Home / ಕಥೆ / ಸಣ್ಣ ಕಥೆ / ರಾಜಭಕ್ತ ಮೈಸೂರಿನ ಸೆಟ್ಟಿ

ರಾಜಭಕ್ತ ಮೈಸೂರಿನ ಸೆಟ್ಟಿ

ಇಮ್ಮಡಿ ತಿಮ್ಮರಾಜಒಡೆಯರು ದೊರೆತನಮಾಡುತ್ತಿದ್ದ ಕಾಲದಲ್ಲಿ ಸಿಂಧುವಳ್ಳಿ, ಹುಣಸನಾಳುಗಳ ಪಾಳಯಗಾರರು ಅವರ ಅಶ್ರಿತರಾಗಿದ್ದರು.

ಒಂದುಸಲ ನಂಜನಗೂಡಿನ ರಥೋತ್ಸವ ಕಾಲದಲ್ಲಿ ದೊರೆಗಳು ಅಲ್ಲಿಗೆ ಬಂದಿದ್ದರು. ಅಲ್ಲಿಗೆ ಕೆಲವರು ಪಾಳಯಗಾರರು ದೇವರ ಸೇವೆಗೆಂದು ಬಂದಿದ್ದರು. ಪಾಳಯಗಾರರು ಬಹಳ ಅಟ್ಟಹಾಸದಿಂದ ಮೆರೆಯುತ್ತಲಿದ್ದು `ಬಿರುದೆಂತೆಂಬರಗಂಡ’ ನೆಂದು ಹೊಗಳಿಸಿ ಕೊಳ್ಳುತ್ತ ತಮ್ಮ ಸಮಾನರಿಲ್ಲವೆಂಬ ಜಂಭವನ್ನು ತೋರುತ್ತಿದ್ದರು.

ಇದನ್ನು ಕಂಡು ಮೈಸೂರಿನವರು ಸಹಿಸಲಿಲ್ಲ. ಅವರಲ್ಲಿ ಮುಖ್ಯನೂ ರಾಜಭಕ್ತನೂ ಆಗಿದ್ದ ಮೈಸೂರ ಸೆಟ್ಟಿಯು ಸಾಹಸದಿಂದ ಅವರೆದುರಿಗೆ ಹೋಗಿ “ಬಿರುದೆಂತೆಂಬರಗಂಡನೆಂಬ ಬಿರುದು ನಮ್ಮ ಮೈಸೂರಿನ ಒಡೆಯರಿಗೇ ಅಲ್ಲದೆ ನಿಮ್ಮಂತಹವರಿಗೆ ಸಲ್ಲುವುದಿಲ್ಲ; ನೀವು ಆ ಬಿರುದನ್ನು ಬಿಟ್ಟುಬಿಡಬೇಕು” ಎಂದು ಗಂಭೀರವಾಗಿ ಹೇಳಿದನು. ಪಾಳಯಗಾರರಿಗೆ ಕೋಪ ಬಂತು; ಈ ಅಧಿಕಪ್ರಸಂಗಿ ಸೆಟ್ಟಿಯನ್ನು ಶಿಕ್ಷಿಸಬೇಕೆಂದು ಅವನನ್ನು ಸೆರೆಹಿಡಿಸಿ ಒಯ್ದರು.

ಈ ಸಮಾಚಾರವು ಒಡೆಯರಿಗೆ ತಲಪಿತು; “ನಮ್ಮ ಧೀರ ಪ್ರಜೆಯಾದ ಸೆಟ್ಟಿಯನ್ನು ಹಿಡಿದುಕೊಂಡು ಹೋಗಲು ಆ ಪಾಳಯಗಾರರಿಗೆಷ್ಟು ಗರ್ವ! ನಮ್ಮ ಆಪ್ತನಾದ ಸೆಟ್ಟಿಯನ್ನು ಹಾಗೆ ಬಿಟ್ಟುಕೊಟ್ಟೇವೆಯೆ ನಾವು!” ಎಂದು ತಾವೇ ಸೈನ್ಯದೊಡನೆ ಹೊರಟು ಪಾಳಯಗಾರರ ಶಿಬಿರಕ್ಕೆ ಹೋಗಿ ಕೂಗಿಸಿ ಹೇಳಿಸಿದರು : “ಪಾಳಯಗಾರರಲ್ಲಿ ಯಾರಾದರೂ ಧೀರರೂ ಸಾಹಸಿಗಳೂ ಇದ್ದರೆ ಯುದ್ಧಕ್ಕೆ ಬರಬಹುದು; ಇಲ್ಲವಾದರೆ ಎಲ್ಲರೂ ಬಂದು ಸೆಟ್ಟಿಯನ್ನೊಪ್ಪಿಸಿ ತಪ್ಪಾಯಿತೆಂದು ದೊರೆಗಳ ಮನ್ನಣೆಯ ಬೇಡಬಹುದು” ಎಂದು. ಮದಿಸಿದ್ದ ಪಾಳಯಗಾರರು ಯುದ್ಧಕ್ಕೆ ಬಂದರು. ಒಡೆಯರು ಅವರೆಲ್ಲರನ್ನು ಸೋಲಿಸಿ ಸೆರೆಯಾದ ಸೆಟ್ಟಿಯನ್ನು ಕರೆತರಿಸಿ ಮರ್ಯಾದೆಯಿಂದ ಕಂಡು ಮೈಸೂರಿಗೆ ಜಯಶೀಲರಾಗಿ ಹಿಂತಿರುಗಿದರು. ಈ ಸಂಗತಿಯಿಂದ ರಾಜರಿಗೆ ‘ಮೊನೆಗಾರ’ ನೆಂಬ ಬಿರುದು ವಾಡಿಕೆಯಾಯ್ತು. ಅಂದಿನಿಂದ ಅರಮನೆಯಲ್ಲಿ ಸೆಟ್ಟಿಗೆ ಗೌರವವೂ ಹೆಚ್ಚಿತು.
*****
[ವಂಶರತ್ನಾಕರ ಪುಟ ೧೯; ವಂಶಾವಳಿ ಸಂಪುಟ ೧ ಪುಟ ೧೫- ೧೬]

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...