Home / ಲೇಖನ / ಇತರೆ / ಭೂನಿಧಿ ಪತ್ತೆ

ಭೂನಿಧಿ ಪತ್ತೆ

ನಮ್ಮ ದೇಶ ಚಿನ್ನ, ನಮ್ಮ ಜಲ ದಿವ್ಯ‌ಔಷಧಿ, ನಮ್ಮ ಜನ ರನ್ನರೆಂದು, ನಾನು ಈಗಾಗಲೇ ಬಹಳಷ್ಟು ಸಾರಿ ಹೇಳಿದ್ದೇನೆ ಬರೆದಿದ್ದೇನೆ.

ಈ ಮಾತುಗಳಿಗೆ ಪೂರಕವಾಗಿ ಹೈದ್ರಾಬಾದಿನ ಒಸ್ಮಾನಿಯಾ ವಿಶ್ವವಿದ್ಯಾಲಯ ಹಾಗೂ ಅಣು ಖನಿಜ ನಿರ್‍ದೇಶನಾಲಯ ನಡೆಸಿದ ಜಂಟಿ ಸಂಶೋಧನೆಯಲ್ಲಿ ಶ್ರೀಶೈಲ ಅರಣ್ಯದಲ್ಲಿ ಬೃಹತ್ ಪ್ರಮಾಣದ ಯುರೇನಿಯಮ್ ಅದಿರು ನಿಕ್ಷೇಪ ಇತ್ತೀಚೆಗೆ ಜುಲೈ-೨೦೧೫ ರ ಮಾಹೆಯಲ್ಲಿ ಪತ್ತೆಯಾಗಿರುವುದು.

ಆಂಧ್ರ ಪ್ರದೇಶದ ಕಡಪ ಬಳಿಯ ಶ್ರೀಶೈಲ ಅರಣ್ಯದಲ್ಲಿರುವ ಈ ನಿಕ್ಷೇಪದಿಂದ ಭವ್ಯ ಭಾರತದಲ್ಲಿನ ಪರಮಾಣು ಸ್ಥಾವರಗಳ ಇಂಧನ ಕೊರತೆ ನೀಗುವ ಸಾಧ್ಯತೆ ಬಹಳ ಇದೆಯೆಂದು ಈಗಾಗಲೇ ತಜ್ಞರು ಅಭಿಪ್ರಾಯ ಪಟ್ಟಿರುವರು.

ಈ ಭಾರೀ ನಿಕ್ಷೇಪ ತೆಲಂಗಾಣ ರಾಜ್ಯದಲ್ಲೂ ತೀವ್ರವಾಗಿ ವ್ಯಾಪಿಸಿದೆಯೆಂದು ಸಂಶೋಧನೆಗಳು ದೃಢಪಡಿಸಿವೆ. ಇದೊಂದು ತೀರಾ ವಿರಳವಾದ ಖನಿಜವಾಗಿದ್ದು ಇದು ಗುಣಮಟ್ಟದಲ್ಲಿ ಅತ್ಯುತ್ತಮವಾಗಿದ್ದು ಆಸ್ಟ್ರೇಲಿಯಾ ಕೆನಡಾದಲ್ಲಿ ಲಭ್ಯವಿರುವ ಯೂರೇನಿಯಂ ಖನಿಜದ ಗುಣಮಟ್ಟಕ್ಕೆ ಹೋಲಿಸಬಹುದಾಗಿದೆಯೆಂದು ಅಭಿಪ್ರಾಯ ಪಟ್ಟಿರುವರು.

ಇದೇ ರೀತಿ- ಈಗಾಗಲೇ ಮೆಹಬೂಬ್ ನಗರ, ನೆಲಗೊಂಡ. ಗುಂಟೂರುಗಳಲ್ಲೂ ಈ ಮೊದಲು ಯುರೇನಿಯಂ ನಿಕ್ಷೇಪ ಪತ್ತೆಯಾಗಿದ್ದನ್ನು ಇಲ್ಲಿ ಸ್ಮರಿಸಿರುವರು. ಇಲ್ಲಿನ ಅಧಿಕಾರಿಗಳ ಪ್ರಕಾರ ಈಗ ಕಡಪದಲ್ಲಿ ಪತ್ತೆಯಾಗಿರುವ ನಿಕ್ಷೇಪದಲ್ಲಿ ಸುಮಾರು ೭ ಲಕ್ಷ ಟನ್ ಯುರೇನಿಯಂ ಲಭ್ಯವಾಗುವ ಸಾಧ್ಯತೆ ಇದ್ದು ತೆಲಂಗಾಣ ಪ್ರದೇಶದಲ್ಲಿ ೩ ಲಕ್ಷ ಟನ್ ಇರುವ ಸಾಧ್ಯತೆಯಿದೆಯೆಂದು ಅಂದಾಜಿಸಿರುವರು.

ಈ ಎರಡನ್ನೂ ಸೇರಿಸಿದರೆ ಭವ್ಯ ಭಾರತದ ಒಟ್ಟು ಯುರೇನಿಯಂ ನಿಕ್ಷೇಪದ ೨೫% ಭಾಗದಷ್ಟಾಗಲಿದೆಯೆಂದು ಅಂದಾಜಿಸಿರುವರು.

ಶ್ರೀಕಾಕುಲಂನಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಅಣುಶಕ್ತಿ ಕೇಂದ್ರಕ್ಕೆ ಶ್ರೀ ಶೈಲ ನಿಕ್ಷೇಪವೇ ಇಂಧನ ಒದಗಿಸಲಿದೆ. ಆದರೆ ಪರಿಸರವಾದಿಗಳು ಈಗಾಗಲೇ ಶ್ರೀಕಾಕುಲಂನ ಪ್ರಸ್ತಾಪಿತ ಅಣುಶಕ್ತಿ ಕೇಂದ್ರಕ್ಕೆ ತೀವ್ರ ಪ್ರತಿಭಟನೆಗಳನ್ನು ತೀವ್ರಗೊಳಿಸುವ ಸಾಧ್ಯತೆ ಇದೆ.

ಒಂದು ಕಡೆ ಅಭಿವೃದ್ಧಿ, ಇನ್ನೊಂದೆಡೆ ಪರಿಸರದ ಕಾಳಜಿ, ಎರಡನ್ನು ಸಮತೋಲನ ಮಾಡಿಕೊಂಡು ಹೋಗುವುದು ಇಂದಿನ ಸವಾಲುಗಳಲ್ಲಿ ಮುಖ್ಯವಲ್ಲವೇ? ಯಾವುದಕ್ಕೂ ಏನಕ್ಕೂ ಕಾದು ನೋಡೋಣವಲ್ಲವೇ?
*****

Tagged:

Leave a Reply

Your email address will not be published. Required fields are marked *

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...