Home / ಕಥೆ / ಸಣ್ಣ ಕಥೆ / ಕೊಲೆ ಮಾಡಲು ಬಂದ ಕಳ್ಳರು

ಕೊಲೆ ಮಾಡಲು ಬಂದ ಕಳ್ಳರು

ಕೆಲವು ಕಾಲದ ಮೇಲೆ ತಿರುಚನಾಪಳ್ಳಿಯ ಅರಸನು ತನ್ನ ಜಟ್ಟಿಯನ್ನು ಕಾಳಗದಲ್ಲಿ ಕೊಂದವನೇ ಶ್ರೀರಂಗಪಟ್ಟಣದ ಒಡೆತನಕ್ಕೆ ಬಂದನೆಂಬುದನ್ನು ತಿಳಿದು ಭಯಭ್ರಾಂತನಾದನು. ಇಷ್ಟು ಪೌರುಷಸಾಹಸಗಳುಳ್ಳ ಒಡೆಯರು ತಮ್ಮ ರಾಜ್ಯದಮೇಲೆ ಕೈ ಮಾಡಿದರೇನುಗತಿಯೆಂದು ಚಿಂತಿಸುತ್ತ ಆ ಅರಸನು ಕಡೆಗೆ ರಹಸ್ಯವಾಗಿ ಒಡೆಯರನ್ನು ಕೊಲ್ಲಿಸುವುದೇ ಸರಿಯೆಂದು ನಿಶ್ಚಯಮಾಡಿ, ೨೫ ಮಂದಿ ಕಳ್ಳರಿಗೆ ಹಣವನ್ನು ಕೊಟ್ಟು ಕಂಠೀರವ ಒಡೆಯರ ತಲೆಯನ್ನು ತೆಗೆದುಕೊಂಡು ಬರುವುದೆಂದು ಅಪ್ಪಣೆ ಮಾಡಿದನು. ಆ ಕಳ್ಳರು ಬೇರೆ ಬೇರೆ ವೇಷಗಳನ್ನು ಧರಿಸಿ ಶ್ರೀರಂಗಪಟ್ಟಣಕ್ಕೆ ಬಂದು, ಅಲ್ಲಿನ ಮರ್ಮಗಳನ್ನು ತಿಳಿದುಕೊಳ್ಳುತ್ತಾ ಸಮಯವನ್ನು ನಿರೀಕ್ಷಿಸುತ್ತಲಿದ್ದರು. ಕಡೆಗೊಂದು ದಿನ ಈ ಕಳ್ಳರು ಕನ್ನ ತೆಗೆದುಕೊಂಡೇ ಅರಮನೆಯನ್ನು ಪ್ರವೇಶಮಾಡಿ ಅವಿತುಕೊಂಡಿದ್ದರು. ಅಂತಃಪುರದಲ್ಲಿ ದೊರೆಗಳು ಒಬ್ಬರೇ ಮಂಚದ ಮೇಲೆ ಕುಳಿತು ತಾಂಬೂಲವನ್ನು ಸವಿಯುತ್ತಿದ್ದ ಸಮಯದಲ್ಲಿ ನಿದ್ರೆಯ ಮಾಳಿಗೆಯು ಮುಂದಣ ಹಜಾರದ ಕಂಬಗಳ ಮನೆಯಲ್ಲಿ ಬೇರೆ ಬೇರೆಯಾಗಿ ನಿಂತಿದ್ದ ಈ ೨೫ ಜನರ ನೆರಳುಗಳನ್ನು ನೋಡಿ “ಯಾರೋ ವಂಚನೆಯಿಂದ ನಮ್ಮ ಪ್ರಾಣವನ್ನಪಹರಿಸುವುದಕ್ಕೆ ಬಂದಿರುತ್ತಾರೆ” ಎಂದು ತಿಳಿದು ಹಾಗೆಯೇ ಸಮೀಪದಲ್ಲಿದ್ದ ವಿಜಯ ನಾರಸಿಂಹವೆಂಬ ತಮ್ಮ ಕತ್ತಿಯನ್ನು ಕೈಗೆ ತೆಗೆದುಕೊಂಡರು. ಹೊಂಚು ಹಾಕುತ್ತಲಿದ್ದ ಆ ಕಳ್ಳರು ಅದನ್ನು ಕಂಡು, ಎಲ್ಲರೂ ಗುಂಪುಗೂಡಿ ದೊರೆಗಳನ್ನು ಸುತ್ತಿಕೊಂಡರು. ಆಗ ದೊರೆಗಳು ತಮ್ಮ ಸಾಧಕದ ಚಾತುರ್ಯದಿಂದ ಪಟ್ಟವನ್ನು ತಿರುಹಿ, ತಲೆಗಳನ್ನು ಹೊಡೆದು, ಈ ಪೆಟ್ಟನ್ನು ತಪ್ಪಿಸಿಕೊಂಡು ಸಮೀಪಕ್ಕೆ ನುಸುಳಿಕೊಂಡು ಬಂದ ಕೆಲವರು ತಮ್ಮ ಭುಜಬಲದಿಂದ ಎರಡು ಕಂಕಳುಗಳಲ್ಲಿಯೂ ಇರುಕಿಸಿಕೊಂಡು ಕತ್ತುಗಳನ್ನು ಮುರಿದು, ಮತ್ತೆ ಕೆಲವರನ್ನು ಕಾಲಿನಿಂದ ಒದ್ದು ನಿರ್ಜಿವವಾಗುವಂತೆ ಕೆಡಹಿದರು. ಉಳಿದ ಹಲಕೆಲವು ಓಡಿಹೋಗುವುದಕ್ಕೆ ಅವಕಾಶವಿಲ್ಲದೆ ಆಯುಧಗಳನ್ನು ಕೆಳಕ್ಕೆ ಹಾಕಿ ವಾದಾಕ್ರಾಂತರಾದರು. ಒಡೆಯರು ಅವರನ್ನು ಜೀವಂತ ಬಿಟ್ಟು, ಬಾಗಿಲನ್ನು ಮುದ್ರೆ ಮಾಡಿ ಹೊರಗೆ ಕಾದಿದ್ದ ಗೊಲ್ಲರು ಮುಂತಾದವರನ್ನು ಕೂಗಿ ಕರೆದು, ಸತ್ತವರ ಹೆಣಗಳನ್ನು ಹೊರಕ್ಕೆ ಸಾಗಿಸಿ, ಉಳಿದವರನ್ನು ಮರುದಿನ ಸಭೆಗೆ ಕರತರುವಂತೆ ಆಜ್ಞಾಪಿಸಿದರು.

ಮಾರನೆ ದಿನ ಸಭೆಯಲ್ಲಿ ವಿಚಾರಿಸಿದಾಗ, ಅವರು ತಿರುಚನಾಪಳ್ಳಿಯ ಅರಸನಿಂದ ಪ್ರೇರೇಪಿತರಾಗಿ ಬಂದರೆಂದು ತಿಳಿಯಿತು. ಆಗ ದೊರೆಗಳು “ನೀವು ತಿರುಚನಾಪಳ್ಳಿಗೆ ಹೋಗಿ ಇಲ್ಲಿ ನಡೆದದ್ದನ್ನು ನಿಮ್ಮ ದೊರೆಗೆ ತಿಳಿಸಿ, ಹೋಗಿ” ಎಂದು ಕಳುಹಿಸಿಬಿಟ್ಟರು.
*****
[ವಂಶರತ್ನಾಕರ ಪುಟ ೮೧; ವಂಶಾವಳಿ ಪುಟ ೭೭-೭೮]

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...