Home / ಲೇಖನ / ಇತರೆ / ಬಿಳಿಯ ಬಣ್ಣದ ಕತೆ

ಬಿಳಿಯ ಬಣ್ಣದ ಕತೆ

ಬಿಳಿಯ ಬಣ್ಣ ಬಿಳಿಯ ಬಟ್ಟೆ ಬರೆ ಇತ್ಯಾದಿಗಳಿಂದ ಕೆಲ ಸೋಂಕುಗಳು ಬರುತ್ತಿವೆಯೆಂದು ಬೆಂಗಳೂರಿನ ಖಾಸಗಿ ವೈದ್ಯ ಕಾಲೇಜಿನ ಎಡ್ಮಂಡ್ ಫರ್‍ನಾಂಡಿಸ್ ಅವರು ನಡೆಸಿದ ಸಂಶೋಧನೆಯಿಂದ ದೃಢಪಟ್ಟಿದೆ.

ಶ್ರೀಯುತರು ತಮ್ಮ ವರದಿಯನ್ನು ಕೇಂದ್ರ ಸರ್‍ಕಾರದ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಶೀಘ್ರ ನಿರ್‍ಧಾರ ಕೈಗೊಳ್ಳಬೇಕೆಂದು ಎಡ್ಮಂಡ್ ಫರ್‍ನಾಂಡಿಸ್ ಅಗ್ರಹಿಸಿದ್ದಾನೆ.

ಬಿಳಿ ಬಟ್ಟೆ ಬರೆ ಧರಿಸುವವರಿಗೊಂದು ಶಾಕ್ ನೀಡಿದ್ದಾನೆ ! ಬರೀ ಬಿಳಿ ಬಟ್ಟೆ ಧರಿಸುವುದರಿಂದ ವೃತ್ತಿಪರ ವೈದ್ಯರಾಗಲು ಮದರ್ ಥೇರಿಸಾ ಆಗಲು ಸಾಧ್ಯವಿಲ್ಲ. ರೋಗಿಗಳಿಗೆ ಭರವಸೆಯ ಉತ್ತಮ ಶೂಶ್ರೂಷೆ ನೀಡುವವರಾಗಿರಬೇಕು ಎಂದು ಶಿಫಾರಸ್ಸು ಕೂಡಾ ಮಾಡಿದ್ದಾನೆ.

ಶತ ಶತಮಾನಗಳಿಂದಲೂ ಬಿಳಿ ಬಟ್ಟೆ ಧರಿಸುವುದು ವಾಡಿಕೆ ಸಂಪ್ರದಾಯವಾಗಿ ಬಂದಿದೆ. ಈ ಬಿಳಿಯ ಬಟ್ಟೆಗಳೇ ವೈರಸ್‌ಗಳನ್ನು ಹರಡುತ್ತಿದೆಯೆಂಬುದು ಹಲವರಿಗೆ ತಿಳಿದಿರುವುದಿಲ್ಲ.

ವೈದ್ಯರು- ವಿದ್ಯಾರ್ಥಿಗಳು, ಆಸ್ಪತ್ರೆಯ ಸಿಬ್ಬಂದಿ, ಬರೀಯ ಬಿಳಿ ಬಟ್ಟೆ ಧರಿಸಿ ಎಲ್ಲ ಕಡೆ, ಹೊರ ಒಳಗೆ ಅಡ್ಡಾಡುವರು. ಇದರಿಂದಾಗಿ ಸೊಂಕುಗಳು ಹರಡಲು ರೋಗ ಉಲ್ಬಣಗೊಳ್ಳಲು ಕಾರಣವಾಗಿದೆಯೆಂದು ದೃಢ ಪಡಿಸಿರುವರು.

೨೦೦೭ ರಲ್ಲಿ ಯುನೈಟೆಡ್ ಕಿಂಗ್ ಡಮ್‌ನಲ್ಲಿ ನೀಳ ತೋಳಿನ ಕೋಟ್ ಧರಿಸುವುದನ್ನು ನಿಲ್ಲಿಸುವ ಬಗ್ಗೆ ನಿಷೇಧ ಹೇರುವ ನಿರ್ಧಾರ ಕೈ ಗೊಂಡಿರುವರು.

೨೦೦೯ ರಲ್ಲಿ ಅಮೇರಿಕ ವೈದ್ಯಕೀಯ ಸಂಸ್ಥೆ ಅದನ್ನು ಅನುಸರಿಸಲು ಮುಂದಾಯಿತು. ಆದರೆ ಪ್ರತಿರೋಧದ ಹಿನ್ನಲೆಯಲ್ಲಿ ಅಂಥ ನಿರ್‍ಧಾರ ಕೈಗೊಳ್ಳಲು ಸಾಧ್ಯವಾಗಲಿಲ್ಲ ಎಂದು ಎಡ್ಮಂಡ್ ಫರ್‍ನಾಂಡಿಸ್ ತಮ್ಮ ಸಂಶೋಧನೆಯಲ್ಲಿ ವಿವರಿಸಿದ್ದಾರೆ.

ಹೀಗೆ ಸಂಶೋಧನೆ ಕೈಗೊಳ್ಳುತ್ತಾ ಹೋದಂತೆಲ್ಲ ಹೊಸ ಹೊಸ ವಿಚಾರಗಳು ಹೊರ ಹೊಮ್ಮುತ್ತವೆ!

ನಾವು-ನೀವು ಎಲ್ಲರೂ ಸೇರಿ-ಎಡ್ಮಂಡ್ ಫರ್‍ನಾಂಡಿಸ್ ಅವರಿಗೆ ಆಲ್ ದಿ ಬೆಸ್ಟ್ ಹೇಳೋಣವಲ್ಲವೇ?
*****

Tagged:

Leave a Reply

Your email address will not be published. Required fields are marked *

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...