Home / ಕಥೆ / ಸಣ್ಣ ಕಥೆ / ಸರ್ವಾಧಿಕಾರಿ ನಂಜರಾಜಯ್ಯ

ಸರ್ವಾಧಿಕಾರಿ ನಂಜರಾಜಯ್ಯ

೧೭೩೪ರಲ್ಲಿ ಚಾಮರಾಜ ಒಡೆಯರನ್ನು ಹಿಡಿದು ಕಬ್ಬಾಳ ದುರ್ಗಕ್ಕೆ ಕಳುಹಿಸಿ ರಾಜದ್ರೋಹವನ್ನು ಮಾಡಿದವರು ಇಬ್ಬರು ಜ್ಞಾತಿಗಳು-ದಳವಾಯಿ ದೇವರಾಜಯ್ಯ ಮತ್ತು ಸರ್ವಾಧಿಕಾರಿ ನಂಜರಾಜಯ್ಯ.

ಬಾಲಕರಾದ ಇಮ್ಮಡಿ ಕೃಷ್ಣರಾಜ ಒಡೆಯರನ್ನು ಪಟ್ಟದಲ್ಲಿ ಕೂರಿಸಿದ ಮೇಲೆ ಈರ್ವರೂ ಪ್ರಧಾನಿಯ ಕೆಲಸದಲ್ಲಿದ್ದ ಕನ್ನಂಬಾಡಿ ವೆಂಕಟಪತಯ್ಯನೆಂಬಾತನನ್ನು ಸೇರಿಸಿಕೊಂಡು ಆಡಳಿತವನ್ನು ಮೊದಲಿಟ್ಟರು. ಮೂವರೂ ಸೇರಿ ಅರಮನೆಯ ಆದಾಯದಲ್ಲಿ ಸಾಧ್ಯವಾದಷ್ಟು ಹಣವನ್ನು ತಾವೇ ಸ್ವಂತ ವೆಚ್ಚಕ್ಕಾಗಿ ಉಪಯೋಗಿಸಿಕೊಂಡುದಲ್ಲದೆ ತನ್ನ ಊಳಿಗದವರು ಲಂಚ ತಿಂದು ಶಿಫಾರಸುಮಾಡಿದವರಿಗೆ ಕೆಲಸಗಳನ್ನು ಮಾಡಿಸುತ್ತಲಿದ್ದರು. ಅಯೋಗ್ಯರಾದವರು ಅಧಿಕಾರಿಗಳಾದುದಲ್ಲದೆ ರಾಜ್ಯದ ಆದಾಯವು ಈ ಮೂವರ ಮತ್ತು ಅವರ ಅನುಚರರ ಪಾಲಾಗುತ್ತಿತ್ತು.

ಹೀಗೆ ೫-೬ ವರ್ಷಗಳು ನಡೆದವು. ವಂಚನೆಯಿಂದ ಮೂವರೂ ಹಣವನ್ನು ಸಂಪಾದಿಸಿದ ನಂಜರಾಜಯ್ಯನೂ ಐಶ್ವರ್ಯವನ್ನು ಸೇಕರಿಸಿಕೊಂಡಿದ್ದನು. ಆತನಿಗೆ ಮಕ್ಕಳಿರಲಿಲ್ಲ. ಅಲ್ಲದೆ ಅಂತ್ಯಕಾಲವು ಸಮೀಪವಾಯಿತು. ಆಗ ನಂಜರಾಜಯ್ಯನು ತಾನು ಮಾಡಿದ ನೀಚಕಾರ್ಯಕ್ಕೆ ಮನಸ್ಸಿನಲ್ಲಿ ನೊಂದುಕೊಂಡನು. ತಾನು ಗಳಿಸಿಟ್ಟ ದ್ರವ್ಯವು ರಾಜರದೇ ಆಗಿದ್ದುದರಿಂದ ತನ್ನ ಕುಟುಂಬ ಚಂದಾಯಮ್ಮಣ್ಣಿಯ ಜೀವನಕ್ಕೆ ಮಾತ್ರ ಸ್ವಲ್ಪ ಉಳಿಸಿಕೊಂಡು ಉಳಿದ ೨ ಲಕ್ಷ ವರಹಗಳಷ್ಟು ಧನವನ್ನು ದೊರೆಗಳಿಗೆ ತಂದೊಪ್ಪಿಸಿದನು. ಮಾತುಶ್ರೀಯವರನ್ನು ಕಂಡು ಯಥಾರ್ಥವನ್ನು ತಿಳಿಸಿ ದುಷ್ಟರ ವಿಷಯವಾಗಿ ಎಚ್ಚರಿಕೆ ಕೊಟ್ಟು ಪಶ್ಚಾತ್ತಾಪಡುತ್ತ ಈತನು ೧೭೩೯ರಲ್ಲಿ ಶ್ರೀರಂಗಪಟ್ಟಣದಲ್ಲಿಯೇ ಕಾಲವಾದನು. ಸಾಯುವ ಕಾಲದಲ್ಲಿ “ನನ್ನ ತರುವಾಯು ನನ್ನ ಪದವಿಗೆ ದಳವಾಯಿ ದೇವರಾಜಯ್ಯನ ತಮ್ಮ ಕರಾಚೂರಿ ನಂಜರಾಜನು ಬಂದರೆ ತೊಂದರೆಯೇ ಸಂಭವಿಸುವುದು” ಎಂದು ಎಚ್ಚರಿಸಿದ್ದನು. ಆದರೂ ಸರ್ವಾಧಿಕಾರಿತನವು ಆ ಕರಾಚರಿ ನಂಜರಾಜಯ್ಯನಿಗೇ ಪ್ರಾಪ್ತವಾಯಿತು.
*****
[ವಂಶರತ್ನಾಕರ ಪುಟ ೧೬೫ ; ವಂಶಾವಳಿ-ಪುಟ ೧೭೫-೧೭೬; ಮತ್ತು ವಿಲ್ಕ್ಸ್, ಮುಂದಿನ ಕಥೆಗಳಲ್ಲಿ ವಿಲ್ಕ್ಸ್ ಗ್ರಂಥವನ್ನೇ ಹೆಚ್ಚಾಗಿ ಅವಲಂಬಿಸಿದೆ]

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...