Home / ಕಥೆ / ಸಣ್ಣ ಕಥೆ / ಪಂಜುಗಳ ಯುದ್ಧ

ಪಂಜುಗಳ ಯುದ್ಧ

ಚಿಕ್ಕದೇವರಾಜ ಒಡೆಯರು ರಾಜರಾದಮೇಲೆ ಮರಾಟೆಯವರು ದಂಡೆತ್ತಿ ಬರುವುದಕ್ಕೆ ಮೊದಲಾಯಿತು. ಪಟ್ಟಕ್ಕೆ ಬಂದ ಮೇಲೆ ರಾಜರು ತಮ್ಮ ದಳವಾಯಿ ಕುಮಾರಯ್ಯನನ್ನೂ ಆತನ ಮಗ ದೊಡ್ಡಯ್ಯನನ್ನೂ ತಿರುಚನಾಪಳ್ಳಿಯನ್ನು ಗೆಲ್ಲಲು ಕೊಟ್ಟು ಕಳುಹಿಸಿದರು. ಆಗ ಅಕಸ್ಮಾತ್ತಾಗಿ ಮರಾಟೆಯವರ ಒಂದು ದಂಡು ನುಗ್ಗಿ ಬಂದು ಶ್ರೀರಂಗಪಟ್ಟಣದ ಸಮೀಪದಲ್ಲಿ ಕಲಸಗೆರೆ ಕೊತ್ತತ್ತಿ ಎಂಬ ಗ್ರಾಮದ ಬಳಿ ಮೈದಾನದಲ್ಲಿ ಇಳಿದುಕೊಂಡರು.

ಒಡೆಯರು ಆಗಲೇ ದೊಡ್ಡಯ್ಯನನ್ನು ಕೆಲವು ಸೇನೆಯೊಡನೆ ಶ್ರೀರಂಗಪಟ್ಟಣಕ್ಕೆ ಕಳುಹಿಸುವಂತೆ ದಳವಾಯಿ ಕುಮಾರಯ್ಯನಿಗೆ ಹೇಳಿ ಕಳುಹಿಸಿದ್ದರು. ದೊಡ್ಡಯ್ಯನು ಕಾವೇರೀ ಪುರದ ಕಣಿವೆಯ ಮಾರ್ಗವಾಗಿ ಬರುತ್ತಿದ್ದನು. ಅಷ್ಟರಲ್ಲಿ ಮೊರಾಟೆಯವರ ದಂಡು ಬಂದು ಪ್ರತ್ಯಕ್ಷವಾಗಲು ರಾಜರು ದೊಡ್ಡಯ್ಯನಿಗೆ “ಈ ಕಲಸಗೆರೆ ಕೊತ್ತತ್ತಿ ಗ್ರಾಮದ ಬಳಿ ಇಳಿದಿರುವ ಮರಾಟೆಯವರ ಸೈನ್ಯದ ಸಮೀಪಕ್ಕೆ ಯಾರೂ ಅರಿಯದಂತೆ ಸಂಚರಿಸತಕ್ಕದ್ದು; ಅಲ್ಲಿ ಸೇರಿದ ಕೂಡಲೆ ನಮ್ಮ ದಂಡಿನಲ್ಲಿರುವ ೨-೩ ಸಾವಿರ ದನದ ಕೊಂಬುಗಳಿಗೆ ಅಪಾಯವಿಲ್ಲದ ಹಾಗೆ ಪಂಜುಗಳನ್ನು ಕಟ್ಟಿ ಮೂರು ಕಡೆಯಿಂದಲೂ ಸೈನ್ಯವು ತಮ್ಮನ್ನು ಸುತ್ತಿಕೊಂಡಿತೆಂಬ ಭ್ರಾಂತಿಯು ಮರಾಟೆಯವರ ಮನಸ್ಸಿನಲ್ಲಿ ಹುಟ್ಟುವಂತೆ ಅವುಗಳನ್ನು ರಾತ್ರಿಯಲ್ಲಿ ಚದರಿಸತಕ್ಕದ್ದು; ಅವರು ಭ್ರಾಂತರಾದ ವೇಳೆಯಲ್ಲಿ ನೀವು ಅವರನ್ನು ತಾಗತಕ್ಕದ್ದು. ಸಮಯಕ್ಕೆ ಸಹಾಯಮಾಡುವಂತೆ ಶ್ರೀರಂಗಪಟ್ಟಣದಿಂದ ಬೇರೊಂದು ಸೈನ್ಯವನ್ನು ಕಳುಹಿಸುತ್ತಿದ್ದೇವೆ” ಎಂದು ಆಜ್ಞೆ ಮಾಡಿದರು. ದೊಡ್ಡಯ್ಯ ಮುಂತಾದ ಸೇನಾನಾಯಕರು ಅದರಂತೆಯೇ ದನಗಳಿಗೆ ಪಂಜುಗಳನ್ನು ಕಟ್ಟಿಸಿ ಮೂರು ದಿಕ್ಕಿಗೂ ಓಡಿಸಿ, ಉಳಿದ ದಿಕ್ಕಿನಿಂದ ಸಂಚರಿಸುತ್ತ ಮರಾಟೆಯವರ ಮೇಲೆ ಬಿದ್ದರು. ಮರಾಟೆಯವರಿಗೆ ದಿಕ್ಕು ತೋಚದಂತಾಗಿ ತಾರುಮಾರಾಗಿ ಪಲಾಯನಮಾಡಿದರು. ಬೆಳಕು ಹರಿದಾಗ ಅವರ ಉಗ್ರಾಣವೆಲ್ಲವೂ ದೊಡ್ಡಯ್ಯನ ಕೈಗೆ ಬಂತು. ಮರಾಟೆಯವರ ನಾಯಕರ ತಲೆಗಳನ್ನು ಕತ್ತರಿಸಿ ಸೈನಿಕರು ದೊಡ್ಡಯ್ಯನಿಗೆ ಸಮರ್ಪಿಸಿದರು. ದೊಡ್ಡಯ್ಯನು ಆ ತಲೆಗಳನ್ನು ತೆಗೆಸಿಕೊಂಡು ದೊರೆಗಳ ಸನ್ನಿಧಿಗೆ ಬಂದು ಅಡ್ಡ ಬಿದ್ದು ಎಲ್ಲ ಸಂಗತಿಯನ್ನೂ ಬಿನ್ನಯಿಸಿದನು. ಒಡೆಯರು ಆ ತಲೆಗಳಲ್ಲಿ ಶ್ರೀರಂಗಪಟ್ಟಣದ ಕೋಟೆ ಬಾಗಲಿಗೊಂದನ್ನೂ ಮೈಸೂರು ಕೋಟೆ ಬಾಗಲಿಗೊಂದನ್ನೂ ಕಟ್ಟಿಸಿದರು. ದೊಡ್ಡಯ್ಯ ಮುಂತಾದ ಸೇನಾ ನಾಯಕರಿಗೆ ಬಹಳ ಸನ್ಮಾನವು ದೊರೆಯಿತು.
*****
[ವಂಶರತ್ನಾಕರ, ಪುಟ ೧೦೮, ವಂಶಾವಳಿ ೧೧೪-೫, ವಿಲ್ಕ್ಸ್, ಪುಟ ೬೧]

Tagged:

Leave a Reply

Your email address will not be published. Required fields are marked *

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...