Home / ಕಥೆ / ಸಣ್ಣ ಕಥೆ / ಹುಚ್ಚನ ಕರಿಯ

ಹುಚ್ಚನ ಕರಿಯ

ಕಳಲೆಯೆಂಬ ಗ್ರಾಮದಲ್ಲಿ ಒಡೆಯರ ಜ್ಞಾತಿಗಳಿರುತ್ತಿದ್ದರು. ರಾಜ ಒಡೆಯರ ಕಾಲದಲ್ಲಿ ಆ ಗ್ರಾಮವನ್ನು ಲಕ್ಷ್ಮಿ ಕಾಂತಯ್ಯ ನೆಂಬಾತನು ಅನುಭವಿಸುತ್ತ ಭಿನ್ನೋದರರಾದ ತನ್ನ ಸಹೋದರರನ್ನು ಪೋಷಿಸುತ್ತಿದ್ದನು. ಆ ಸಹೋದರರಲ್ಲಿ ನಂದಿನಾಥಯ್ಯ, ಕಾಂತಯ್ಯ, ಚಂದ್ರಶೇಖರಯ್ಯರೆಂಬ ಮೂವರು-ಲಕ್ಷ್ಮೀ ಕಾಂತಯ್ಯನ ಬಲತಾಯಿ ಚನ್ನಾಜಯಮ್ಮಯ್ಯನ ಮಕ್ಕಳು-ಆ ಗ್ರಾಮವನ್ನು ತಾವೇ ಅನುಭವಿಸಬೇಕೆಂದು ದುರಾಲೋಚನೆಮಾಡಿ ಲಕ್ಷ್ಮೀ ಕಾಂತಯ್ಯನನ್ನು ಮೋಸದಿಂದ ಕೊಂದುಬಿಟ್ಟರು. ತರುವಾಯ ಮಲ್ಲರಾಜಯ್ಯನೆಂಬ ೫ ವರ್ಷದ ಹುಡುಗನನ್ನು ಕೊಲ್ಲಲು ಸಿದ್ದರಾದರು; ಆ ಹುಡುಗನು ರಾಜ ಒಡೆಯರ ಅಕ್ಕಂದಿರು ದೇವಾಜಮ್ಮಣ್ಣಿಯ ಮಗನೂ-ಲಕ್ಷ್ಮಿ ಕಾಂತಯ್ಯನ ಸಹೋದರನೂ ಆಗಿದ್ದನು. ಈ ಹುಡುಗನ ಕೊಲೆಗೆ ಈ ಮೂವರು ಸಿದ್ದರಾಗಿದ್ದು ಅವನನ್ನು ಹುಡುಕುತ್ತಲಿದ್ದರು.

ಆ ಕಾಲದಲ್ಲಿ ಆ ಹುಡುಗನು ಕುರುಬಗೇರಿಗೆ ಓಡಿದನು. ಅಲ್ಲಿ ಕುರುಬರ ‘ಹುಚ್ಚನ ಕರಿಯ’ ಎಂಬವನು ಆ ಬಾಲಕನನ್ನು ಗೋಪ್ಯವಾಗಿ ಸಂರಕ್ಷಿಸಿ, ರಾಜರ ಸೋದರಳಿಯನೆಂದು ತಿಳಿದು, ರಾತ್ರಿ ವೇಳೆಯಲ್ಲಿ ಹೊರಟು ಆ ಬಾಲಕನನ್ನು ತಂದು ರಾಜರಿಗೊಪ್ಪಿಸಿದನು. ರಾಜರು ಮಲ್ಲರಾಜಯ್ಯನ ವೃತ್ತಾಂತವನ್ನು ತಿಳಿದು ವ್ಯಸನ ಪಟ್ಟು ಆ ಮೂವರನ್ನು ಶಿಕ್ಷಿಸಲು ಸಂಕಲ್ಪ ಮಾಡಿಕೊಂಡರು.

ಅತ್ತಲಾಗಿ ಲಕ್ಷ್ಮೀಕಾಂತಯ್ಯನು ದುರ್ಮರಣಕ್ಕೆ ಸಿಕ್ಕ ಮೇಲೆ ಆತನ ಹೆಂಡತಿ ಲಿಂಗಾಜಮ್ಮಯ್ಯನೆಂಬುವಳು ಸಹಗಮನಕ್ಕೆ ಸಿದ್ಧಳಾದಳು. ಅಗ್ನಿಕುಂಡದಲ್ಲಿ ಧುಮುಕುವ ಮುನ್ನ ಆಕೆಯು “ನನ್ನ ಗಂಡನನ್ನು ಅನ್ಯಾಯದಿಂದ ವಧಿಸಿದ ಬಲ ಅತ್ತೇ ಮಕ್ಕಳ ಮೂವರ ವಂಶವೂ ನಷ್ಟವಾಗಲಿ; ಕಳಲೇ ಅರಸುಗಳು ಕೂಡ್ಲಾಪುರ ಬತ್ತದ ಅಕ್ಕಿಯನ್ನೇ ವಿಶ್ವಾಸದಿಂದ ಊಟಮಾಡುವದರಿಂದ ಆ ಅನ್ನವು ರಕ್ತದ ಕೂಳಿನಂತೆ ಆಗಲಿ; ನನ್ನ ಬಾಳು ತಪ್ಪಿಸಿದ ನನ್ನ ಗಂಡನ ವಂಶದ ಹೆಣ್ಣು ಮಕ್ಕಳು ಚನ್ನಾಗಿ ಬಾಳದೆ ಇರಲಿ; ಮತ್ತು, ಧರ್ಮಾತ್ಮರಾದ ಮಹೀಶರ ಮನೆತನದಲ್ಲಿ ಹುಟ್ಟಿದ ನನ್ನ ಬಲ ಅತ್ತೆಯಾದ ದೇವಾಜಮ್ಮಣ್ಣಿಯವರಿಗೆ ಪುತ್ರನ ವಂಶವು ನಡೆಯಲಿ” ಎಂದು ನುಡಿದಳು.

ವಯಸ್ಸು ಬಂದಮೇಲೆ ಮಲ್ಲರಾಜಯ್ಯನನ್ನು ರಾಜರು ದಳವಾಯಿತನಕ್ಕೆ ಗೊತ್ತುಮಾಡಿದರು. ಆದರೆ ಮಲ್ಲರಾಜಯ್ಯನು ಆ ಪದವಿಗೆ ಅಯೋಗ್ಯನಾಗಿದ್ದನು. ಕೆಲವು ದಿನಗಳಲ್ಲಿಯೇ ತನ್ನ ಮೊಮ್ಮಗನ ಮೂಲಕ ದಳವಾಯತನದ ಉಂಗುರವನ್ನು ರಾಜರಿಗೆ ಕಳಹಿಸಿಟ್ಟು ತಾವು ಸೋಮಾರಿಯಾಗಿಯೇ ಇದ್ದನು.
*****
[ವಂಶರತ್ನಾಕರ ಪುಟ ೪೬-೪೭ ; ವಂಶಾವಳಿ ಸಂ. ೧, ಪುಟ ೪೬, ೪೭ ಹೊಸ ಗೆಜಟಿಯರ್‌ ಸಂಪುಟ ೫, ಪುಟ ೬೮೭]

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...