Home / ಕವನ / ಕವಿತೆ / ಪ್ರಾರ್‍ಥನೆ

ಪ್ರಾರ್‍ಥನೆ

ನಾನು ಯಾವ ನೆಲದಲ್ಲಾದರೂ ನಡೆದಾಡಲಿ
ನನ್ನ ಮಾತೃಭೂಮಿಯ ಮಣ್ಣವಾಸನೆಯೇ ಸೂಸಿಬರಲಿ
ನಾನು ಕಾಶ್ಮೀರ ಕಣಿವೆಯ ಸುವಾಸನೆ ಮೂಸಿರುವೆನು.
ದ್ವೇಷದ ವಿಷಗಾಳಿ ವರ್‍ಜವಾಗಿದೆ ನನಗೆ
ಸ್ಫೋಟಕ ಮದ್ದಿನ ಘಮಟು ವಾಸನೆ ಒಗ್ಗಲಾರದು
ನನಗೆ ಹಿಮಚ್ಛಾದಿತ ಹಿಮಾಲಯವೇ ಅಚ್ಚು ಮೆಚ್ಚು
ಆದರೂ ಅವರೇಕೆ ಹೇಳುತ್ತಿದ್ದಾರೆ?
ನನಗೆ ರಾಸ ಪರ್‍ವತವೇ ಪ್ರಿಯವೆಂದು.

ನಾನು ಹಜ್ ಯಾತ್ರೆ ಕೈಕೊಂಡರೂ
ಮದೀನಾದ ನೆಲದಲ್ಲಿ ಪ್ರಾರ್‍ಥಿಸಿದರೂ
ಭಾರತದ ಏಳೆಗಾಗಿಯೇ ಪ್ರಾರ್‍ಥಿಸುವೆನು.
ನನ್ನ ದೇಶದ ಸುಖ ಸಮೃದ್ಧಿಯನೇ ಬಯಸುವೆನು
ನನಗೆ ಆಡಲು ಮಡಿಲು ನೀಡಿದ
ನೀರು, ಆಹಾರ, ಗಾಳಿ ಕೊಟ್ಟು ಪೋಷಿಸಿದ
ಮಾತೃ ಭೂಮಿಯ ಶ್ರೇಯಸ್ಸು ಬಯಸುವೆ.
ನನ್ನ ದೇಹದ ಹನಿ ಹನಿ ರಕ್ತದಲ್ಲೂ
ಭಾರತದ ಹೆಸರೇ ಪ್ರತಿಧ್ವನಿಸುತ್ತಿರುತ್ತದೆ.
ಆದರೂ ಅವರೇಕೆ ಹೇಳುತ್ತಿದ್ದಾರೆ
ನಾನು ಗಡಿಯಾಚೆಯವಳೆಂದು?.

ನನ್ನ ದೇಶದಲ್ಲಿ ನಿರಂತರ ಹರಿಯುತ್ತಿವೆ
ಗಂಗೆ, ಯಮುನೆ, ಕೃಷ್ಣ, ಕಾವೇರಿಯರು
ಪ್ರೀತಿಯ ತಾಜಮಹಲು ನನ್ನ ದೇಶದಲ್ಲಿಯೇ ಇದೆ.
ಚಾರ್‌ಮಿನಾರ್, ಕುತುಬ್‌ ಮೀನಾರ್‌ಗಳು.
ಬದುಕಿರುವೆನು ನಾನು ಕಾಶೀ, ಮಥುರಾ
ಅಜ್ಮೀರ್‌ಬಾಬಾನ ಸೌಹಾರ್‍ದ ನೆಲೆಗಳಲ್ಲಿ
ಸೌಹಾರ್‍ದ ತಾಣ ಸುಂದರ ಹೂಬನ
ಪೋಷಿಸಿದವಳು ನಾನು.
ಆದರೂ ಅವರೇಕೆ ಹೇಳುತ್ತಿದ್ದಾರೆ
ನಾನು ಕೋಮಲ ಹೂಗಳ ದ್ವೇಷಿಯೆಂದು?

ನಾನು ಲೋಕದ ಯಾವ
ಮೂಲೆಯಲ್ಲಾದರೂ ಕೊನೆಯುಸಿರೆಳೆಯಲಿ
ದೂರದಿಂದಲಾದರೂ ನನ್ನ ಭಾರತದ
ಗಡಿ ಕಾಣುತ್ತಿರಲಿ ಎಂದು ಬಯಸುವೆನು.
ಯಾವ ದೇಶದ ನೀರೇ ಕುಡಿಯಲಿ
ಪವಿತ್ರ ಝಂಝಂ ಸೇವಿಸಿದರೂ ಸಹ
ಅದರಲ್ಲಿ ಗಂಗೆಯ ಸ್ವಾದ ಹುಡುಕುವೆನು.
ಪ್ರಾರ್‍ಥನೆಗೆ ಕೈ ಎತ್ತಿದ ಪ್ರತಿ ಬಾರಿಯೂ
ನನ್ನ ದೇಶದ ಎಳ್ಗೆಯನೇ ಬಯಸುವೆನು.
ಆದರೂ ಅವರೇಕೆ ಹೇಳುತ್ತಿದ್ದಾರೆ
ನಿನ್ನ ಬದ್ಧತೆಯನ್ನು ಸಾಬೀತು ಪಡಿಸು ಎಂದು?
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...