Home / ಕಥೆ / ಸಣ್ಣ ಕಥೆ / ಪಿರಿಯ ಪಟ್ಟಣದ ವೀರರಾಜ

ಪಿರಿಯ ಪಟ್ಟಣದ ವೀರರಾಜ

ಮೈಸೂರಿಗೆ ಪಶ್ಚಿಮಕ್ಕೆ ಕೊಡಗಿನ ಕಡೆಗೆ ಪಿರಿಯ ಪಟ್ಟಣ ವೆಂಬಲ್ಲಿ ಬಲವಾದ ಕೋಟೆಯನ್ನು ಕಟ್ಟಿಕೊಂಡು ಕೆಲವರು ದೊರೆಗಳು ಆಳುತ್ತಿದ್ದರು. ಪಿರಿಯರಾಜನೆಂಬಾತನೇ ಪೂರ್ವದಲ್ಲಿ ಮಣ್ಣಿನಿಂದಲೇ ಕಟ್ಟಿದ್ದ ಕೋಟೆಯನ್ನು ಕಲ್ಲಿನಿಂದ ಕಟ್ಟಿಸಿ ಪೇಟೆಯನ್ನು ಸ್ಥಾಪಿಸಿದನು. ಆ ಕಾರಣದಿಂದ ಅದಕ್ಕೆ ಪಿರಿಯಪಟ್ಟಣವೆಂದು ಹೆಸರು.

ಕಂಠೀರವ ಒಡೆಯರ ಕಾಲದಲ್ಲಿ ಅಲ್ಲಿ ವೀರರಾಜನೆಂಬಾತನು ಆಳುತ್ತಿದ್ದನು. ಆತನನ್ನು ಗೆಲ್ಲಲು ಮೊದಲು ದಳವಾಯಿಗಳು ಹೋಗಿದ್ದು, ಆತನು ಬಹಳವಾದ ತೊಂದರೆ ಕೊಡಲು ಹಿಂತಿರುಗಿ ಬಂದು ರಾಜರಿಗೆ ಅರಿಕೆ ಮಾಡಿದರು. ಕಂಠೀರವ ಒಡೆಯರೇ ಸ್ವಂತವಾಗಿ ಮುತ್ತಿಗೆಯನ್ನು ನಡೆಸಲು ಹೊರಟರು. ಛಲದಿಂದ ಮುತ್ತಿಗೆಯನ್ನು ಮುಂದುವರಿಸಿದರು. ವೀರರಾಜನು ಬಹಳ ಶೌರ್ಯದಿಂದ ಕಾದಿದರೂ ಶತ್ರುಗಳು ಲಗ್ಗೆ ಹತ್ತುವುದನ್ನು ನಿಲ್ಲಿಸಿಲಾಗದೆ ಹೋಯಿತು. ಆಗ ವೀರರಾಜನು ವೀರಸಂಕಲ್ಪವನ್ನು ಮಾಡಿ ಅರಮನೆಗೆ ಹೋಗಿ ತನ್ನ ಹೆಂಡಿರು ಮಕ್ಕಳನ್ನು ತನ್ನ ಕೈಯಿಂದಲೇ ಸಂಹರಿಸಿ ತರುವಾಯ ತಾನು ಹುಚ್ಚನಂತೆ ಕೋಟೆಯ ಹೊರವಳಯದಲ್ಲಿ ಸುಗ್ಗಿ ಕಾದಾಡುತ್ತ ಮಡಿದನು.

ಅನಂತರ ಕೋಟೆಯು ಕಂಠೀರವ ಒಡೆಯರಿಗೆ ಸುಲಭವಾಗಿ ಹಸ್ತಗತವಾಯಿತು.
*****
[ವಂಶರತ್ನಾಕರ ಪುಟ ೭೦; ವಂಶಾವಳಿ ಪುಟ ೭೧ ಹೊಸ ಗೆಜಟಿಯರ್‌ ಸಂ. ೫, ಪುಟ ೮೦೦]

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...