Home / ಕಥೆ / ಸಣ್ಣ ಕಥೆ / ಕೈಲಾಗದ ಅರಸರು

ಕೈಲಾಗದ ಅರಸರು

ಚಿಕ್ಕದೇವರಾಜ ಒಡೆಯರ ತರುವಾಯ ಅವರ ಪುತ್ರ ಕಂಠೀರವ ನರಸರಾಜರೆಂಬುವರು ಪಟ್ಟವನ್ನೇರಿದರು. ಇವರು ಜನ್ಮತಃ ಮೂಕರಾಗಿದ್ದರು. ತಂದೆಗೆ ಆಪ್ತನಾಗಿ ಮಂತ್ರಿ ಪದವಿಯಲ್ಲಿದ್ದ ತಿರುಮಲಾರ್ಯನು ಇರುವವರೆಗೂ ಆಡಳಿತವು ಭದ್ರವಾಗಿತ್ತು. ಆತನು ತೀರಿಹೋದ ಮೇಲೆ ಆಡಳಿತದಲ್ಲಿ ಬಿಗಿತಪ್ಪಿತು. ಮೂಕರಸರು ಆಳುತ್ತಿರುವಲ್ಲಿ ಅಧಿಕಾರಿಗಳಿಗೆ ಹಿಂದಿನಷ್ಟು ನಯಭಯಗಳಿರಲಿಲ್ಲ. ಆದರೂ ಚಿಕ್ಕದೇವರಾಜ ಒಡೆಯರ ನೆನಪು ಇನ್ನೂ ಬಲವಾಗಿತ್ತು. ಮೂಕರಸರು ಹತ್ತು ವರ್ಷಕಾಲ ಅನುಭವಿಸಿದರು.

ಮೂಕರಸರ ತರುವಾಯ ದೊಡ್ಡ ಕೃಷ್ಣರಾಜ ಒಡೆಯರೆಂಬ ಅವರ ಮಕ್ಕಳು ದೊರೆಗಳಾದರು. ಇವರಿಗೆ ಕೋಪವು ಬಲು ಬೇಗ ಬರುತ್ತಿತ್ತು; ಕೋಪ ಬಂದಾಗ ನ್ಯಾಯಾನ್ಯಾಯಗಳನ್ನು ನೋಡದೆ ಎದುರಾದವರನ್ನು ಅತಿಯಾಗಿ ಹಿಂಸೆಗೆ ಗುರಿಮಾಡಿ ಕ್ರೌರ್ಯವನ್ನು ತೋರುತ್ತಿದ್ದರು; ಆದರೆ ಪರಕ್ಷಣವೇ ಅವರನ್ನು ಕರೆಸಿ ಬಹುಮಾನವನ್ನು ಮಾಡುತ್ತಿದ್ದರು. ಸ್ಥಿರಬುದ್ದಿಯು ಈ ದೊರೆಗಿರಲಿಲ್ಲ; ಹೆಮ್ಮೆಯೂ ಲೋಲುಪ್ತಿಯ ಇದ್ದವು. ಹತ್ತೊಂಭತ್ತು ವರ್ಷಕಾಲ ರಾಜರಾಗಿದ್ದರೂ ಆಡಳಿತದ ವಿಚಾರಗಳನ್ನು ತಿಳಿಯಲು ಪ್ರಯತ್ನಿಸದ ಅವುಗಳೆಲ್ಲವನ್ನೂ ಮಂತ್ರಿಗಳಿಗೆ ಬಿಟ್ಟು ಕೊಟ್ಟು ತಾವು ಸುಖಗಳಲ್ಲಿ ಮಗ್ನರಾಗಿ ತಮ್ಮ ಸಮಾನರೇ ಇಲ್ಲವೆಂದು ತಿಳಿದಿದ್ದರು. ಅಧಿಕಾರಿಗಳೂ ರಾಜರಿಗೆ ಬೇಕಾದ ಸುಖಗಳನ್ನೊದಗಿಸುತ್ತ ಅವರಿಗೆ ರಾಜಕಾರ್ಯಗಳ ತೊಂದರೆಕೊಡದೆ ತಾವೇ ಕೆಲಸಕಾರ್ಯಗಳನ್ನು ನಿರ್ವಹಿಸುತ್ತಿದ್ದರು. ರಾಜರು ಕೇಳಿದಷ್ಟು ಹಣ ಬೊಕ್ಕಸದಿಂದ ಬರುತ್ತಿತ್ತು. ಆದ್ದರಿಂದ ಈ ರಾಜರು ಸಂಗೀತ, ಸಾಹಿತ್ಯ, ನಾಚು, ರಂಗು ಮುಂತಾದುವುಗಳಲ್ಲಿಯೇ ಆಸಕ್ತರಾಗಿದ್ದರು. ಮೃಗಶಾಲೆಗೇ ವರ್ಷಕ್ಕೆ ಒಂದು ಲಕ್ಷ ವರಹಗಳನ್ನು ಇವರು ವೆಚ್ಚ ಮಾಡುತ್ತಿದ್ದರು. ಆ ಮೃಗ ಶಾಲೆಯಲ್ಲಿ ಹುಲಿ, ಕರಡಿ, ಸಿವಂಗಿ, ಕಾಡೆಮ್ಮೆ, ಹುಲ್ಲೆ ಕರು, ಕಡವೆ, ಸಾರಂಗ, ಕಪಿ, ಗಿಣಿ, ಮಲೆಸೇನ, ಕಾಳಿಂಗ, ನವಿಲು, ಪುನುಗಿನಬೆಕ್ಕು, ಪಾರಿವಾಳ, ಗೌಜಹಕ್ಕಿ, ಲಾವಕನಹಕ್ಕಿ, ಗಿಡಗ, ಭೈರಿ ಮುಂತಾದ ನಾನಾ ಬಗೆಯ ಮೃಗಗಳಿದ್ದವು. ಈ ರಾಜರು ಈ ಮೃಗಗಳ ಸಹವಾಸದಲ್ಲಿಯೂ ತಮ್ಮ ಸುಖವಿನೋದಗಳಲ್ಲಿಯೈ ಕಾಲ ಕಳೆಯುತ್ತ ಬೊಕ್ಕಸದ ಹಣವನ್ನು ವೆಚ್ಚ ಮಾಡಿದರು.

ಈ ದೊಡ್ಡ ಕೃಷ್ಣರಾಜ ಒಡೆಯರವರಿಗೆ ಮಕ್ಕಳಿರಲಿಲ್ಲ. ಅವರ ಹಿರಿಯ ಕುಟುಂಬ ದೇವಾಜಮ್ಮಣ್ಣಿಯವರು ರಾಜ್ಯದ ಸೂತ್ರಗಳನ್ನು ಕೈಹಿಡಿದು ದತ್ತುಮಾಡಿಕೊಳ್ಳುವ ಯೋಚನೆಮಾಡಿದರು. ಮುಂದೆ ಆಳಿದ ಚಾಮರಾಜ ಒಡೆಯರೆಂಬವರೂ ಚಿಕ್ಕ ಕೃಷ್ಣರಾಜ ರೆಂಬವರೂ ಗೊಂಬೆಗಳಂತಾದರು.
*****

Tagged:

Leave a Reply

Your email address will not be published. Required fields are marked *

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...