Home / ಕವನ / ಕವಿತೆ / ನನ್ನ ಜನಗಳು

ನನ್ನ ಜನಗಳು

ಕೈಯಲ್ಲಿ ಕೋವಿ ಹಿಡಿದವರು
ನನ್ನ ಜನಗಳಲ್ಲ ಸ್ವಾಮಿ
ಭತ್ತದ ಗದ್ದೆಯಲಿ ನಡು ಬಗ್ಗಿಸಿ
ಕುಡುಗೋಲು ಹಿಡಿದವರು ಅವರು.
ನನ್ನವರ ಎದೆಯಲ್ಲಿ ಕಾವ್ಯವಿದೆ
ಎತ್ತಿನ ಗೆಜ್ಜೆನಾದ, ಹಂತಿ ಹಾಡುಗಳಿವೆ
ನೋವು ಮರೆತು ಹಾಡುತ್ತಾರೆ.
ಸಂಘರ್‍ಷದ ಬದುಕು ಬದುಕುತ್ತಾರೆ.
ಮನದಲ್ಲಿ ಛಲ ಹೊತ್ತ ನನ್ನವರ
ಎದೆ ತುಂಬ ಗಾಯಗಳು.
ಹರಿದು ಸೋರಿದ ಕೀವು ರಕ್ತ
ಹಾಡಿನ ಹೊನಲಾಗಿ ಹರಿಯುವವು.
ದೀಪವಿಲ್ಲದ ಕತ್ತಲ-ಹಳ್ಳಿಗಳಲ್ಲಿ
ಅಜ್ಞಾತ ಬದುಕು ಬದುಕುತ್ತಿರುವವರು
ಕೊಡ ನೀರಿಗಾಗಿ ಮೈಲು ನಡೆದವರು.
ಅವರು ಆತ್ಮವಿಶ್ವಾಸದ ಪರ್‍ವತಗಳು ಸ್ವಾಮಿ
ನನ್ನ ಜನಗಳು ಕನಸುಗಾರರು
ಪ್ರಾಮಾಣಿಕ ಬದುಕು ಬದುಕುತ್ತಿರುವವರು
ಸರಳತೆಯ ಜೀವನ ಸಾಗಿಸುತ್ತಿರುವವರು.
ನವಿಲ ಗರಿಯಂಥ ಹುಲ್ಲ ಗರಿಕೆಗಳ
ಹೊತ್ತ ಗುಡಿಸಲುಗಳ ಹೊದಿಕೆಗಳ ಕೆಳಗೆ
ಸಂತರ ನಡೆನುಡಿಗಳು ಅವರದು ಸ್ವಾಮಿ,
ಕನಸಿನ ಲೋಕಕ್ಕೆ ಅವರು
ಮೆಟ್ಟಿಲುಗಳ ಕಟ್ಟಿದವರು
ಕನಸು ಕಮರಿದರೂ,
ಸ್ವಾಭಿಮಾನದ ಉನ್ನತ ಬದುಕು
ಪ್ರೀತಿಸಿದವರು.
ನನ್ನವರ ಬೇಡಿಕೆಗಳು ಸೀಮಿತ
ಮಣ್ಣ ಹಣತೆಯ ಆಯುಷ್ಯ ಅವರದು
ಆದರೂ ಬೆಳಕು ಅನಂತಕಾಲ ಸ್ವಾಮಿ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...