನ್ ಇರುವ ಸಾಧ್ಯತೆಯಿದೆಯೆಂದು ಅಂದಾಜಿಸಿರುವರು.

ಈ ಎರಡನ್ನೂ ಸೇರಿಸಿದರೆ ಭವ್ಯ ಭಾರತದ ಒಟ್ಟು ಯುರೇನಿಯಂ ನಿಕ್ಷೇಪದ ೨೫% ಭಾಗದಷ್ಟಾಗಲಿದೆಯೆಂದು ಅಂದಾಜಿಸಿರುವರು.

ಶ್ರೀಕಾಕುಲಂನಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಅಣುಶಕ್ತಿ ಕೇಂದ್ರಕ್ಕೆ ಶ್ರೀ ಶೈಲ ನಿಕ್ಷೇಪವೇ ಇಂಧನ ಒದಗಿಸಲಿದೆ. ಆದರೆ ಪರಿಸರವಾದಿಗಳು ಈಗಾಗಲೇ ಶ್ರೀಕಾಕುಲಂನ ಪ್ರಸ್ತಾಪಿತ ಅಣುಶಕ್ತಿ ಕೇಂದ್ರಕ್ಕೆ ತೀವ್ರ ಪ್ರತಿಭಟನೆಗಳನ್ನು ತೀವ್ರಗೊಳಿಸುವ ಸಾಧ್ಯತೆ ಇದೆ.

ಒಂದು ಕಡೆ ಅಭಿವೃದ್ಧಿ, ಇನ್ನೊಂದೆಡೆ ಪರಿಸರದ ಕಾಳಜಿ, ಎರಡನ್ನು ಸಮತೋಲನ ಮಾಡಿಕೊಂಡು ಹೋಗುವುದು ಇಂದಿನ ಸವಾಲುಗಳಲ್ಲಿ ಮುಖ್ಯವಲ್ಲವೇ? ಯಾವುದಕ್ಕೂ ಏನಕ್ಕೂ ಕಾದು ನೋಡೋಣವಲ್ಲವೇ?
*****

Tagged:

Leave a Reply

Your email address will not be published. Required fields are marked *

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...