Home / ಕಥೆ / ಸಣ್ಣ ಕಥೆ / ಸುಗುಣ ಗಂಭೀರ

ಸುಗುಣ ಗಂಭೀರ

ಬೋಳತಲೆ ಚಾಮರಾಜ ಒಡೆಯರ ಕಾಲದಲ್ಲಿ ಒಡೆಯರ ವಂಶಕ್ಕೆ ಅಧಿಕಾರವು ಹೆಚ್ಚಾಗಿರಲಿಲ್ಲ. ಇವರೂ ನೆರೆಹೊರೆಯಲ್ಲಿದ್ದ ಒಡೆಯರೂ ಪಾಳಯಗಾರರೊಂದಿಗೆ ಸೇರಿಕೊಂಡು ಶ್ರೀರಂಗ ಪಟ್ಟಣ ಅಧಿಕಾರಿಗೆ ಪೊಗದಿ ಕೊಡಬೇಕಾಗಿತ್ತು.

ಶ್ರೀರಂಗಪಟ್ಟಣದಲ್ಲಿ ವಿಜಯನಗರದ ಅಧಿಕಾರಿಯಾಗಿ ರಾಮರಾಯನೆಂಬಾತನಿದ್ದನು. ಸುತ್ತಮುತ್ತಣ ಪಾಳಯಗಾರರನ್ನು ಆಳುತ್ತಿದ್ದ ಆತನು ತೊರೆಮಾವಿನಹಳ್ಳಿಯ ರೇಮಟಿ ವೆಂಕಟಾದ್ರಿ ನಾಯಕನನ್ನು ಮೆಚ್ಚಿ ಆತನಿಗೆ ಹೆಚ್ಚು ಅಧಿಕಾರವನ್ನು ಕೊಟ್ಟನು. ಚಾಮರಾಜ ಒಡೆಯರಿಗೆ ಇದು ಸಹಿಸಲಿಲ್ಲ. ಆದರೆ ರಾಮರಾಯನ ಬೆಂಬಲವನ್ನು ಪಡೆದ ವೆಂಕಟಾದ್ರಿ ನಾಯಕನನ್ನು ಇದಿರಿಸುವುದು ಸುಲಭವಾಗಿರಲ್ಲ. ಬಂದ ಆದಾಯದಲ್ಲಿ ಸಾಕಾದಷ್ಟು ಸೈನ್ಯವನ್ನು ಕೂಡಿಸುವುದಕ್ಕೆ ಆಗಲಿಲ್ಲ; ಮತ್ತು ಮೈಸೂರಿಗೆ ಕೋಟೆ ಕಟ್ಟುವುದಕ್ಕೂ ಅವಕಾಶವಿರಲಿಲ್ಲ. ಏಕೆಂದರೆ ಶ್ರೀರಂಗಪಟ್ಟಣದ ಪ್ರತಿನಿಧಿಯು ಹಾಗೆ ಮಾಡಿದಲ್ಲಿ ಕೋಪಗೊಳ್ಳುತ್ತಿದ್ದನು.

ಆಗ ಚಾಮರಾಜ ಒಡೆಯರು ಉಪಾಯವನ್ನು ಯೋಚಿಸಿದರು. ಹಣವನ್ನುಳಿಸಿ ಕೊಳ್ಳುವುದಕ್ಕೂ ಮೈಸೂರಿಗೆ ಕೋಟೆ ಕಟ್ಟುವುದಕ್ಕೂ ಅನುಕೂಲವಾಗುವ ಹಾಗೆ ರಾಮರಾಯನ ಬಳಿಗೆ “ನಮ್ಮ ಹೊಲಗಳಲ್ಲಿ ಮಗಳ ಅಂಗಳದಲ್ಲಿಯೂ ಕಾಡುಹಂದಿಗಳ ಕಾಟ ಹೆಚ್ಚಾಗಿದೆ. ಕಾಡುಹಂದಿಗಳನ್ನು ತಡೆಯಲು ಊರನ್ನು ಕೋಟೆಯಿಂದ ಭದ್ರಪಡಿಸಬೇಕು; ಅದಕ್ಕೆ ಹಣವೂ ಬೇಕು. ಆದ್ದರಿಂದ ತಾವೂ ನಮ್ಮ ಪೊಗದಿಯ ಹಣವನ್ನು ಮನ್ನಿಸಿ ಕೋಟೆ ಕಟ್ಟಲು ಅನುಮತಿ ಕೊಡಬೇಕು” ಎಂದು ಹೇಳಿ ಕಳುಹಿಸಿದರು. ಆತನು ಒಪ್ಪಲು ಪೊಗದಿಯ ಹಣದಿಂದ ಕೋಟೆಯನ್ನು ಕಟ್ಟಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡರು.

ಬಳಿಕ ಒಂದಾನೊಂದುಸಲ ವೆಂಕಟಪ್ಪ ನಾಯಕನು ದಾಳ, ದಮಾಣ, ಅಂದಳ ಮುಂತಾದವುಗಳಿಂದೊಡಗೂಡಿ ಶ್ರೀರಂಗಪಟ್ಟಣಕ್ಕೆ ಹೋಗುತ್ತಿದ್ದಾಗ ಚಾಮರಾಜ ಒಡೆಯರು ಆತನನ್ನು ಕಾಳಗಕ್ಕೆ ಕರೆದರು. ಮೈಸೂರಿನ ಭಟರು ಚನ್ನಾಗಿ ಕಾದಿ ದಾಳದಮಾಣ ಮುಂತಾದುವನ್ನು ಕಿತ್ತುಕೊಂಡರು. ಅಂದಿನಿಂದ ಚಾಮರಾಜ ಒಡೆಯರು ವೆಂಕಟಾದ್ರಿನಾಯಕನು ಒಪ್ಪಿಸಿ ಕೊಂಡಿದ್ದ “ಸುಗುಣ ಗಂಭೀರ” ನೆಂಬ ಬಿರುದನ್ನು ತಾವೇ ವಹಿಸಿದರು.
*****
[ವಂಶರತ್ನಾಕರ, ಪುಟ ೨೦ ; ವಂಶಾವಳಿ, ಪುಟ ೧೭]

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...