Home / ಕವನ / ಕವಿತೆ / ನನ್ನ ಜನಗಳು

ನನ್ನ ಜನಗಳು

ಕೈಯಲ್ಲಿ ಕೋವಿ ಹಿಡಿದವರು
ನನ್ನ ಜನಗಳಲ್ಲ ಸ್ವಾಮಿ
ಭತ್ತದ ಗದ್ದೆಯಲಿ ನಡು ಬಗ್ಗಿಸಿ
ಕುಡುಗೋಲು ಹಿಡಿದವರು ಅವರು.
ನನ್ನವರ ಎದೆಯಲ್ಲಿ ಕಾವ್ಯವಿದೆ
ಎತ್ತಿನ ಗೆಜ್ಜೆನಾದ, ಹಂತಿ ಹಾಡುಗಳಿವೆ
ನೋವು ಮರೆತು ಹಾಡುತ್ತಾರೆ.
ಸಂಘರ್‍ಷದ ಬದುಕು ಬದುಕುತ್ತಾರೆ.
ಮನದಲ್ಲಿ ಛಲ ಹೊತ್ತ ನನ್ನವರ
ಎದೆ ತುಂಬ ಗಾಯಗಳು.
ಹರಿದು ಸೋರಿದ ಕೀವು ರಕ್ತ
ಹಾಡಿನ ಹೊನಲಾಗಿ ಹರಿಯುವವು.
ದೀಪವಿಲ್ಲದ ಕತ್ತಲ-ಹಳ್ಳಿಗಳಲ್ಲಿ
ಅಜ್ಞಾತ ಬದುಕು ಬದುಕುತ್ತಿರುವವರು
ಕೊಡ ನೀರಿಗಾಗಿ ಮೈಲು ನಡೆದವರು.
ಅವರು ಆತ್ಮವಿಶ್ವಾಸದ ಪರ್‍ವತಗಳು ಸ್ವಾಮಿ
ನನ್ನ ಜನಗಳು ಕನಸುಗಾರರು
ಪ್ರಾಮಾಣಿಕ ಬದುಕು ಬದುಕುತ್ತಿರುವವರು
ಸರಳತೆಯ ಜೀವನ ಸಾಗಿಸುತ್ತಿರುವವರು.
ನವಿಲ ಗರಿಯಂಥ ಹುಲ್ಲ ಗರಿಕೆಗಳ
ಹೊತ್ತ ಗುಡಿಸಲುಗಳ ಹೊದಿಕೆಗಳ ಕೆಳಗೆ
ಸಂತರ ನಡೆನುಡಿಗಳು ಅವರದು ಸ್ವಾಮಿ,
ಕನಸಿನ ಲೋಕಕ್ಕೆ ಅವರು
ಮೆಟ್ಟಿಲುಗಳ ಕಟ್ಟಿದವರು
ಕನಸು ಕಮರಿದರೂ,
ಸ್ವಾಭಿಮಾನದ ಉನ್ನತ ಬದುಕು
ಪ್ರೀತಿಸಿದವರು.
ನನ್ನವರ ಬೇಡಿಕೆಗಳು ಸೀಮಿತ
ಮಣ್ಣ ಹಣತೆಯ ಆಯುಷ್ಯ ಅವರದು
ಆದರೂ ಬೆಳಕು ಅನಂತಕಾಲ ಸ್ವಾಮಿ.
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...