Home / ಕಥೆ / ಸಣ್ಣ ಕಥೆ / ಕೈಲಾಗದ ಅರಸರು

ಕೈಲಾಗದ ಅರಸರು

ಚಿಕ್ಕದೇವರಾಜ ಒಡೆಯರ ತರುವಾಯ ಅವರ ಪುತ್ರ ಕಂಠೀರವ ನರಸರಾಜರೆಂಬುವರು ಪಟ್ಟವನ್ನೇರಿದರು. ಇವರು ಜನ್ಮತಃ ಮೂಕರಾಗಿದ್ದರು. ತಂದೆಗೆ ಆಪ್ತನಾಗಿ ಮಂತ್ರಿ ಪದವಿಯಲ್ಲಿದ್ದ ತಿರುಮಲಾರ್ಯನು ಇರುವವರೆಗೂ ಆಡಳಿತವು ಭದ್ರವಾಗಿತ್ತು. ಆತನು ತೀರಿಹೋದ ಮೇಲೆ ಆಡಳಿತದಲ್ಲಿ ಬಿಗಿತಪ್ಪಿತು. ಮೂಕರಸರು ಆಳುತ್ತಿರುವಲ್ಲಿ ಅಧಿಕಾರಿಗಳಿಗೆ ಹಿಂದಿನಷ್ಟು ನಯಭಯಗಳಿರಲಿಲ್ಲ. ಆದರೂ ಚಿಕ್ಕದೇವರಾಜ ಒಡೆಯರ ನೆನಪು ಇನ್ನೂ ಬಲವಾಗಿತ್ತು. ಮೂಕರಸರು ಹತ್ತು ವರ್ಷಕಾಲ ಅನುಭವಿಸಿದರು.

ಮೂಕರಸರ ತರುವಾಯ ದೊಡ್ಡ ಕೃಷ್ಣರಾಜ ಒಡೆಯರೆಂಬ ಅವರ ಮಕ್ಕಳು ದೊರೆಗಳಾದರು. ಇವರಿಗೆ ಕೋಪವು ಬಲು ಬೇಗ ಬರುತ್ತಿತ್ತು; ಕೋಪ ಬಂದಾಗ ನ್ಯಾಯಾನ್ಯಾಯಗಳನ್ನು ನೋಡದೆ ಎದುರಾದವರನ್ನು ಅತಿಯಾಗಿ ಹಿಂಸೆಗೆ ಗುರಿಮಾಡಿ ಕ್ರೌರ್ಯವನ್ನು ತೋರುತ್ತಿದ್ದರು; ಆದರೆ ಪರಕ್ಷಣವೇ ಅವರನ್ನು ಕರೆಸಿ ಬಹುಮಾನವನ್ನು ಮಾಡುತ್ತಿದ್ದರು. ಸ್ಥಿರಬುದ್ದಿಯು ಈ ದೊರೆಗಿರಲಿಲ್ಲ; ಹೆಮ್ಮೆಯೂ ಲೋಲುಪ್ತಿಯ ಇದ್ದವು. ಹತ್ತೊಂಭತ್ತು ವರ್ಷಕಾಲ ರಾಜರಾಗಿದ್ದರೂ ಆಡಳಿತದ ವಿಚಾರಗಳನ್ನು ತಿಳಿಯಲು ಪ್ರಯತ್ನಿಸದ ಅವುಗಳೆಲ್ಲವನ್ನೂ ಮಂತ್ರಿಗಳಿಗೆ ಬಿಟ್ಟು ಕೊಟ್ಟು ತಾವು ಸುಖಗಳಲ್ಲಿ ಮಗ್ನರಾಗಿ ತಮ್ಮ ಸಮಾನರೇ ಇಲ್ಲವೆಂದು ತಿಳಿದಿದ್ದರು. ಅಧಿಕಾರಿಗಳೂ ರಾಜರಿಗೆ ಬೇಕಾದ ಸುಖಗಳನ್ನೊದಗಿಸುತ್ತ ಅವರಿಗೆ ರಾಜಕಾರ್ಯಗಳ ತೊಂದರೆಕೊಡದೆ ತಾವೇ ಕೆಲಸಕಾರ್ಯಗಳನ್ನು ನಿರ್ವಹಿಸುತ್ತಿದ್ದರು. ರಾಜರು ಕೇಳಿದಷ್ಟು ಹಣ ಬೊಕ್ಕಸದಿಂದ ಬರುತ್ತಿತ್ತು. ಆದ್ದರಿಂದ ಈ ರಾಜರು ಸಂಗೀತ, ಸಾಹಿತ್ಯ, ನಾಚು, ರಂಗು ಮುಂತಾದುವುಗಳಲ್ಲಿಯೇ ಆಸಕ್ತರಾಗಿದ್ದರು. ಮೃಗಶಾಲೆಗೇ ವರ್ಷಕ್ಕೆ ಒಂದು ಲಕ್ಷ ವರಹಗಳನ್ನು ಇವರು ವೆಚ್ಚ ಮಾಡುತ್ತಿದ್ದರು. ಆ ಮೃಗ ಶಾಲೆಯಲ್ಲಿ ಹುಲಿ, ಕರಡಿ, ಸಿವಂಗಿ, ಕಾಡೆಮ್ಮೆ, ಹುಲ್ಲೆ ಕರು, ಕಡವೆ, ಸಾರಂಗ, ಕಪಿ, ಗಿಣಿ, ಮಲೆಸೇನ, ಕಾಳಿಂಗ, ನವಿಲು, ಪುನುಗಿನಬೆಕ್ಕು, ಪಾರಿವಾಳ, ಗೌಜಹಕ್ಕಿ, ಲಾವಕನಹಕ್ಕಿ, ಗಿಡಗ, ಭೈರಿ ಮುಂತಾದ ನಾನಾ ಬಗೆಯ ಮೃಗಗಳಿದ್ದವು. ಈ ರಾಜರು ಈ ಮೃಗಗಳ ಸಹವಾಸದಲ್ಲಿಯೂ ತಮ್ಮ ಸುಖವಿನೋದಗಳಲ್ಲಿಯೈ ಕಾಲ ಕಳೆಯುತ್ತ ಬೊಕ್ಕಸದ ಹಣವನ್ನು ವೆಚ್ಚ ಮಾಡಿದರು.

ಈ ದೊಡ್ಡ ಕೃಷ್ಣರಾಜ ಒಡೆಯರವರಿಗೆ ಮಕ್ಕಳಿರಲಿಲ್ಲ. ಅವರ ಹಿರಿಯ ಕುಟುಂಬ ದೇವಾಜಮ್ಮಣ್ಣಿಯವರು ರಾಜ್ಯದ ಸೂತ್ರಗಳನ್ನು ಕೈಹಿಡಿದು ದತ್ತುಮಾಡಿಕೊಳ್ಳುವ ಯೋಚನೆಮಾಡಿದರು. ಮುಂದೆ ಆಳಿದ ಚಾಮರಾಜ ಒಡೆಯರೆಂಬವರೂ ಚಿಕ್ಕ ಕೃಷ್ಣರಾಜ ರೆಂಬವರೂ ಗೊಂಬೆಗಳಂತಾದರು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...